AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪರ್ಕಕ್ಕೆ ಸಿಗುತ್ತಿಲ್ಲ 2 ಸಾವಿರ BMTC ಸಿಬ್ಬಂದಿ.. ಶಿಸ್ತು ಕ್ರಮ ಕೈಗೊಳ್ಳಲು ನಿಗಮಾ ನಿರ್ಧಾರ

BMTC ಮಹಾಮಾರಿ ಕೊರೊನಾ ಬಳಿಕ BMTCಯಲ್ಲಿ ಸುಮಾರು 2 ಸಾವಿರ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇಲಾಖೆಗೆ ಮಾಹಿತಿ ನೀಡದೆ ರಜೆಗೆ ಸೂಕ್ತ ಕಾರಣವೂ ತಿಳಿಸದೆ ಸಂಪರ್ಕದಿಂದ ದೂರ ಉಳಿದಿದ್ದಾರೆ. ಹಾಗಾಗಿ BMTC ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಿದೆ.

ಸಂಪರ್ಕಕ್ಕೆ ಸಿಗುತ್ತಿಲ್ಲ 2 ಸಾವಿರ BMTC ಸಿಬ್ಬಂದಿ.. ಶಿಸ್ತು ಕ್ರಮ ಕೈಗೊಳ್ಳಲು ನಿಗಮಾ ನಿರ್ಧಾರ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Feb 05, 2021 | 8:09 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಬಳಿಕ BMTCಯಲ್ಲಿ ಸುಮಾರು 2 ಸಾವಿರ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇಲಾಖೆಗೆ ಮಾಹಿತಿ ನೀಡದೆ ರಜೆಗೆ ಸೂಕ್ತ ಕಾರಣವೂ ತಿಳಿಸದೆ ಸಂಪರ್ಕದಿಂದ ದೂರ ಉಳಿದಿದ್ದಾರೆ. ಹಾಗಾಗಿ BMTC ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಿದೆ. ಇಲಾಖೆ ನಿರ್ಧಾರಕ್ಕೆ ಸಿಬ್ಬಂದಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. KSRTCಕೊವಿಡ್ ವೇಳೆ ರಜೆ ಕೊಡುವ ಪದ್ಧತಿಯನ್ನ ತಂದಿತ್ತು. ರಜೆ ಬಯಸುವ ಸಿಬ್ಬಂದಿ ವೇತನ ರಹಿತ ರಜೆ ಪಡೆಯಬಹುದು ಎಂದು ಕೊರೊನಾ ಸಮಯದಲ್ಲಿ ನಿಯಮವೊಂದನ್ನು ಜಾರಿಗೆ ತಂದಿತ್ತು. ಆದ್ರೆ ಬಿಎಂಟಿಸಿಯಲ್ಲಿ ಈ ರೀತಿಯ ಯಾವುದೇ ನಿಯಮ ಇಲ್ಲ. ಆದರೂ ಕಾರಣ ನೀಡದೆ 2 ಸಾವಿರ ಸಿಬ್ಬಂದಿ ರಜೆ ಹಾಕಿದ್ದಾರೆ.

ಇಷ್ಟು ದಿನ ರಜೆಯಲ್ಲಿರುವ ಸಿಬ್ಬಂದಿಗೆ BMTC ಕಾದು ನೋಡಿತ್ತು. ಆದ್ರೆ ಅವರ ಸುಳಿವು ಇಲ್ಲದ ಕಾರಣ ಈಗ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಕೊವಿಡ್ ಬಳಿಕ ಬಿಎಂಟಿಸಿಯ 6500 ಬಸ್‌ಗಳ ಪೈಕಿ ಕೇವಲ 4500ಸಾವಿರ ಬಸ್‌ಗಳು ಸಂಚಾರ ಆರಂಭಿಸಿದ್ವು. ಈಗ ಬಸ್‌ಗಳ ಸಂಚಾರ ಸಂಖ್ಯೆ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಸಂಪರ್ಕಿಸಲು ಬಿಬಿಎಂಪಿಯಿಂದ ನಿರಂತರ ಪ್ರಯತ್ನ ನಡೆಯುತ್ತಿದೆ.

ಕೆಲವರು ಸಂಪರ್ಕಕ್ಕೆ ಸಿಗುತ್ತಿಲ್ಲ ಇದರಲ್ಲಿ ಕೆಲವು ಸಿಬ್ಬಂದಿ ಇನ್ನೂ ಬಿಎಂಟಿಸಿಯ ಸಂಪರ್ಕಕ್ಕೆ ಸಿಗುತ್ತಿಲ್ಲ. ರಜೆ ಹಾಕುತ್ತಿರುವುದಕ್ಕೆ ಸೂಕ್ತ ಕಾರಣವನ್ನೂ ನೀಡಿಲ್ಲ. ಹೀಗಾಗಿ ನಿಗಮ, ಅವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಆದ್ರೆ ಬಿಎಂಟಿಸಿ ನಿರ್ಧಾರವನ್ನು ಸಿಬ್ಬಂದಿ ತೀವ್ರವಾಗಿ ಖಂಡಿಸಿದ್ದಾರೆ. ಈಗಾಗಲೇ ಕೆಲಸಕ್ಕೆ ಹಾಜರಾಗುತ್ತಿರುವವರಿಗೆ ಡ್ಯೂಟಿ ಸಿಗುತ್ತಿಲ್ಲ. ಸಿಬ್ಬಂದಿ ರಜೆ ಕಟ್ ಮಾಡಿಕೊಂಡು ವೇತನವಿಲ್ಲದೆ ಕಳಿಸ್ತಿದ್ದಾರೆ. ಈಗಾಗಲೇ ಬಿಎಂಟಿಸಿ ನೌಕರರ ಎಲ್ಲ ರಜೆಗಳು ಖಾಲಿಯಾಗಿವೆ. ಇಂದು ಬಿಎಂಟಿಸಿ ಅಧಃಪತನವೆಂದು ಸಾರಿಗೆ ಮುಖಂಡರು ಕಿಡಿ ಕಾರಿದ್ದಾರೆ.

ನೌಕರರ ಸಂಬಳಕ್ಕಾಗಿ ಸಾಲಮಾಡಲು ಹೊರಟಿರುವ BMTC; 643 ಹೊಸ ಬಸ್ ಖರೀದಿಗೆ ಟೆಂಡರ್

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ