ಮಾತು ತಪ್ಪಿದ ಬಿಎಸ್​ವೈ ಸರ್ಕಾರ, ಘೋಷಿಸಿದ್ದು ರೂ.15 ಲಕ್ಷ, ಕೊಟ್ಟಿದ್ದು 5 ಮಾತ್ರ

ಕಳೆದ ಜೂನ್ 14ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯುವಾಗ ನೀರಿಗೆ ಜಾರಿ ಬಿದ್ದು ಜಲಸಮಾಧಿಯಾದ ಒಬ್ಬ ಮಹಿಳೆ ಹಾಗೂ ಆಕೆಯ ಎರಡು ಮಕ್ಕಳ ಕುಟುಂಬಕ್ಕೆ ತಲಾ ರೂ. 5 ಲಕ್ಷದಂತೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇವಲ ರೂ. 5 ಲಕ್ಷ ನೀಡಿ ಕೈತೊಳೆದುಕೊಂಡಿರುವಂತಿದೆ. ಗೀತಾ ಎನ್ನುವ ಮಹಿಳೆ, ಆಕೆಯ ಇಬ್ಬರು ಪುತ್ರಿಯರು ಕೆರೆಯಲ್ಲಿ ಮುಳುಗಿ ಮರಣಿಸಿದ್ದರು. ಆಕೆಯ ಕುಟುಂಬಕ್ಕೆ ರೂ. 15 ಲಕ್ಷ […]

ಮಾತು ತಪ್ಪಿದ ಬಿಎಸ್​ವೈ ಸರ್ಕಾರ, ಘೋಷಿಸಿದ್ದು ರೂ.15 ಲಕ್ಷ, ಕೊಟ್ಟಿದ್ದು 5 ಮಾತ್ರ

Updated on: Aug 20, 2020 | 7:02 PM

ಕಳೆದ ಜೂನ್ 14ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯುವಾಗ ನೀರಿಗೆ ಜಾರಿ ಬಿದ್ದು ಜಲಸಮಾಧಿಯಾದ ಒಬ್ಬ ಮಹಿಳೆ ಹಾಗೂ ಆಕೆಯ ಎರಡು ಮಕ್ಕಳ ಕುಟುಂಬಕ್ಕೆ ತಲಾ ರೂ. 5 ಲಕ್ಷದಂತೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇವಲ ರೂ. 5 ಲಕ್ಷ ನೀಡಿ ಕೈತೊಳೆದುಕೊಂಡಿರುವಂತಿದೆ.

ಗೀತಾ ಎನ್ನುವ ಮಹಿಳೆ, ಆಕೆಯ ಇಬ್ಬರು ಪುತ್ರಿಯರು ಕೆರೆಯಲ್ಲಿ ಮುಳುಗಿ ಮರಣಿಸಿದ್ದರು. ಆಕೆಯ ಕುಟುಂಬಕ್ಕೆ ರೂ. 15 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದ ಸರ್ಕಾರ ಗುರುವಾರದಂದು ರೂ.5 ಲಕ್ಷಗಳ ಚೆಕ್ ನೀಡಿತು. ನಾಗಮಂಗಲ ತಹಶೀಲ್ದಾರ್​ ಅವರು ಪರಿಹಾರದ ಚೆಕ್​ ಹಸ್ತಾಂತರಿಸಿದರು.

ಸರ್ಕಾರದ ನಡೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಂತ್ರಸ್ತ ಕುಟುಂಬವು ಟಿವಿ9ನೊಂದಿಗೆ ತನ್ನ ದುಃಖ ತೋಡಿಕೊಳ್ಳುತ್ತಾ, ಉಳಿದ ರೂ. 10 ಲಕ್ಷ ಮೊತ್ತವನ್ನು ನಂತರ ಬಿಡುಗಡೆ ಮಾಡುವ ಭರವಸೆಯನ್ನು ಸರ್ಕಾರ ತಹಶೀಲ್ದಾರರ ಮೂಲಕ ನೀಡಿದೆ ಎಂದರು.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
Follow Us