AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ; ಉಗ್ರ ಸಂಘಟನೆ ಹೆಸರು ಉಲ್ಲೇಖ

ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ(bomb threat)ಬಂದಿದ್ದು, ಪೊಲೀಸರ ಪರಿಶೀಲನೆ ಬಳಿಕ ಹುಸಿ ಮೇಲ್ ಎಂಬುದು ಪತ್ತೆಯಾಗಿದೆ. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು ಉಗ್ರ ಸಂಘಟನೆ ಹೆಸರನ್ನು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ; ಉಗ್ರ ಸಂಘಟನೆ ಹೆಸರು ಉಲ್ಲೇಖ
ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ
Jagadisha B
| Edited By: |

Updated on:Jan 05, 2024 | 4:49 PM

Share

ಬೆಂಗಳೂರು, ಜ.05: ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ(bomb threat)ಬಂದಿದ್ದು, ಪೊಲೀಸರ ಪರಿಶೀಲನೆ ಬಳಿಕ ಹುಸಿ ಮೇಲ್ ಎಂಬುದು ಪತ್ತೆಯಾಗಿದೆ. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು‘ Morgue999lol’ ಎಂಬ ಮೇಲ್ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ(Terrorizers 111 )ಹೆಸರನ್ನು ಉಲ್ಲೇಖಿಸಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದರು. ಈ ಘಟನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮ್ಯೂಸಿಯಂಗೆ ಡಾಗ್ ಸ್ಕ್ವಾಡ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಪರ್ಸ್ ಹುಡುಕಲು ನೆರವಾಗಲಿಲ್ಲ ಎಂದು ಬಾಂಬ್ ಬೆದರಿಕೆ ಒಡ್ಡಿದ ವಿಮಾನ ಪ್ರಯಾಣಿಕ

2023 ಡಿಸೆಂಬರ್ 26 ರಂದು ವಿಮಾನ ಪ್ರಯಾಣಿಕನೊಬ್ಬ ಪರ್ಸ್ ಹುಡುಕಲು ಸಹಕರಿಸಲಿಲ್ಲ ಎಂಬ ಕಾರಣಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಂಸ್ಥೆಯ ಕಾಲ್ ಸೆಂಟರ್​​​ಗೆ ಬಾಂಬ್​ ಬೆದರಿಕೆ ಕರೆ ಮಾಡಿದ್ದ ಘಟನೆ ನಡೆದಿತ್ತು. ಬಳಿಕ ಆರೋಪಿ ಶ್ರೇಯಸ್ ಚಾರ್ಮಿಯಾ ಎಂಬಾತನನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ:ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ವಿದೇಶಿ ಕೋರ್ಟ್ ಮೊರೆ ಹೋದ ನಗರ ಪೊಲೀಸರು

ಆರೋಪಿ ಚಾರ್ಮಿಯಾ ಎಂಬಾತ ಎಸ್​​​ಜಿ 8536 ಸಂಖ್ಯೆಯ ಸ್ಪೈಸ್ ಜೆಟ್ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ. ಈ ವೇಳೆ ವಿಮಾನದಲ್ಲಿ ಕಳೆದುಕೊಂಡಿದ್ದ ಪರ್ಸ್​ನ್ನು ಹುಡುಕಲು ಸಹಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿಯು ಕೃತ್ಯ ಎಸಗಿದ್ದ. ಈ ಹಿನ್ನಲೆ ಆರೋಪಿ ಶ್ರೇಯಸ್ ಚಾರ್ಮಿಯಾ ವಿರುದ್ಧ ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ, ಆರೋಪಿ ಜೈಲು ಪಾಲಾಗಿದ್ದ. ಇದೀಗ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:58 pm, Fri, 5 January 24

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ