AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ತಪ್ಪಿದ ಬಿಎಸ್​ವೈ ಸರ್ಕಾರ, ಘೋಷಿಸಿದ್ದು ರೂ.15 ಲಕ್ಷ, ಕೊಟ್ಟಿದ್ದು 5 ಮಾತ್ರ

ಕಳೆದ ಜೂನ್ 14ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯುವಾಗ ನೀರಿಗೆ ಜಾರಿ ಬಿದ್ದು ಜಲಸಮಾಧಿಯಾದ ಒಬ್ಬ ಮಹಿಳೆ ಹಾಗೂ ಆಕೆಯ ಎರಡು ಮಕ್ಕಳ ಕುಟುಂಬಕ್ಕೆ ತಲಾ ರೂ. 5 ಲಕ್ಷದಂತೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇವಲ ರೂ. 5 ಲಕ್ಷ ನೀಡಿ ಕೈತೊಳೆದುಕೊಂಡಿರುವಂತಿದೆ. ಗೀತಾ ಎನ್ನುವ ಮಹಿಳೆ, ಆಕೆಯ ಇಬ್ಬರು ಪುತ್ರಿಯರು ಕೆರೆಯಲ್ಲಿ ಮುಳುಗಿ ಮರಣಿಸಿದ್ದರು. ಆಕೆಯ ಕುಟುಂಬಕ್ಕೆ ರೂ. 15 ಲಕ್ಷ […]

ಮಾತು ತಪ್ಪಿದ ಬಿಎಸ್​ವೈ ಸರ್ಕಾರ, ಘೋಷಿಸಿದ್ದು ರೂ.15 ಲಕ್ಷ, ಕೊಟ್ಟಿದ್ದು 5 ಮಾತ್ರ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 20, 2020 | 7:02 PM

Share

ಕಳೆದ ಜೂನ್ 14ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯುವಾಗ ನೀರಿಗೆ ಜಾರಿ ಬಿದ್ದು ಜಲಸಮಾಧಿಯಾದ ಒಬ್ಬ ಮಹಿಳೆ ಹಾಗೂ ಆಕೆಯ ಎರಡು ಮಕ್ಕಳ ಕುಟುಂಬಕ್ಕೆ ತಲಾ ರೂ. 5 ಲಕ್ಷದಂತೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇವಲ ರೂ. 5 ಲಕ್ಷ ನೀಡಿ ಕೈತೊಳೆದುಕೊಂಡಿರುವಂತಿದೆ.

ಗೀತಾ ಎನ್ನುವ ಮಹಿಳೆ, ಆಕೆಯ ಇಬ್ಬರು ಪುತ್ರಿಯರು ಕೆರೆಯಲ್ಲಿ ಮುಳುಗಿ ಮರಣಿಸಿದ್ದರು. ಆಕೆಯ ಕುಟುಂಬಕ್ಕೆ ರೂ. 15 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದ ಸರ್ಕಾರ ಗುರುವಾರದಂದು ರೂ.5 ಲಕ್ಷಗಳ ಚೆಕ್ ನೀಡಿತು. ನಾಗಮಂಗಲ ತಹಶೀಲ್ದಾರ್​ ಅವರು ಪರಿಹಾರದ ಚೆಕ್​ ಹಸ್ತಾಂತರಿಸಿದರು.

ಸರ್ಕಾರದ ನಡೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಂತ್ರಸ್ತ ಕುಟುಂಬವು ಟಿವಿ9ನೊಂದಿಗೆ ತನ್ನ ದುಃಖ ತೋಡಿಕೊಳ್ಳುತ್ತಾ, ಉಳಿದ ರೂ. 10 ಲಕ್ಷ ಮೊತ್ತವನ್ನು ನಂತರ ಬಿಡುಗಡೆ ಮಾಡುವ ಭರವಸೆಯನ್ನು ಸರ್ಕಾರ ತಹಶೀಲ್ದಾರರ ಮೂಲಕ ನೀಡಿದೆ ಎಂದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್