AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021: ಕೃಷಿ ಸೆಸ್‌ನಿಂದ ಗ್ರಾಹಕರಿಗೆ ಯಾವುದೇ ಹೊರೆ ಆಗುವುದಿಲ್ಲ- ನಿರ್ಮಲಾ ಸೀತಾರಾಮನ್​ ಸ್ಪಷ್ಟನೆ

ಬಜೆಟ್​ ಮಂಡನೆ ಬಳಿಕ ಇಂದು ಮಧ್ಯಾಹ್ನ ನಿರ್ಮಲಾ ಸೀತಾರಾಮನ್​ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಕೃಷಿ ಸೆಸ್​ನಿಂದ ಪೆಟ್ರೋಲ್​ ಬೆಲೆ ಹೆಚ್ಚಾಗಲಿದೆ ಎನ್ನಲಾಗಿತ್ತು.

Budget 2021: ಕೃಷಿ ಸೆಸ್‌ನಿಂದ ಗ್ರಾಹಕರಿಗೆ ಯಾವುದೇ ಹೊರೆ ಆಗುವುದಿಲ್ಲ- ನಿರ್ಮಲಾ ಸೀತಾರಾಮನ್​ ಸ್ಪಷ್ಟನೆ
ನಿರ್ಮಲಾ ಸೀತಾರಾಮನ್​
ರಾಜೇಶ್ ದುಗ್ಗುಮನೆ
|

Updated on:Feb 01, 2021 | 4:30 PM

Share

ನವದೆಹಲಿ:  ಪೆಟ್ರೋಲ್​ ಹಾಗೂ ಡೀಸೆಲ್​ ಮೇಲೆ ವಿಧಿಸಿರುವ ಕೃಷಿ ಸೆಸ್​ನಿಂದ ಗ್ರಾಹಕರಿಗೆ ಹೊರೆ ಆಗುವುದಿಲ್ಲ ಎಂದು ಕೃಷಿ ಸಚಿವೆ ನಿರ್ಮಲಾ ಸೀತಾರಾಮನ್​ ಸ್ಪಷ್ಟನೆ ನೀಡಿದ್ದಾರೆ.

ಬಜೆಟ್​ ಮಂಡನೆ ಬಳಿಕ ಮಧ್ಯಾಹ್ನ ನಿರ್ಮಲಾ ಸೀತಾರಾಮನ್​ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಕೃಷಿ ಸೆಸ್​ನಿಂದ ಪೆಟ್ರೋಲ್​ ಬೆಲೆ ಹೆಚ್ಚಾಗಲಿದೆ ಎನ್ನಲಾಗಿತ್ತು. ಹೀಗಾಗಿ, ಪೆಟ್ರೋಲ್​ ಬಂಕ್​ಗೆ ಜನರು ಮುಗಿಬಿದ್ದು ಪೆಟ್ರೋಲ್​ ಹಾಕಿಸಿಕೊಳ್ಳಲು ತೆರಳಿದ್ದರು.

ಆರೋಗ್ಯ, ಮೂಲ ಸೌಕರ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಒತ್ತು ನೀಡಿದ್ದೇವೆ. ಕೊವಿಡ್ ಟೆಸ್ಟಿಂಗ್‌ ಲ್ಯಾಬ್‌ ಹೆಚ್ಚಿಸಲು ಆದ್ಯತೆ ನೀಡಿದ್ದೇವೆ. ರಾಜ್ಯ ಮಟ್ಟದಲ್ಲೂ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ್ದೇವೆ ಎಂದರು. ಮೂಲ ಸೌಕರ್ಯಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಿದ್ದೇವೆ. ಕೃಷಿ ಕ್ಷೇತ್ರಕ್ಕೂ ಕೇಂದ್ರ ಬಜೆಟ್‌ನಲ್ಲಿ ಆದ್ಯತೆ ನೀಡಿದ್ದೇವೆ.  ವಿಮಾ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಆದ್ಯತೆ ನೀಡಿದ್ದೇವೆ. ಕೃಷಿ ಮೂಲಸೌಲಭ್ಯಗಳಿಗಾಗಿ 40,000 ಕೋಟಿ ಮೀಸಲು ಇಟ್ಟಿದ್ದೇವೆ ಎಂದು ನಿರ್ಮಲಾ ತಿಳಿಸಿದ್ದಾರೆ.

ಈ ಬಾರಿಯ ಬಜೆಟ್​ ಜನಸಾಮಾನ್ಯರ ಪರವಾಗಿದೆ. ನಾವು ಎಲ್ಲ ಕ್ಷೇತ್ರಗಳ ಮೇಲೂ ಗಮನಹರಿಸಿದ್ದೇವೆ ಎಂದು ನಿರ್ಮಲಾ ಹೇಳಿದ್ದಾರೆ.

Budget 2021 | ಚಿನ್ನ-ಬೆಳ್ಳಿ ಮೇಲೆ ಕಸ್ಟಮ್ಸ್​ ಸುಂಕ ಇಳಿಸಿದ ನಿರ್ಮಲಾ ಸೀತಾರಾಮನ್: ಚಿನ್ನದ ಬೆಲೆ ದಿಢೀರ್ ಇಳಿಕೆ

Published On - 3:44 pm, Mon, 1 February 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ