AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ನೀಡೋ ವಿಚಾರದಲ್ಲಿ ಅಡಕತ್ತರಿಗೆ ಸಿಕ್ಕ ಯಡಿಯೂರಪ್ಪ ಸರ್ಕಾರ..

ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ನೀಡೋ ವಿಚಾರದಲ್ಲಿ ಯಡಿಯೂರಪ್ಪ ಸರ್ಕಾರ ಅಡಕತ್ತರಿಗೆ ಸಿಕ್ಕಿದೆ. ಜಿಂದಾಲ್​ಗೆ ಗುತ್ತಿಗೆ ಆಧಾರದ ಮೇಲೆ ನೀಡಿದ್ದ ಭೂಮಿಯನ್ನ ಯಾವುದೇ ಕಾರಣಕ್ಕೂ ಶುದ್ಧ ಕ್ರಯಪತ್ರ ಮಾಡಿಕೊಡಬಾರದು ಅಂತಾ ಹಿಂದಿನ ಸರ್ಕಾರದ ವಿರುದ್ಧ ರಂಪ ರಾಮಾಯಣ ಮಾಡಿದ್ದ ಬಿಜೆಪಿ, ತಾನೇ ತೋಡಿದ್ದ ಹಳ್ಳಕ್ಕೆ ಬೀಳುವ ಪರಿಸ್ಥಿತಿಗೆ ಬಂದಿದೆ.

ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ನೀಡೋ ವಿಚಾರದಲ್ಲಿ ಅಡಕತ್ತರಿಗೆ ಸಿಕ್ಕ ಯಡಿಯೂರಪ್ಪ ಸರ್ಕಾರ..
ಆಯೇಷಾ ಬಾನು
ಆಯೇಷಾ ಬಾನು|

Updated on: Dec 06, 2020 | 6:56 AM

Share

ಬೆಂಗಳೂರು: ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ನೀಡೋ ವಿಚಾರದಲ್ಲಿ ಸದನದ ಒಳಗೆ, ಹೊರಗೆ ದೊಡ್ಡ ಸದ್ದು ಮಾಡಿದ್ದ ಕಮಲ ಪಾಳಯಕ್ಕೆ ಈಗ ಬಡ್ಡಿ ಸಮೇತ ಪ್ರಾಯಶ್ಚಿತ ಮಾಡಿಕೊಳ್ಳುವ ಕಾಲ ಸನ್ನಿಹಿತವಾಗಿದೆ. ಅದರಲ್ಲೂ ಜಿಂದಾಲ್ ವಿಷಯವನ್ನೇ ಪ್ರಧಾನವಾಗಿ ಮುಂದಿಟ್ಟುಕೊಂಡು, ‘ಕೈ’ ಬಿಟ್ಟು ಕಮಲ ಹಿಡಿದಿದ್ದ ಆನಂದ್ ಸಿಂಗ್ ಅವರಿಗಂತೂ ಈಗ ಕೋಲು ಕೊಟ್ಟು ಹೊಡೆಸಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ.

ಅಂದಹಾಗೆ, ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ ಬಳಿ ಜಿಂದಾಲ್ ತನ್ನ 2ನೇ ಘಟಕವನ್ನ ವಿಸ್ತರಣೆ ಮಾಡಲು 2007-08ರಲ್ಲಿ 3,667 ಎಕರೆಗೆ ಅರ್ಜಿ ಸಲ್ಲಿಸುತ್ತದೆ. ಅಂದಿನ ಹೆಚ್​ಡಿಕೆ ನೇತೃತ್ವದ 20-20 ಸರಕಾರದಲ್ಲಿ ಡಿಸಿಎಂ ಹಾಗೂ ಕೈಗಾರಿಕಾ ಮಂತ್ರಿ ಆಗಿದ್ದ ಯಡಿಯೂರಪ್ಪ ಎಕರೆಗೆ 1 ಲಕ್ಷ 22 ಸಾವಿರ ರೂಪಾಯಿಯಿಂದ 1 ಲಕ್ಷ 50 ಸಾವಿರ ರೂಪಾಯಿ ಲೆಕ್ಕದಲ್ಲಿ ಜಿಂದಾಲ್​ ಕಂಪನಿಗೆ ಗುತ್ತಿಗೆ ಆಧಾರದ ಮೇಲೆ ಭೂಮಿ ಕೊಟ್ಟಿದ್ರು.

ಈ ಒಪ್ಪಂದದ ಪ್ರಕಾರ 10 ವರ್ಷದ ಬಳಿಕ ಈ ಭೂಮಿಯನ್ನ ಸರ್ಕಾರ ಜಿಂದಾಲ್ ಕಂಪನಿಗೆ ಶುದ್ಧ ಕ್ರಯ ಪತ್ರ ಮಾಡಿಕೊಡಬೇಕು ಅಂತಾ ಒಪ್ಪಂದ ಆಗಿತ್ತು. ಇದೇ ರೀತಿ 2018ರ ಮೈತ್ರಿ ಸರ್ಕಾರದಲ್ಲಿ ಜಿಂದಾಲ್ ಕಂಪನಿಗೆ ಭೂಮಿ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದಾಗ ಬಿಜೆಪಿ ವಿರೋಧಿಸಿತ್ತು. ಈಗ ಜಿಂದಾಲ್ ಕಂಪನಿಗೆ ಭೂಮಿ ನೀಡಲೇಬೇಕಾದ ಸಂದಿಗ್ಧ ಪರಿಸ್ಥಿತಿಗೆ ಬಿಜೆಪಿ ಸರ್ಕಾರ ಬಂದಿದೆ.

ಕೆಲವೇ ತಿಂಗಳ ಹಿಂದೆ ಜಿಂದಾಲ್ ವಿರುದ್ಧ ತೊಡೆ ತಟ್ಟಿದ್ದ ಯಡಿಯೂರಪ್ಪ, ಈಗ ತಮ್ಮದೇ ಸರ್ಕಾರದಲ್ಲಿ ಜಿಂದಾಲ್ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿಕೊಡಬೇಕು. ಇಲ್ಲದಿದ್ರೆ, ಭಾರಿ ಸಂಕಷ್ಟಕ್ಕೆ ಗುರಿಯಾಗಲಿದೆ. ಈ ಅವಮಾನದಿಂದ ತಪ್ಪಿಸಿಕೊಳ್ಳಲು ಸರ್ಕಾರ ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸಂಪುಟ ಉಪ ಸಮಿತಿ ರಚನೆ ಮಾಡಿದೆ. ಈ ಮೂಲಕ ತಾತ್ಕಾಲಿಕವಾಗಿ ಮುಖ ಮುಚ್ಚಿಕೊಳ್ಳೊ ಕೆಲಸ ಮಾಡಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ