ಸರ್​.. ಮದುವೆ ಆಗೋದಕ್ಕೆ ಪರ್ಮಿಷನ್ ಕೊಡಿ -DJ ಹಳ್ಳಿ ಪೊಲೀಸರಿಗೆ ವಧು-ವರರ ಮನವಿ!

ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಿಂದಾಗಿ, ಎರಡು ಏರಿಯಾಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಹೀಗಾಗಿ, ಅಲ್ಲಿನ ಸ್ಥಳೀಯರು ಹೊರಗೆ ಓಡಾಡುವಂತಿಲ್ಲ. ಇದರಿಂದಾಗಿ ಇಂದು ಗೋರಿಪಾಳ್ಯದಲ್ಲಿ ಮದುವೆ ನಿಶ್ಚಯವಾಗಿದ್ದ ವಧು-ವರರು ನಮಗೆ ಮದುವೆಯಾಗುವುದಕ್ಕೆ ಅನುಮತಿ ನೀಡಿ ಎಂದು ಕೋರಲು ಡಿ.ಜೆ ಹಳ್ಳಿ ಪೊಲೀಸ್ ಠಾಣೆಗೆ ಬಂದಿದ್ದರು. ಡಿ.ಜೆ.ಹಳ್ಳಿ ನಿವಾಸಿಗಳಾಗಿರುವ ವಧು-ವರರ ಫಜೀತಿಯನ್ನು ಕಂಡ ಪೊಲೀಸರು ಮದುವೆಗೆ ಅವಕಾಶ ಕಲ್ಪಿಸಿಕೊಟ್ಟು ಇಬ್ಬರಿಗೂ ಶುಭ ಹಾರೈಸಿ ಅಲ್ಲಿಂದ ಕಳಿಸಿಕೊಟ್ಟಿದ್ದಾರೆ.

ಸರ್​.. ಮದುವೆ ಆಗೋದಕ್ಕೆ ಪರ್ಮಿಷನ್ ಕೊಡಿ -DJ ಹಳ್ಳಿ ಪೊಲೀಸರಿಗೆ ವಧು-ವರರ ಮನವಿ!
ಸಾಧು ಶ್ರೀನಾಥ್​

Updated on: Aug 16, 2020 | 2:29 PM

ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಿಂದಾಗಿ, ಎರಡು ಏರಿಯಾಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಹೀಗಾಗಿ, ಅಲ್ಲಿನ ಸ್ಥಳೀಯರು ಹೊರಗೆ ಓಡಾಡುವಂತಿಲ್ಲ.

ಇದರಿಂದಾಗಿ ಇಂದು ಗೋರಿಪಾಳ್ಯದಲ್ಲಿ ಮದುವೆ ನಿಶ್ಚಯವಾಗಿದ್ದ ವಧು-ವರರು ನಮಗೆ ಮದುವೆಯಾಗುವುದಕ್ಕೆ ಅನುಮತಿ ನೀಡಿ ಎಂದು ಕೋರಲು ಡಿ.ಜೆ ಹಳ್ಳಿ ಪೊಲೀಸ್ ಠಾಣೆಗೆ ಬಂದಿದ್ದರು.

ಡಿ.ಜೆ.ಹಳ್ಳಿ ನಿವಾಸಿಗಳಾಗಿರುವ ವಧು-ವರರ ಫಜೀತಿಯನ್ನು ಕಂಡ ಪೊಲೀಸರು ಮದುವೆಗೆ ಅವಕಾಶ ಕಲ್ಪಿಸಿಕೊಟ್ಟು ಇಬ್ಬರಿಗೂ ಶುಭ ಹಾರೈಸಿ ಅಲ್ಲಿಂದ ಕಳಿಸಿಕೊಟ್ಟಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us