AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್​ನಲ್ಲಿ ಮೂರನೇ ಕೊರೊನಾ ಲಸಿಕೆಗೂ ಸಿಕ್ತು ಅನುಮತಿ.. ಮಾರುಕಟ್ಟೆಗೆ ಬರಲಿದೆ ಮಾಡೆರ್ನಾ

ವಿಶೇಷವೆಂದರೆ ಮಾಡೆರ್ನಾ ಸಂಸ್ಥೆಯ ಲಸಿಕೆ ಬಳಕೆಗೆ ಅರ್ಹವಾಗಿದೆ ಎಂದು ದೇಶದಲ್ಲಿ ಅನುಮೋದನೆ ಸಿಗುವ ಮೊದಲೇ ಬ್ರಿಟನ್​ 70ಲಕ್ಷ ಡೋಸ್​ ಲಸಿಕೆಯನ್ನು ಮುಂಗಡವಾಗಿ ಕಾಯ್ದಿರಿಸಿತ್ತು.

ಬ್ರಿಟನ್​ನಲ್ಲಿ ಮೂರನೇ ಕೊರೊನಾ ಲಸಿಕೆಗೂ ಸಿಕ್ತು ಅನುಮತಿ.. ಮಾರುಕಟ್ಟೆಗೆ ಬರಲಿದೆ ಮಾಡೆರ್ನಾ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Jan 08, 2021 | 7:16 PM

Share

ಜಗತ್ತಿನ ಎಲ್ಲಾ ರಾಷ್ಟ್ರಗಳಿಗಿಂತ ಮೊದಲೇ ಕೊರೊನಾ ಲಸಿಕೆ ವಿತರಣೆ ಆರಂಭಿಸಿದ್ದ ಬ್ರಿಟನ್​ ಇಂದು (ಜ.8) ಮಾಡೆರ್ನಾ ಸಂಸ್ಥೆಯ ಕೊರೊನಾ ಲಸಿಕೆ ಬಳಕೆಗೆ ಅಸ್ತು ಎಂದಿದೆ. ಆ ಮೂಲಕ ಬ್ರಿಟನ್​ನಲ್ಲಿ ಮೂರು ಸಂಸ್ಥೆಯ ಕೊರೊನಾ ಲಸಿಕೆಗಳ ಬಳಕೆಗೆ ಅನುಮತಿ ಲಭಿಸಿದಂತಾಗಿದೆ.

ವಿಶೇಷವೆಂದರೆ ಮಾಡೆರ್ನಾ ಸಂಸ್ಥೆಯ ಲಸಿಕೆ ಬಳಕೆಗೆ ಅರ್ಹವಾಗಿದೆ ಎಂದು ದೇಶದಲ್ಲಿ ಅನುಮೋದನೆ ಸಿಗುವ ಮೊದಲೇ ಬ್ರಿಟನ್​ 70ಲಕ್ಷ ಡೋಸ್​ ಲಸಿಕೆಯನ್ನು ಮುಂಗಡವಾಗಿ ಕಾಯ್ದಿರಿಸಿತ್ತು. ಮಾಡೆರ್ನಾ ಅಭಿವೃದ್ಧಿಪಡಿಸಿದ ಲಸಿಕೆ ಶೇ.95ರಷ್ಟು ಪರಿಣಾಮಕಾರಿ ಎಂದು ಪರೀಕ್ಷಾ ಹಂತದ ವರದಿಗಳು ತಿಳಿಸಿದ್ದ ಕಾರಣ ಅದೇ ಆಧಾರದ ಮೇಲೆ ಬ್ರಿಟನ್​ ಅಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ತರಿಸಲು ನಿರ್ಧರಿಸಿತ್ತು ಎನ್ನುವುದು ತಜ್ಞರ ಅಭಿಪ್ರಾಯ.

ಫೈಜರ್​-ಬಯೋಎನ್​ಟೆಕ್ ಮತ್ತು ಆಕ್ಸ್​ಫರ್ಡ್​-ಆಸ್ಟ್ರಾಜೆನೆಕಾ ಸಂಸ್ಥೆಗಳ ಲಸಿಕೆ ಬಳಸಲು ಆರಂಭಿಸಿದ್ದ ಬ್ರಿಟನ್​, ಈಗಾಗಲೇ ಒಂದೂವರೆ ಲಕ್ಷ ಜನರಿಗೆ ಕನಿಷ್ಠ ಒಂದು ಡೋಸ್​ನಷ್ಟು ಲಸಿಕೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಸದ್ಯ ಮಾಡೆರ್ನಾ ಲಸಿಕೆ ಮಾರುಕಟ್ಟೆಗೆ ಬರುವುದು ಕೊಂಚ ತಡವಾಗಬಹುದಾದರೂ ಬಂದ ಕೂಡಲೇ ಇನ್ನಷ್ಟು ಜನರಿಗೆ ಲಸಿಕೆ ವಿತರಿಸಲು ಬ್ರಿಟನ್​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತು ಈ ಎಲ್ಲಾ ಲಸಿಕೆಗಳನ್ನು ಒಬ್ಬ ವ್ಯಕ್ತಿಗೆ ಎರಡು ಡೋಸ್​ನಂತೆ ನೀಡಬೇಕಾಗಿದೆ.

ಅಮೆರಿಕಾ, ಬ್ರಿಟನ್​ ಲಸಿಕೆ ಮೇಲೆ ನಮಗೆ ನಂಬಿಕೆಯಿಲ್ಲ.. ಆ ಲಸಿಕೆ ಬೇಡ: ಸೆಡ್ಡು ಹೊಡೆದ ಇರಾನ್​

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್