ಆಟವಾಡುವಾಗ ಆಯ ತಪ್ಪಿ ಪಾಳುಬಾವಿಗೆ ಬಿದ್ದು ಬಾಲಕ ಸಾವು

ಕೊಡಗು: ಆಟವಾಡುವಾಗ ಆಯ ತಪ್ಪಿ ನೀರು ಇದ್ದ ಪಾಳುಬಾವಿಗೆ ಬಿದ್ದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ವಿರಾಜಪೇಟೆ ತಾಲೂಕಿನ ಅಂಬಟ್ಟಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಗ್ರಾಮದ ಸುಲೆಮಾನ್ ಪುತ್ರ ನಿಜಾಮುದ್ದಿನ್(11) ಮೃತ ಬಾಲಕ. ತಮ್ಮ ತೋಟದಲ್ಲಿ ಆಟವಾಡುತ್ತಿದ್ದ ವೇಳೆ ಕಾಲುಜಾರಿ ಬಾಲಕ ತೆರೆದ ಬಾವಿಗೆ ಬಿದ್ದಿದ್ದಾನೆ. ಸುಮಾರು 25 ಅಡಿ ಆಳದ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟವಾಡುವಾಗ ಆಯ ತಪ್ಪಿ ಪಾಳುಬಾವಿಗೆ ಬಿದ್ದು ಬಾಲಕ ಸಾವು
ಸಾಧು ಶ್ರೀನಾಥ್​

Updated on: Nov 05, 2020 | 6:11 PM

ಕೊಡಗು: ಆಟವಾಡುವಾಗ ಆಯ ತಪ್ಪಿ ನೀರು ಇದ್ದ ಪಾಳುಬಾವಿಗೆ ಬಿದ್ದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ.

ವಿರಾಜಪೇಟೆ ತಾಲೂಕಿನ ಅಂಬಟ್ಟಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಗ್ರಾಮದ ಸುಲೆಮಾನ್ ಪುತ್ರ ನಿಜಾಮುದ್ದಿನ್(11) ಮೃತ ಬಾಲಕ.

ತಮ್ಮ ತೋಟದಲ್ಲಿ ಆಟವಾಡುತ್ತಿದ್ದ ವೇಳೆ ಕಾಲುಜಾರಿ ಬಾಲಕ ತೆರೆದ ಬಾವಿಗೆ ಬಿದ್ದಿದ್ದಾನೆ. ಸುಮಾರು 25 ಅಡಿ ಆಳದ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us