ನಿಶ್ಚಿತಾರ್ಥ ಮುಗಿಸಿ ಮದುವೆಗೆ ಸಿದ್ಧತೆ ನಡೆಸ್ತಿದ್ದ ಯುವಕ ಕೆರೆಗೆ ಹಾರಿ ಆತ್ಮಹತ್ಯೆ, ಯಾಕೆ?

ಮಂಡ್ಯ: ನಿಶ್ಚಿತಾರ್ಥ ಮುಗಿಸಿ ಜುಲೈ 26 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಬೇಕಿದ್ದ ಮಂಚೇಗೌಡ ಎಂಬ ಯುವಕ ವರುಣ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೂಲತ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯ ಮುತ್ತಳ್ಳಿ ನಿವಾಸಿ ಮಂಚೇಗೌಡ ಬಣ್ಣಾರಿ ಅಮ್ಮನ್ ಶುಗರ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಜುಲೈ 26ರಂದು ಮದುವೆ ನಿಶ್ಚಯವಾಗಿತ್ತು. ಆದರೆ ತೀವ್ರ ಬೆನ್ನು ನೋವಿನಿಂದ ನರಳುತ್ತಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಮೊದಲೇ […]

ನಿಶ್ಚಿತಾರ್ಥ ಮುಗಿಸಿ ಮದುವೆಗೆ ಸಿದ್ಧತೆ ನಡೆಸ್ತಿದ್ದ ಯುವಕ ಕೆರೆಗೆ ಹಾರಿ ಆತ್ಮಹತ್ಯೆ, ಯಾಕೆ?
Edited By:

Updated on: Jul 22, 2020 | 4:29 PM

ಮಂಡ್ಯ: ನಿಶ್ಚಿತಾರ್ಥ ಮುಗಿಸಿ ಜುಲೈ 26 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಬೇಕಿದ್ದ ಮಂಚೇಗೌಡ ಎಂಬ ಯುವಕ ವರುಣ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೂಲತ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯ ಮುತ್ತಳ್ಳಿ ನಿವಾಸಿ ಮಂಚೇಗೌಡ ಬಣ್ಣಾರಿ ಅಮ್ಮನ್ ಶುಗರ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಜುಲೈ 26ರಂದು ಮದುವೆ ನಿಶ್ಚಯವಾಗಿತ್ತು. ಆದರೆ ತೀವ್ರ ಬೆನ್ನು ನೋವಿನಿಂದ ನರಳುತ್ತಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಈ ಮೊದಲೇ ಬೆನ್ನು ನೋವು ಇಷ್ಟೊಂದು ಕಾಡಿದ್ದರೆ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರಲಿಲ್ಲ, ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿರುವ ಮಂಚೇಗೌಡ, ಈ ಹುಡುಗಿಯನ್ನು ನಾನು ಯಾವುದೇ ರೀತಿಯಲ್ಲು ಕೆಟ್ಟದಾಗಿ ಬಳಸಿಕೊಂಡಿಲ್ಲ. ಯಾರೂ ತಪ್ಪು ತಿಳಿಯಬೇಡಿ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾನೆ. ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನೆಡೆದಿದ್ದು, ಸದ್ಯ ಪೊಲೀಸರಿಂದ ಮೃತ ದೇಹಕ್ಕಾಗಿ ಕೆರೆಯಲ್ಲಿ ಹುಡುಕಾಟ ಪ್ರಾರಂಭವಾಗಿದೆ.

Published On - 4:49 pm, Tue, 21 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us