AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ವೇಳೆ 700 ರೂಪಾಯಿ ಕ್ಯಾಶ್​ಬ್ಯಾಕ್ ಪಡೆಯುವುದು ಹೇಗೆ?

ಮೊದಲ ಬಾರಿ ಪೇಟಿಎಂ ಬಳಸಿ ಗ್ಯಾಸ್ ಸಿಲಿಂಡರ್ ಬುಕ್ ಮಾಡುವವರಿಗೆ ಮಾತ್ರ ಈ ಆಫರ್ ಲಭ್ಯ. ಜನವರಿ 31ರವರೆಗಿದ್ದ ಈ ಆಫರ್​ ಅನ್ನು ಇದೀಗ ಫೆಬ್ರುವರಿ 28ವರೆಗೆ ವಿಸ್ತರಣೆ ಮಾಡಲಾಗಿದೆ.

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ವೇಳೆ 700 ರೂಪಾಯಿ ಕ್ಯಾಶ್​ಬ್ಯಾಕ್ ಪಡೆಯುವುದು ಹೇಗೆ?
ಸಾಂದರ್ಭಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Feb 03, 2021 | 3:05 PM

Share

ಬೆಂಗಳೂರು: ಎಲ್​ಪಿಜಿ ಸಿಲಿಂಡರ್ ರೀಫಿಲ್ಲಿಂಗ್ ಮಾಡಲು 692 ರೂಪಾಯಿ ಬೇಕು. ರೀಫಿಲ್ಲಿಂಗ್ ವೇಳೆ ₹ 700 ಕ್ಯಾಶ್​ಬ್ಯಾಕ್ ಸಿಕ್ಕರೆ…! ಎಷ್ಟು ಖುಷಿ ಅಲ್ವಾ?

ಹೌದು, ಪೇಟಿಎಂ ಮೂಲಕ ಗ್ಯಾಸ್ ಸಿಲಿಂಡರ್ ಬುಕ್ ಮಾಡಿದರೆ ಕ್ಯಾಶ್​ಬ್ಯಾಕ್ ಸಿಗುವ ಆಫರ್ ನೀಡಿದೆ ಪೇಟಿಎಂ. ಜನವರಿ 31ರವರೆಗಿದ್ದ ಈ ಆಫರ್ ಇದೀಗ ಫೆ.28ವರೆಗೆ ವಿಸ್ತರಣೆಯಾಗಿದೆ.

ಕ್ಯಾಶ್​ಬ್ಯಾಕ್ ಪಡೆಯುವುದು ಹೇಗೆ? ಪೇಟಿಎಂ ಆ್ಯಪ್​ ಡೌನ್​ಲೋಡ್ ಮಾಡಿ, ಗ್ಯಾಸ್ ಸಿಲಿಂಡರ್ ಬುಕ್ ಮಾಡುವ ಮೂಲಕ ₹ 700 ಕ್ಯಾಶ್​ಬ್ಯಾಕ್ ಪಡೆಯಬಹುದಾಗಿದೆ. ಈ ರೀತಿ ಕ್ಯಾಶ್​​ಬ್ಯಾಕ್ ಪಡೆಯಲು ಪೇಟಿಎಂನಲ್ಲಿ ರೀಚಾರ್ಜ್ ಆಯ್ಕೆ ಕ್ಲಿಕ್ ಮಾಡಿ. ಆಮೇಲೆ ಪೇ ಬಿಲ್ಸ್ ಕ್ಲಿಕ್ ಮಾಡಿ, ಸಿಲಿಂಡರ್ ಬುಕ್ ಮಾಡಿ. ಆನಂತರ ಗ್ಯಾಸ್ ಸಿಲಿಂಡರ್ ಬುಕಿಂಗ್ ಬಗ್ಗೆ ಮಾಹಿತಿಗಳನ್ನು ಭರ್ತಿ ಮಾಡಬೇಕು. ಈ ಮಾಹಿತಿಗಳನ್ನು ತುಂಬಿದ ನಂತರ ಕ್ಯಾಶ್​ಬ್ಯಾಕ್ ಪಡೆಯುವುದಕ್ಕಾಗಿ ಪ್ರೊಮೊ ಕೋಡ್ FIRSTLPG ಎಂದು ನಮೂದಿಸಿ ಗ್ಯಾಸ್ ಸಿಲಿಂಡರ್ ಬುಕ್ ಮಾಡಿ.

ಗಮನಿಸಿ, ಮೊದಲ ಬಾರಿ ಪೇಟಿಎಂ ಬಳಸಿ ಗ್ಯಾಸ್ ಸಿಲಿಂಡರ್ ಬುಕ್ ಮಾಡುವವರಿಗೆ ಮಾತ್ರ ಈ ಆಫರ್ ಲಭ್ಯ. 14.2 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ 692 ಇದೆ. ಪೇಟಿಎಂನಲ್ಲಿ ಪ್ರೊಮೊ ಕೋಡ್ ಬಳಸಿ ಮೊದಲ ಬಾರಿ ಸಿಲಿಂಡರ್ ಬುಕ್ ಮಾಡಿದರೆ ಕ್ಯಾಶ್​ಬ್ಯಾಕ್ ಹಣ ನಿಮ್ಮ ಪೇಟಿಎಂ ಖಾತೆಗೆ ಜಮೆ ಆಗುತ್ತದೆ.

ಪೇಟಿಎಂ ಮೂಲಕ ಗ್ಯಾಸ್ ಸಿಲಿಂಡರ್ ಬುಕ್ ಮಾಡಿದರೆ ಏನು ಲಾಭ? ಹೊಸವರ್ಷದಲ್ಲಿ ಮೊದಲ ಬಾರಿ ಗ್ಯಾಸ್ ಸಿಲಿಂಡರ್ ಬುಕ್ ಮಾಡುವವರಿಗೆ ಮಾತ್ರ ಈ ಕ್ಯಾಶ್ ಬ್ಯಾಕ್ ಸಿಗಲಿದೆ. ಬುಕಿಂಗ್ ಮೌಲ್ಯ ಕನಿಷ್ಠ ₹500 ಇರಬೇಕು. ಕ್ಯಾಶ್​ಬ್ಯಾಕ್  ಪಡೆಯಬೇಕಾದರೆ ಹಣಪಾವತಿ ಮಾಡುವ ಹೊತ್ತಲ್ಲಿ ಸಿಗುವ ಸ್ಕ್ರ್ಯಾಚ್ ಕೂಪನ್ ತೆರೆಯಬೇಕು. ಬುಕಿಂಗ್ ಮಾಡಿದ 24 ಗಂಟೆಗಳೊಳಗೆಕ್ಯಾಶ್​ಬ್ಯಾಕ್​ಗಿರುವ ಸ್ಕ್ರ್ಯಾಚ್ ಕೂಪನ್ ಸಿಗುತ್ತದೆ. ಒಂದು ವೇಳೆ ನೀವು 24 ಗಂಟೆಗಳೊಳಗೆ ಸ್ಕ್ರ್ಯಾಚ್ ಕಾರ್ಡ್ ತೆರೆಯದೇ ಇದ್ದರೆ, ಕ್ಯಾಶ್ ಬ್ಯಾಕ್ ಮತ್ತು ಆಫರ್ ಸೆಕ್ಷನ್ ಗೆ ಹೋಗಿ ಇದನ್ನು ತೆರೆಯಬಹುದು. ಒಂದೇ ಒಂದು ಬಾರಿ ಮಾತ್ರ ಈ ಆಫರ್ ನ್ನು ಬಳಸಬಹುದು.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ

Published On - 2:58 pm, Wed, 3 February 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್