ಡಿ.9ರ ನಂತ್ರ ಯಡಿಯೂರಪ್ಪ ರಾಜೀನಾಮೆ ಕೊಡಲೇಬೇಕು -ಸಿದ್ದರಾಮಯ್ಯ

ಬೆಂಗಳೂರು: ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ಬಿಜೆಪಿ ಸೋಲುತ್ತೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೆ. ಡಿಸೆಂಬರ್ 9ರ ನಂತ್ರ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಶಾಸಕರನ್ನ ಪಕ್ಷಾಂತರ ಮಾಡಿದ್ದೇ ಬಿಎಸ್​ವೈ ಸಾಧನೆ: ನನ್ನ ಅವಧಿಯಲ್ಲಿ ಅನೇಕ ಯೋಜನೆಗಳನ್ನು ಮಾಡಿದ್ದೇನೆ. ಶಾಸಕರನ್ನ ಪಕ್ಷಾಂತರ ಮಾಡಿದ್ದು ಹಾಗು ವಿಪಕ್ಷ ಶಾಸಕರ ಅನುದಾನ ಕಡಿತ ಮಾಡಿದ್ದೇ 4 ತಿಂಗಳ ಯಡಿಯೂರಪ್ಪ ಅವರ ಸಾಧನೆ. ಯಡಿಯೂರಪ್ಪ ಟಿಪ್ಪು ಜಯಂತಿ ನಿಲ್ಲಿಸಿದ್ದು ಅವರ ಸಾಧನೆ ಅಷ್ಟೆ ಎಂದು ಸಿದ್ದರಾಮಯ್ಯ […]

ಡಿ.9ರ ನಂತ್ರ ಯಡಿಯೂರಪ್ಪ ರಾಜೀನಾಮೆ ಕೊಡಲೇಬೇಕು -ಸಿದ್ದರಾಮಯ್ಯ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಸಾಧು ಶ್ರೀನಾಥ್​

Updated on: Dec 01, 2019 | 2:11 PM

ಬೆಂಗಳೂರು: ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ಬಿಜೆಪಿ ಸೋಲುತ್ತೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೆ. ಡಿಸೆಂಬರ್ 9ರ ನಂತ್ರ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಶಾಸಕರನ್ನ ಪಕ್ಷಾಂತರ ಮಾಡಿದ್ದೇ ಬಿಎಸ್​ವೈ ಸಾಧನೆ:
ನನ್ನ ಅವಧಿಯಲ್ಲಿ ಅನೇಕ ಯೋಜನೆಗಳನ್ನು ಮಾಡಿದ್ದೇನೆ. ಶಾಸಕರನ್ನ ಪಕ್ಷಾಂತರ ಮಾಡಿದ್ದು ಹಾಗು ವಿಪಕ್ಷ ಶಾಸಕರ ಅನುದಾನ ಕಡಿತ ಮಾಡಿದ್ದೇ 4 ತಿಂಗಳ ಯಡಿಯೂರಪ್ಪ ಅವರ ಸಾಧನೆ. ಯಡಿಯೂರಪ್ಪ ಟಿಪ್ಪು ಜಯಂತಿ ನಿಲ್ಲಿಸಿದ್ದು ಅವರ ಸಾಧನೆ ಅಷ್ಟೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ನಿಲ್ಲಿಸಿದ್ರೆ ಪ್ರತಿಭಟನೆ:
ಬೆಂಗಳೂರಿಗೆ 10 ಸಾವಿರ ಕೋಟಿ ನಾನು ಕೊಟ್ಟಿದ್ದೆ. ಆದ್ರೆ ಯಡಿಯೂರಪ್ಪ ಏನು ಕೊಟ್ಟಿಲ್ಲ. ಅನ್ನಭಾಗ್ಯ, ಮಕ್ಕಳಿಗೆ ಹಾಲು, ಇಂದಿರಾ ಕ್ಯಾಂಟೀನ್, ಹಾಲಿಗೆ ಸಬ್ಸಿಡಿ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಒಂದು ವೇಳೆ ಇಂದಿರಾ ಕ್ಯಾಂಟೀನ್ ನಿಲ್ಲಿಸಿದ್ರೆ, ಅನ್ನ ಭಾಗ್ಯ ಅಕ್ಕಿ ಕಡಿಮೆ ಮಾಡಿದ್ರೆ ಹೋರಾಟ ಮಾಡ್ತೀನಿ ಎಂದು ಎಚ್ಚರಿಕೆ ನೀಡಿದ್ರು.

ದೇಶದಲ್ಲಿ ಜಿಡಿಪಿ ಕುಸಿಯುತ್ತಿದೆ:
ಶ್ರೀಲಂಕಾ, ಬಾಂಗ್ಲಾದೇಶಕ್ಕಿಂತ ಜಿಡಿಪಿ ಕಡಿಮೆ ಆಗಿದೆ. ಯುವಕರು ಮೋದಿ ಮೋದಿ ಅಂದ್ರು. ಇವತ್ತು ಅವರಿಗೆ ಮೋದಿ ತಿರುಪತಿ ನಾಮ ಹಾಕಿದ್ರು. ಪಕೋಡ ಮಾರಿ ಅಂತಾರೆ. ಇಂತಹವರು ನಿಮಗೆ ಬೇಕಾ? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 2:10 pm, Sun, 1 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us