AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ನೀಡೋ ವಿಚಾರದಲ್ಲಿ ಅಡಕತ್ತರಿಗೆ ಸಿಕ್ಕ ಯಡಿಯೂರಪ್ಪ ಸರ್ಕಾರ..

ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ನೀಡೋ ವಿಚಾರದಲ್ಲಿ ಯಡಿಯೂರಪ್ಪ ಸರ್ಕಾರ ಅಡಕತ್ತರಿಗೆ ಸಿಕ್ಕಿದೆ. ಜಿಂದಾಲ್​ಗೆ ಗುತ್ತಿಗೆ ಆಧಾರದ ಮೇಲೆ ನೀಡಿದ್ದ ಭೂಮಿಯನ್ನ ಯಾವುದೇ ಕಾರಣಕ್ಕೂ ಶುದ್ಧ ಕ್ರಯಪತ್ರ ಮಾಡಿಕೊಡಬಾರದು ಅಂತಾ ಹಿಂದಿನ ಸರ್ಕಾರದ ವಿರುದ್ಧ ರಂಪ ರಾಮಾಯಣ ಮಾಡಿದ್ದ ಬಿಜೆಪಿ, ತಾನೇ ತೋಡಿದ್ದ ಹಳ್ಳಕ್ಕೆ ಬೀಳುವ ಪರಿಸ್ಥಿತಿಗೆ ಬಂದಿದೆ.

ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ನೀಡೋ ವಿಚಾರದಲ್ಲಿ ಅಡಕತ್ತರಿಗೆ ಸಿಕ್ಕ ಯಡಿಯೂರಪ್ಪ ಸರ್ಕಾರ..
ಆಯೇಷಾ ಬಾನು
|

Updated on: Dec 06, 2020 | 6:56 AM

Share

ಬೆಂಗಳೂರು: ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ನೀಡೋ ವಿಚಾರದಲ್ಲಿ ಸದನದ ಒಳಗೆ, ಹೊರಗೆ ದೊಡ್ಡ ಸದ್ದು ಮಾಡಿದ್ದ ಕಮಲ ಪಾಳಯಕ್ಕೆ ಈಗ ಬಡ್ಡಿ ಸಮೇತ ಪ್ರಾಯಶ್ಚಿತ ಮಾಡಿಕೊಳ್ಳುವ ಕಾಲ ಸನ್ನಿಹಿತವಾಗಿದೆ. ಅದರಲ್ಲೂ ಜಿಂದಾಲ್ ವಿಷಯವನ್ನೇ ಪ್ರಧಾನವಾಗಿ ಮುಂದಿಟ್ಟುಕೊಂಡು, ‘ಕೈ’ ಬಿಟ್ಟು ಕಮಲ ಹಿಡಿದಿದ್ದ ಆನಂದ್ ಸಿಂಗ್ ಅವರಿಗಂತೂ ಈಗ ಕೋಲು ಕೊಟ್ಟು ಹೊಡೆಸಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ.

ಅಂದಹಾಗೆ, ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ ಬಳಿ ಜಿಂದಾಲ್ ತನ್ನ 2ನೇ ಘಟಕವನ್ನ ವಿಸ್ತರಣೆ ಮಾಡಲು 2007-08ರಲ್ಲಿ 3,667 ಎಕರೆಗೆ ಅರ್ಜಿ ಸಲ್ಲಿಸುತ್ತದೆ. ಅಂದಿನ ಹೆಚ್​ಡಿಕೆ ನೇತೃತ್ವದ 20-20 ಸರಕಾರದಲ್ಲಿ ಡಿಸಿಎಂ ಹಾಗೂ ಕೈಗಾರಿಕಾ ಮಂತ್ರಿ ಆಗಿದ್ದ ಯಡಿಯೂರಪ್ಪ ಎಕರೆಗೆ 1 ಲಕ್ಷ 22 ಸಾವಿರ ರೂಪಾಯಿಯಿಂದ 1 ಲಕ್ಷ 50 ಸಾವಿರ ರೂಪಾಯಿ ಲೆಕ್ಕದಲ್ಲಿ ಜಿಂದಾಲ್​ ಕಂಪನಿಗೆ ಗುತ್ತಿಗೆ ಆಧಾರದ ಮೇಲೆ ಭೂಮಿ ಕೊಟ್ಟಿದ್ರು.

ಈ ಒಪ್ಪಂದದ ಪ್ರಕಾರ 10 ವರ್ಷದ ಬಳಿಕ ಈ ಭೂಮಿಯನ್ನ ಸರ್ಕಾರ ಜಿಂದಾಲ್ ಕಂಪನಿಗೆ ಶುದ್ಧ ಕ್ರಯ ಪತ್ರ ಮಾಡಿಕೊಡಬೇಕು ಅಂತಾ ಒಪ್ಪಂದ ಆಗಿತ್ತು. ಇದೇ ರೀತಿ 2018ರ ಮೈತ್ರಿ ಸರ್ಕಾರದಲ್ಲಿ ಜಿಂದಾಲ್ ಕಂಪನಿಗೆ ಭೂಮಿ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದಾಗ ಬಿಜೆಪಿ ವಿರೋಧಿಸಿತ್ತು. ಈಗ ಜಿಂದಾಲ್ ಕಂಪನಿಗೆ ಭೂಮಿ ನೀಡಲೇಬೇಕಾದ ಸಂದಿಗ್ಧ ಪರಿಸ್ಥಿತಿಗೆ ಬಿಜೆಪಿ ಸರ್ಕಾರ ಬಂದಿದೆ.

ಕೆಲವೇ ತಿಂಗಳ ಹಿಂದೆ ಜಿಂದಾಲ್ ವಿರುದ್ಧ ತೊಡೆ ತಟ್ಟಿದ್ದ ಯಡಿಯೂರಪ್ಪ, ಈಗ ತಮ್ಮದೇ ಸರ್ಕಾರದಲ್ಲಿ ಜಿಂದಾಲ್ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿಕೊಡಬೇಕು. ಇಲ್ಲದಿದ್ರೆ, ಭಾರಿ ಸಂಕಷ್ಟಕ್ಕೆ ಗುರಿಯಾಗಲಿದೆ. ಈ ಅವಮಾನದಿಂದ ತಪ್ಪಿಸಿಕೊಳ್ಳಲು ಸರ್ಕಾರ ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸಂಪುಟ ಉಪ ಸಮಿತಿ ರಚನೆ ಮಾಡಿದೆ. ಈ ಮೂಲಕ ತಾತ್ಕಾಲಿಕವಾಗಿ ಮುಖ ಮುಚ್ಚಿಕೊಳ್ಳೊ ಕೆಲಸ ಮಾಡಿದೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!