AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

C.P.ಯೋಗೇಶ್ವರ್‌ರನ್ನ ನೂರಕ್ಕೆ ನೂರರಷ್ಟು ಮಂತ್ರಿ ಮಾಡ್ತೇವೆ -ಸಿಎಂ BSY ಭರವಸೆ

C.P.ಯೋಗೇಶ್ವರ್‌ರನ್ನ ನೂರಕ್ಕೆ ನೂರರಷ್ಟು ಮಂತ್ರಿ ಮಾಡ್ತೇವೆ ಎಂದು ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸದ್ಯ, ವಿಧಾನ ಪರಿಷತ್ ಬಿಜೆಪಿ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್​ಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

C.P.ಯೋಗೇಶ್ವರ್‌ರನ್ನ ನೂರಕ್ಕೆ ನೂರರಷ್ಟು ಮಂತ್ರಿ ಮಾಡ್ತೇವೆ -ಸಿಎಂ BSY ಭರವಸೆ
ತಾನು ಯಡಿಯೂರಪ್ಪ ಪರ ಎಂದು ಘೋಷಿಸಿದ ಬಳಿಕ ಸಚಿವ ಯೋಗೇಶ್ವರ್ ಇಂದು ತಮ್ಮ ಪ್ರವಾಸೋದ್ಯಮ ಇಲಾಖೆ ಕಾರ್ಯಗಳಲ್ಲಿ ಫುಲ್​ ಬ್ಯುಸಿ!
KUSHAL V
|

Updated on:Dec 01, 2020 | 12:00 PM

Share

ಬೆಂಗಳೂರು: C.P.ಯೋಗೇಶ್ವರ್‌ರನ್ನ ನೂರಕ್ಕೆ ನೂರರಷ್ಟು ಮಂತ್ರಿ ಮಾಡ್ತೇವೆ ಎಂದು ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸದ್ಯ, ವಿಧಾನ ಪರಿಷತ್ ಬಿಜೆಪಿ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್​ಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಜೊತೆಗೆ, H.ವಿಶ್ವನಾಥ್ ಅನರ್ಹತೆ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ನಿರಾಕರಿಸಿದರು.

ಇತ್ತ, ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ MLC C.P.ಯೋಗೇಶ್ವರ್ ಮಂತ್ರಿ ಮಾಡುವುದಾಗಿ ಸಿಎಂ ಹೇಳಿದ್ದಕ್ಕೆ ಧನ್ಯವಾದ. ಎಂದು ಟಿವಿ9 ಜೊತೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಸಿಎಂ ಬಿಎಸ್‌ವೈ ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಆಭಾರಿ. ಒಬ್ಬ ವ್ಯಕ್ತಿಯಿಂದ ನಾನು ಮಂತ್ರಿಯಾಗುತ್ತಿಲ್ಲ. ಸಚಿವ ರಮೇಶ್ ಜಾರಕಿಹೊಳಿ ನನ್ನ ಒಳ್ಳೆಯ ಸ್ನೇಹಿತರು ಎಂದು ಟಿವಿ9ಗೆ MLC ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಯೋಗೇಶ್ವರ್​ಗೆ ಸಚಿವ ಸ್ಥಾನ ಕೊಡಿಸುವಲ್ಲಿ ಸಾಹುಕಾರ್ ಸಕ್ಸಸ್ ಸಿ.ಪಿ‌.ಯೋಗೇಶ್ವರ್​ಗೆ ಸಚಿವ ಸ್ಥಾನ ನೀಡುವಲ್ಲಿ ಸಚಿವ ರಮೇಶ್​ ಜಾರಕಿಹೊಳಿ ಹಠಕ್ಕೆ ಬಿದ್ದು ಕಡೆಗೂ ಸಿ.ಪಿ ಯೋಗೇಶ್ವರ್​ಗೆ ಸಚಿವ ಸ್ಥಾನ ಕೊಡಿಸಲು ಸಕ್ಸಸ್ ಆಗಿದ್ದಾರೆ ಎಂಬ ಮಾತು ಕೇಳಿಬಂದಿದೆ. ಸತತ ಒಂದು ವಾರದ ಕಾಲ ದೆಹಲಿಯಲ್ಲಿ ಬೀಡು ಬಿಟ್ಟಿದ್ದ ರಮೇಶ್​ ಜಾರಕಿಹೊಳಿ‌ ಸಿ.ಪಿ.ಯೋಗೇಶ್ವರ್​ಗೆ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು ಎಂದು ಹೇಳಲಾಗಿದೆ. ಇದೀಗ, ರಮೇಶ್ ಜಾರಕಿಹೊಳಿ‌ ಲಾಬಿಗೆ ಬಿಜೆಪಿ ವರಿಷ್ಠರು ಮತ್ತು ಸಿಎಂ ಯಡಿಯೂರಪ್ಪ ಮಣಿದಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಸಿ.ಪಿ.ಯೋಗೀಶ್ವರ್​ಗೆ‌ ಸಚಿವ ಸ್ಥಾನ ನೀಡದಿದ್ದರೆ ಯಾವ ತ್ಯಾಗಕ್ಕೂ ಸಿದ್ಧ ಎಂಬ ಸಾಹುಕಾರ್​ ಎಚ್ಚರಿಕೆಗೆ ಮಣಿದ ವರಿಷ್ಠರು ಹಾಗೂ ಸಿಎಂ ಯಡಿಯೂರಪ್ಪ ಕೊನೆಗೂ ಸಚಿವ ಸಂಪುಟ ವಿಸ್ತರಣೆಗೂ ಮುನ್ನವೇ ಯೋಗೇಶ್ವರ್ ಹೆಸರು ಬಹಿರಂಗ ಪಡಿಸಿದ್ದಾರೆ. ಇದೀಗ, ದಿನೇ ದಿನೆ ಸರ್ಕಾರದಲ್ಲಿ ಪ್ರಭಾವಿ ನಾಯಕನಾಗಿ ಬೆಳೆಯುತ್ತಿರುವ ಸಚಿವ ರಮೇಶ್​ ಜಾರಕಿಹೊಳಿಗೆ ಈ ಘೋಷಣೆ ಮತ್ತಷ್ಟು ಬಲ ತಂದುಕೊಟ್ಟಿದೆ.

Published On - 11:32 am, Tue, 1 December 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು