AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪರ್ಕಕ್ಕೆ ಸಿಗುತ್ತಿಲ್ಲ 2 ಸಾವಿರ BMTC ಸಿಬ್ಬಂದಿ.. ಶಿಸ್ತು ಕ್ರಮ ಕೈಗೊಳ್ಳಲು ನಿಗಮಾ ನಿರ್ಧಾರ

BMTC ಮಹಾಮಾರಿ ಕೊರೊನಾ ಬಳಿಕ BMTCಯಲ್ಲಿ ಸುಮಾರು 2 ಸಾವಿರ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇಲಾಖೆಗೆ ಮಾಹಿತಿ ನೀಡದೆ ರಜೆಗೆ ಸೂಕ್ತ ಕಾರಣವೂ ತಿಳಿಸದೆ ಸಂಪರ್ಕದಿಂದ ದೂರ ಉಳಿದಿದ್ದಾರೆ. ಹಾಗಾಗಿ BMTC ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಿದೆ.

ಸಂಪರ್ಕಕ್ಕೆ ಸಿಗುತ್ತಿಲ್ಲ 2 ಸಾವಿರ BMTC ಸಿಬ್ಬಂದಿ.. ಶಿಸ್ತು ಕ್ರಮ ಕೈಗೊಳ್ಳಲು ನಿಗಮಾ ನಿರ್ಧಾರ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Feb 05, 2021 | 8:09 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಬಳಿಕ BMTCಯಲ್ಲಿ ಸುಮಾರು 2 ಸಾವಿರ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇಲಾಖೆಗೆ ಮಾಹಿತಿ ನೀಡದೆ ರಜೆಗೆ ಸೂಕ್ತ ಕಾರಣವೂ ತಿಳಿಸದೆ ಸಂಪರ್ಕದಿಂದ ದೂರ ಉಳಿದಿದ್ದಾರೆ. ಹಾಗಾಗಿ BMTC ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಿದೆ. ಇಲಾಖೆ ನಿರ್ಧಾರಕ್ಕೆ ಸಿಬ್ಬಂದಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. KSRTCಕೊವಿಡ್ ವೇಳೆ ರಜೆ ಕೊಡುವ ಪದ್ಧತಿಯನ್ನ ತಂದಿತ್ತು. ರಜೆ ಬಯಸುವ ಸಿಬ್ಬಂದಿ ವೇತನ ರಹಿತ ರಜೆ ಪಡೆಯಬಹುದು ಎಂದು ಕೊರೊನಾ ಸಮಯದಲ್ಲಿ ನಿಯಮವೊಂದನ್ನು ಜಾರಿಗೆ ತಂದಿತ್ತು. ಆದ್ರೆ ಬಿಎಂಟಿಸಿಯಲ್ಲಿ ಈ ರೀತಿಯ ಯಾವುದೇ ನಿಯಮ ಇಲ್ಲ. ಆದರೂ ಕಾರಣ ನೀಡದೆ 2 ಸಾವಿರ ಸಿಬ್ಬಂದಿ ರಜೆ ಹಾಕಿದ್ದಾರೆ.

ಇಷ್ಟು ದಿನ ರಜೆಯಲ್ಲಿರುವ ಸಿಬ್ಬಂದಿಗೆ BMTC ಕಾದು ನೋಡಿತ್ತು. ಆದ್ರೆ ಅವರ ಸುಳಿವು ಇಲ್ಲದ ಕಾರಣ ಈಗ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಕೊವಿಡ್ ಬಳಿಕ ಬಿಎಂಟಿಸಿಯ 6500 ಬಸ್‌ಗಳ ಪೈಕಿ ಕೇವಲ 4500ಸಾವಿರ ಬಸ್‌ಗಳು ಸಂಚಾರ ಆರಂಭಿಸಿದ್ವು. ಈಗ ಬಸ್‌ಗಳ ಸಂಚಾರ ಸಂಖ್ಯೆ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಸಂಪರ್ಕಿಸಲು ಬಿಬಿಎಂಪಿಯಿಂದ ನಿರಂತರ ಪ್ರಯತ್ನ ನಡೆಯುತ್ತಿದೆ.

ಕೆಲವರು ಸಂಪರ್ಕಕ್ಕೆ ಸಿಗುತ್ತಿಲ್ಲ ಇದರಲ್ಲಿ ಕೆಲವು ಸಿಬ್ಬಂದಿ ಇನ್ನೂ ಬಿಎಂಟಿಸಿಯ ಸಂಪರ್ಕಕ್ಕೆ ಸಿಗುತ್ತಿಲ್ಲ. ರಜೆ ಹಾಕುತ್ತಿರುವುದಕ್ಕೆ ಸೂಕ್ತ ಕಾರಣವನ್ನೂ ನೀಡಿಲ್ಲ. ಹೀಗಾಗಿ ನಿಗಮ, ಅವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಆದ್ರೆ ಬಿಎಂಟಿಸಿ ನಿರ್ಧಾರವನ್ನು ಸಿಬ್ಬಂದಿ ತೀವ್ರವಾಗಿ ಖಂಡಿಸಿದ್ದಾರೆ. ಈಗಾಗಲೇ ಕೆಲಸಕ್ಕೆ ಹಾಜರಾಗುತ್ತಿರುವವರಿಗೆ ಡ್ಯೂಟಿ ಸಿಗುತ್ತಿಲ್ಲ. ಸಿಬ್ಬಂದಿ ರಜೆ ಕಟ್ ಮಾಡಿಕೊಂಡು ವೇತನವಿಲ್ಲದೆ ಕಳಿಸ್ತಿದ್ದಾರೆ. ಈಗಾಗಲೇ ಬಿಎಂಟಿಸಿ ನೌಕರರ ಎಲ್ಲ ರಜೆಗಳು ಖಾಲಿಯಾಗಿವೆ. ಇಂದು ಬಿಎಂಟಿಸಿ ಅಧಃಪತನವೆಂದು ಸಾರಿಗೆ ಮುಖಂಡರು ಕಿಡಿ ಕಾರಿದ್ದಾರೆ.

ನೌಕರರ ಸಂಬಳಕ್ಕಾಗಿ ಸಾಲಮಾಡಲು ಹೊರಟಿರುವ BMTC; 643 ಹೊಸ ಬಸ್ ಖರೀದಿಗೆ ಟೆಂಡರ್

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ