AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia vs India Test Series | ಠಾಕೂರ್‌-ಸುಂದರ್ ಶತಕದ ಜೊತೆಯಾಟ; ಕೊಹ್ಲಿ ಶ್ಲಾಘನೆ

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತವನ್ನು ಸಂಕಷ್ಟದ ಪರಿಸ್ಥಿತಿಯಿಂದ ಪಾರುಮಾಡಿದ ವಾಷಿಂಗ್ಟನ್ ಸುಂದರ್ ಮತ್ತು ಶಾರ್ದೂಲ್​ ಠಾಕೂರ್ ಅವರನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟ್ವಿಟರ್​ನಲ್ಲಿ ಶ್ಲಾಘಿಸಿದ್ದಾರೆ.

Australia vs India Test Series | ಠಾಕೂರ್‌-ಸುಂದರ್ ಶತಕದ ಜೊತೆಯಾಟ; ಕೊಹ್ಲಿ ಶ್ಲಾಘನೆ
ಶತಕದ ಜೊತೆಯಾಟ ಆಡಿದ ಸುಂದರ್ ಹಾಗೂ​ ಠಾಕೂರ್​
ಪೃಥ್ವಿಶಂಕರ
| Edited By: |

Updated on: Jan 17, 2021 | 2:41 PM

Share

ಬ್ರಿಸ್ಬೇನ್‌: ಗಬ್ಬಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತವನ್ನು ಸಂಕಷ್ಟದ ಪರಿಸ್ಥಿತಿಯಿಂದ ಪಾರುಮಾಡಿದ ವಾಷಿಂಗ್ಟನ್ ಸುಂದರ್ ಮತ್ತು ಶರ್ದುಲ್ ಠಾಕೂರ್ ಅವರನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟ್ವಿಟರ್​ನಲ್ಲಿ ಶ್ಲಾಘಿಸಿದ್ದಾರೆ.

ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಏಳನೇ ವಿಕೆಟ್ ಜೊತೆಯಾಟದಲ್ಲಿ ಅತಿಹೆಚ್ಚು ರನ್​ ಗಳಿಸಿದ ಕೀರ್ತಿಗೆ ಸುಂದರ್ ಮತ್ತು ಠಾಕೂರ್ ಭಾಜನರಾದರು. 123 ರನ್​ಗಳ ಜೊತೆಯಾಟ ಆಡಿದ ಸುಂದರ್ ಮತ್ತು ಠಾಕೂರ್​ನನ್ನು ಹಾಡಿ ಹೋಗಳಿರುವ ಕೊಹ್ಲಿ, ಮುಂಬೈ ವೇಗಿ ಠಾಕೂರ್​ನನ್ನು ಮರಾಠಿ ಭಾಷೆಯಲ್ಲಿ ಶ್ಲಾಘಿಸಿದ್ದಾರೆ.

ಉತ್ತಮ ಜೊತೆಯಾಟ ಆಡಿದ ವಾಷಿಂಗ್ಟನ್ ಸುಂದರ್ ಮತ್ತು ಶಾರ್ದುಲ್ ಠಾಕೂರ್​ನನ್ನು ಹೊಗಳಿರುವ ಕೊಹ್ಲಿ, ಟೆಸ್ಟ್ ಕ್ರಿಕೆಟ್ ಎಂದರೆ ಇದೇ. ವಾಶಿ (ವಾಷಿಂಗ್ಟನ್ ಸುಂದರ್) ಚೊಚ್ಚಲ ಪಂದ್ಯದಲ್ಲಿ ಬಹಳ ತಾಳ್ಮೆಯಿಂದ ತಮ್ಮ ಪ್ರದರ್ಶನ ನೀಡಿದ್ದಾರೆ ಹಾಗೆಯೇ ಅದ್ಭುತ ಆಟ ಆಡಿದ ಠಾಕೂರ್ ಮತ್ತೊಮ್ಮೆ ನಿಮಗೆ ನಮಸ್ಕರಿಸುತ್ತೇನೆ ಎಂದು ಮರಾಠಿ ಭಾಷೆಯಲ್ಲಿ ಶ್ಲಾಘಿಸಿದ್ದಾರೆ.

ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್​ನ 369 ರನ್​ಗಳಿಗೆ ಉತ್ತರಿಸಿದ ಭಾರತ, ಒಂದು ಹಂತದಲ್ಲಿ ಆರು ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತ್ತು. ಆ ಸಮಯದಲ್ಲಿ ಜೊತೆಯಾದ ಈ ಜೋಡಿ ಆಸ್ಟ್ರೇಲಿಯಾದ ಬೌಲರ್‌ಗಳು ಎಸೆದ ಬಾಲ್​ಗಳಿಗೆ ಮೈದಾನದ ಎಲ್ಲಾ ಭಾಗಗಳ ದರ್ಶನ ಮಾಡಿಸಿದರು. 67 ರನ್‌ಗಳ ಕಾಣಿಕೆಯಲ್ಲಿ ಠಾಕೂರ್ ಒಂಬತ್ತು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಸಹ ಆದರು. ತನ್ನ ಟೆಸ್ಟ್ ಚೊಚ್ಚಲ ಪಂದ್ಯದಲ್ಲಿ ಸುಂದರ್ ಕೂಡ 1 ಸಿಕ್ಸರ್ ಹಾಗೂ ಏಳು ಬೌಂಡರಿಗಳನ್ನು ಬಾರಿಸಿ ತಂಡಕ್ಕೆ ಅಮೂಲ್ಯವಾದ 62 ರನ್​ಗಳ ಕೊಡುಗೆ ನೀಡಿದರು.

Australia vs India Test Series | ಅಂತಿಮ ಟೆಸ್ಟ್​: 336 ರನ್​ಗಳಿಗೆ ಪತನಗೊಂಡ ಟೀಂ ಇಂಡಿಯಾ, ಆಸಿಸ್​ಗೆ 33 ರನ್​ಗಳ ಮುನ್ನಡೆ..

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು