AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪರ್ಕಕ್ಕೆ ಸಿಗುತ್ತಿಲ್ಲ 2 ಸಾವಿರ BMTC ಸಿಬ್ಬಂದಿ.. ಶಿಸ್ತು ಕ್ರಮ ಕೈಗೊಳ್ಳಲು ನಿಗಮಾ ನಿರ್ಧಾರ

BMTC ಮಹಾಮಾರಿ ಕೊರೊನಾ ಬಳಿಕ BMTCಯಲ್ಲಿ ಸುಮಾರು 2 ಸಾವಿರ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇಲಾಖೆಗೆ ಮಾಹಿತಿ ನೀಡದೆ ರಜೆಗೆ ಸೂಕ್ತ ಕಾರಣವೂ ತಿಳಿಸದೆ ಸಂಪರ್ಕದಿಂದ ದೂರ ಉಳಿದಿದ್ದಾರೆ. ಹಾಗಾಗಿ BMTC ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಿದೆ.

ಸಂಪರ್ಕಕ್ಕೆ ಸಿಗುತ್ತಿಲ್ಲ 2 ಸಾವಿರ BMTC ಸಿಬ್ಬಂದಿ.. ಶಿಸ್ತು ಕ್ರಮ ಕೈಗೊಳ್ಳಲು ನಿಗಮಾ ನಿರ್ಧಾರ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Feb 05, 2021 | 8:09 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಬಳಿಕ BMTCಯಲ್ಲಿ ಸುಮಾರು 2 ಸಾವಿರ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇಲಾಖೆಗೆ ಮಾಹಿತಿ ನೀಡದೆ ರಜೆಗೆ ಸೂಕ್ತ ಕಾರಣವೂ ತಿಳಿಸದೆ ಸಂಪರ್ಕದಿಂದ ದೂರ ಉಳಿದಿದ್ದಾರೆ. ಹಾಗಾಗಿ BMTC ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಿದೆ. ಇಲಾಖೆ ನಿರ್ಧಾರಕ್ಕೆ ಸಿಬ್ಬಂದಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. KSRTCಕೊವಿಡ್ ವೇಳೆ ರಜೆ ಕೊಡುವ ಪದ್ಧತಿಯನ್ನ ತಂದಿತ್ತು. ರಜೆ ಬಯಸುವ ಸಿಬ್ಬಂದಿ ವೇತನ ರಹಿತ ರಜೆ ಪಡೆಯಬಹುದು ಎಂದು ಕೊರೊನಾ ಸಮಯದಲ್ಲಿ ನಿಯಮವೊಂದನ್ನು ಜಾರಿಗೆ ತಂದಿತ್ತು. ಆದ್ರೆ ಬಿಎಂಟಿಸಿಯಲ್ಲಿ ಈ ರೀತಿಯ ಯಾವುದೇ ನಿಯಮ ಇಲ್ಲ. ಆದರೂ ಕಾರಣ ನೀಡದೆ 2 ಸಾವಿರ ಸಿಬ್ಬಂದಿ ರಜೆ ಹಾಕಿದ್ದಾರೆ.

ಇಷ್ಟು ದಿನ ರಜೆಯಲ್ಲಿರುವ ಸಿಬ್ಬಂದಿಗೆ BMTC ಕಾದು ನೋಡಿತ್ತು. ಆದ್ರೆ ಅವರ ಸುಳಿವು ಇಲ್ಲದ ಕಾರಣ ಈಗ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಕೊವಿಡ್ ಬಳಿಕ ಬಿಎಂಟಿಸಿಯ 6500 ಬಸ್‌ಗಳ ಪೈಕಿ ಕೇವಲ 4500ಸಾವಿರ ಬಸ್‌ಗಳು ಸಂಚಾರ ಆರಂಭಿಸಿದ್ವು. ಈಗ ಬಸ್‌ಗಳ ಸಂಚಾರ ಸಂಖ್ಯೆ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಸಂಪರ್ಕಿಸಲು ಬಿಬಿಎಂಪಿಯಿಂದ ನಿರಂತರ ಪ್ರಯತ್ನ ನಡೆಯುತ್ತಿದೆ.

ಕೆಲವರು ಸಂಪರ್ಕಕ್ಕೆ ಸಿಗುತ್ತಿಲ್ಲ ಇದರಲ್ಲಿ ಕೆಲವು ಸಿಬ್ಬಂದಿ ಇನ್ನೂ ಬಿಎಂಟಿಸಿಯ ಸಂಪರ್ಕಕ್ಕೆ ಸಿಗುತ್ತಿಲ್ಲ. ರಜೆ ಹಾಕುತ್ತಿರುವುದಕ್ಕೆ ಸೂಕ್ತ ಕಾರಣವನ್ನೂ ನೀಡಿಲ್ಲ. ಹೀಗಾಗಿ ನಿಗಮ, ಅವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಆದ್ರೆ ಬಿಎಂಟಿಸಿ ನಿರ್ಧಾರವನ್ನು ಸಿಬ್ಬಂದಿ ತೀವ್ರವಾಗಿ ಖಂಡಿಸಿದ್ದಾರೆ. ಈಗಾಗಲೇ ಕೆಲಸಕ್ಕೆ ಹಾಜರಾಗುತ್ತಿರುವವರಿಗೆ ಡ್ಯೂಟಿ ಸಿಗುತ್ತಿಲ್ಲ. ಸಿಬ್ಬಂದಿ ರಜೆ ಕಟ್ ಮಾಡಿಕೊಂಡು ವೇತನವಿಲ್ಲದೆ ಕಳಿಸ್ತಿದ್ದಾರೆ. ಈಗಾಗಲೇ ಬಿಎಂಟಿಸಿ ನೌಕರರ ಎಲ್ಲ ರಜೆಗಳು ಖಾಲಿಯಾಗಿವೆ. ಇಂದು ಬಿಎಂಟಿಸಿ ಅಧಃಪತನವೆಂದು ಸಾರಿಗೆ ಮುಖಂಡರು ಕಿಡಿ ಕಾರಿದ್ದಾರೆ.

ನೌಕರರ ಸಂಬಳಕ್ಕಾಗಿ ಸಾಲಮಾಡಲು ಹೊರಟಿರುವ BMTC; 643 ಹೊಸ ಬಸ್ ಖರೀದಿಗೆ ಟೆಂಡರ್

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ