AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ತಪ್ಪಿದ ಬಿಎಸ್​ವೈ ಸರ್ಕಾರ, ಘೋಷಿಸಿದ್ದು ರೂ.15 ಲಕ್ಷ, ಕೊಟ್ಟಿದ್ದು 5 ಮಾತ್ರ

ಕಳೆದ ಜೂನ್ 14ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯುವಾಗ ನೀರಿಗೆ ಜಾರಿ ಬಿದ್ದು ಜಲಸಮಾಧಿಯಾದ ಒಬ್ಬ ಮಹಿಳೆ ಹಾಗೂ ಆಕೆಯ ಎರಡು ಮಕ್ಕಳ ಕುಟುಂಬಕ್ಕೆ ತಲಾ ರೂ. 5 ಲಕ್ಷದಂತೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇವಲ ರೂ. 5 ಲಕ್ಷ ನೀಡಿ ಕೈತೊಳೆದುಕೊಂಡಿರುವಂತಿದೆ. ಗೀತಾ ಎನ್ನುವ ಮಹಿಳೆ, ಆಕೆಯ ಇಬ್ಬರು ಪುತ್ರಿಯರು ಕೆರೆಯಲ್ಲಿ ಮುಳುಗಿ ಮರಣಿಸಿದ್ದರು. ಆಕೆಯ ಕುಟುಂಬಕ್ಕೆ ರೂ. 15 ಲಕ್ಷ […]

ಮಾತು ತಪ್ಪಿದ ಬಿಎಸ್​ವೈ ಸರ್ಕಾರ, ಘೋಷಿಸಿದ್ದು ರೂ.15 ಲಕ್ಷ, ಕೊಟ್ಟಿದ್ದು 5 ಮಾತ್ರ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 20, 2020 | 7:02 PM

Share

ಕಳೆದ ಜೂನ್ 14ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯುವಾಗ ನೀರಿಗೆ ಜಾರಿ ಬಿದ್ದು ಜಲಸಮಾಧಿಯಾದ ಒಬ್ಬ ಮಹಿಳೆ ಹಾಗೂ ಆಕೆಯ ಎರಡು ಮಕ್ಕಳ ಕುಟುಂಬಕ್ಕೆ ತಲಾ ರೂ. 5 ಲಕ್ಷದಂತೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇವಲ ರೂ. 5 ಲಕ್ಷ ನೀಡಿ ಕೈತೊಳೆದುಕೊಂಡಿರುವಂತಿದೆ.

ಗೀತಾ ಎನ್ನುವ ಮಹಿಳೆ, ಆಕೆಯ ಇಬ್ಬರು ಪುತ್ರಿಯರು ಕೆರೆಯಲ್ಲಿ ಮುಳುಗಿ ಮರಣಿಸಿದ್ದರು. ಆಕೆಯ ಕುಟುಂಬಕ್ಕೆ ರೂ. 15 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದ ಸರ್ಕಾರ ಗುರುವಾರದಂದು ರೂ.5 ಲಕ್ಷಗಳ ಚೆಕ್ ನೀಡಿತು. ನಾಗಮಂಗಲ ತಹಶೀಲ್ದಾರ್​ ಅವರು ಪರಿಹಾರದ ಚೆಕ್​ ಹಸ್ತಾಂತರಿಸಿದರು.

ಸರ್ಕಾರದ ನಡೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಂತ್ರಸ್ತ ಕುಟುಂಬವು ಟಿವಿ9ನೊಂದಿಗೆ ತನ್ನ ದುಃಖ ತೋಡಿಕೊಳ್ಳುತ್ತಾ, ಉಳಿದ ರೂ. 10 ಲಕ್ಷ ಮೊತ್ತವನ್ನು ನಂತರ ಬಿಡುಗಡೆ ಮಾಡುವ ಭರವಸೆಯನ್ನು ಸರ್ಕಾರ ತಹಶೀಲ್ದಾರರ ಮೂಲಕ ನೀಡಿದೆ ಎಂದರು.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ