AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್​ನಲ್ಲಿ ಮೂರನೇ ಕೊರೊನಾ ಲಸಿಕೆಗೂ ಸಿಕ್ತು ಅನುಮತಿ.. ಮಾರುಕಟ್ಟೆಗೆ ಬರಲಿದೆ ಮಾಡೆರ್ನಾ

ವಿಶೇಷವೆಂದರೆ ಮಾಡೆರ್ನಾ ಸಂಸ್ಥೆಯ ಲಸಿಕೆ ಬಳಕೆಗೆ ಅರ್ಹವಾಗಿದೆ ಎಂದು ದೇಶದಲ್ಲಿ ಅನುಮೋದನೆ ಸಿಗುವ ಮೊದಲೇ ಬ್ರಿಟನ್​ 70ಲಕ್ಷ ಡೋಸ್​ ಲಸಿಕೆಯನ್ನು ಮುಂಗಡವಾಗಿ ಕಾಯ್ದಿರಿಸಿತ್ತು.

ಬ್ರಿಟನ್​ನಲ್ಲಿ ಮೂರನೇ ಕೊರೊನಾ ಲಸಿಕೆಗೂ ಸಿಕ್ತು ಅನುಮತಿ.. ಮಾರುಕಟ್ಟೆಗೆ ಬರಲಿದೆ ಮಾಡೆರ್ನಾ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Jan 08, 2021 | 7:16 PM

Share

ಜಗತ್ತಿನ ಎಲ್ಲಾ ರಾಷ್ಟ್ರಗಳಿಗಿಂತ ಮೊದಲೇ ಕೊರೊನಾ ಲಸಿಕೆ ವಿತರಣೆ ಆರಂಭಿಸಿದ್ದ ಬ್ರಿಟನ್​ ಇಂದು (ಜ.8) ಮಾಡೆರ್ನಾ ಸಂಸ್ಥೆಯ ಕೊರೊನಾ ಲಸಿಕೆ ಬಳಕೆಗೆ ಅಸ್ತು ಎಂದಿದೆ. ಆ ಮೂಲಕ ಬ್ರಿಟನ್​ನಲ್ಲಿ ಮೂರು ಸಂಸ್ಥೆಯ ಕೊರೊನಾ ಲಸಿಕೆಗಳ ಬಳಕೆಗೆ ಅನುಮತಿ ಲಭಿಸಿದಂತಾಗಿದೆ.

ವಿಶೇಷವೆಂದರೆ ಮಾಡೆರ್ನಾ ಸಂಸ್ಥೆಯ ಲಸಿಕೆ ಬಳಕೆಗೆ ಅರ್ಹವಾಗಿದೆ ಎಂದು ದೇಶದಲ್ಲಿ ಅನುಮೋದನೆ ಸಿಗುವ ಮೊದಲೇ ಬ್ರಿಟನ್​ 70ಲಕ್ಷ ಡೋಸ್​ ಲಸಿಕೆಯನ್ನು ಮುಂಗಡವಾಗಿ ಕಾಯ್ದಿರಿಸಿತ್ತು. ಮಾಡೆರ್ನಾ ಅಭಿವೃದ್ಧಿಪಡಿಸಿದ ಲಸಿಕೆ ಶೇ.95ರಷ್ಟು ಪರಿಣಾಮಕಾರಿ ಎಂದು ಪರೀಕ್ಷಾ ಹಂತದ ವರದಿಗಳು ತಿಳಿಸಿದ್ದ ಕಾರಣ ಅದೇ ಆಧಾರದ ಮೇಲೆ ಬ್ರಿಟನ್​ ಅಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ತರಿಸಲು ನಿರ್ಧರಿಸಿತ್ತು ಎನ್ನುವುದು ತಜ್ಞರ ಅಭಿಪ್ರಾಯ.

ಫೈಜರ್​-ಬಯೋಎನ್​ಟೆಕ್ ಮತ್ತು ಆಕ್ಸ್​ಫರ್ಡ್​-ಆಸ್ಟ್ರಾಜೆನೆಕಾ ಸಂಸ್ಥೆಗಳ ಲಸಿಕೆ ಬಳಸಲು ಆರಂಭಿಸಿದ್ದ ಬ್ರಿಟನ್​, ಈಗಾಗಲೇ ಒಂದೂವರೆ ಲಕ್ಷ ಜನರಿಗೆ ಕನಿಷ್ಠ ಒಂದು ಡೋಸ್​ನಷ್ಟು ಲಸಿಕೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಸದ್ಯ ಮಾಡೆರ್ನಾ ಲಸಿಕೆ ಮಾರುಕಟ್ಟೆಗೆ ಬರುವುದು ಕೊಂಚ ತಡವಾಗಬಹುದಾದರೂ ಬಂದ ಕೂಡಲೇ ಇನ್ನಷ್ಟು ಜನರಿಗೆ ಲಸಿಕೆ ವಿತರಿಸಲು ಬ್ರಿಟನ್​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತು ಈ ಎಲ್ಲಾ ಲಸಿಕೆಗಳನ್ನು ಒಬ್ಬ ವ್ಯಕ್ತಿಗೆ ಎರಡು ಡೋಸ್​ನಂತೆ ನೀಡಬೇಕಾಗಿದೆ.

ಅಮೆರಿಕಾ, ಬ್ರಿಟನ್​ ಲಸಿಕೆ ಮೇಲೆ ನಮಗೆ ನಂಬಿಕೆಯಿಲ್ಲ.. ಆ ಲಸಿಕೆ ಬೇಡ: ಸೆಡ್ಡು ಹೊಡೆದ ಇರಾನ್​

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!