ನಾಲೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವವನ್ನ ಆರೇ ನಿಮಿಷದಲ್ಲಿ ಪತ್ತೆಹಚ್ಚಿದ ಮೀನುಗಾರರು

ಬೆಳಗಾವಿ: ಮಳೆ ಹೆಚ್ಚಾಗಿದ್ದರಿಂದ ತನ್ನ ಜಮೀನಿನಲ್ಲಿದ್ದ ಬೋರ್ವೆಲ್ ಸ್ಟಾರ್ಟರ್​ನನ್ನ ಬಿಚ್ಚಿಕೊಂಡು ಬರಲು ತೆರಳಿದ್ದ ಯುವಕನೊಬ್ಬ ಕಾಲುಜಾರಿ ಬಳ್ಳಾರಿ ನಾಲೆಗೆ ಬಿದ್ದಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವಕನ ಮೃತದೇಹವನ್ನು ಪತ್ತೆಯಾಗಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಡುಮ್ಮಉರುಬಿನಹಟ್ಟಿ ಗ್ರಾಮದ ನಿವಾಸಿ ನಾಗರಾಜ್ ಹುಬ್ಬಳ್ಳಿ (18) ಮೃತ ದುರ್ದೈವಿ. ನಾಗರಾಜ್ ನಿನ್ನೆ ಬೋರ್ವೆಲ್ ಸ್ಟಾರ್ಟರ್ ಬಿಚ್ಚಿಕೊಂಡು ಬರಲು ತೆರಳಿದ್ದಾಗ ಕಾಲುಜಾರಿ ಬಳ್ಳಾರಿ ನಾಲೆಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ. ಇಂದು NDRF ತಂಡ ಹಾಗೂ ನುರಿತ ಮೀನುಗಾರರಿಂದ ಹುಡುಗನ ಮೃತದೇಹಕ್ಕಾಗಿ ಹುಡುಕಾಟ ನಡೆದಿತ್ತು. NDRF […]

ನಾಲೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವವನ್ನ ಆರೇ ನಿಮಿಷದಲ್ಲಿ ಪತ್ತೆಹಚ್ಚಿದ ಮೀನುಗಾರರು
ಸಾಧು ಶ್ರೀನಾಥ್​

Updated on: Aug 09, 2020 | 4:24 PM

ಬೆಳಗಾವಿ: ಮಳೆ ಹೆಚ್ಚಾಗಿದ್ದರಿಂದ ತನ್ನ ಜಮೀನಿನಲ್ಲಿದ್ದ ಬೋರ್ವೆಲ್ ಸ್ಟಾರ್ಟರ್​ನನ್ನ ಬಿಚ್ಚಿಕೊಂಡು ಬರಲು ತೆರಳಿದ್ದ ಯುವಕನೊಬ್ಬ ಕಾಲುಜಾರಿ ಬಳ್ಳಾರಿ ನಾಲೆಗೆ ಬಿದ್ದಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವಕನ ಮೃತದೇಹವನ್ನು ಪತ್ತೆಯಾಗಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಡುಮ್ಮಉರುಬಿನಹಟ್ಟಿ ಗ್ರಾಮದ ನಿವಾಸಿ ನಾಗರಾಜ್ ಹುಬ್ಬಳ್ಳಿ (18) ಮೃತ ದುರ್ದೈವಿ.


ನಾಗರಾಜ್ ನಿನ್ನೆ ಬೋರ್ವೆಲ್ ಸ್ಟಾರ್ಟರ್ ಬಿಚ್ಚಿಕೊಂಡು ಬರಲು ತೆರಳಿದ್ದಾಗ ಕಾಲುಜಾರಿ ಬಳ್ಳಾರಿ ನಾಲೆಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ. ಇಂದು NDRF ತಂಡ ಹಾಗೂ ನುರಿತ ಮೀನುಗಾರರಿಂದ ಹುಡುಗನ ಮೃತದೇಹಕ್ಕಾಗಿ ಹುಡುಕಾಟ ನಡೆದಿತ್ತು. NDRF ತಂಡ ಹಾಗೂ ಮೀನುಗಾರರು ಕಾರ್ಯಾಚರಣೆ ಆರಂಭಿಸಿದ ಕೇವಲ ಆರು ನಿಮಿಷದಲ್ಲಿ ಯುವಕನ ಶವ ಪತ್ತೆಮಾಡಿದ್ದಾರೆ. ಹುಡುಗನ ಮೃತದೇಹ ನಾಲೆಗೆ ಬಿದ್ದ ಜಾಗದಿಂದ 300 ಮೀಟರ್ ದೂರದಲ್ಲಿ ದೊರಕಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us