AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಪೆಟ್ರೋಲ್, ಡೀಸೆಲ್​ಗೆ ಸೆಸ್ ವಿಧಿಸಿದರೂ ಗ್ರಾಹಕರ ಮೇಲೆ ಹೊರೆ ಬೀಳದು: ನಿರ್ಮಲಾ ಸೀತಾರಾಮನ್

ಕೃಷಿ ಮೂಲಭೂತ ಸೌಕರ್ಯ ಮತ್ತು ಅಭಿವೃದ್ಧಿ ಸಂಬಂಧಿಸಿದಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ವಿಧಿಸಿರುವುದು ನಿಜವಾದರೂ, ಅವುಗಳ ಮೇಲೆ ಈಗಾಗಲೇ ಇದ್ದ ಇತರ ಸುಂಕಗಳನ್ನು ಕಡಿಮೆ ಮಾಡಿರುವುದರಿಂದ ಗ್ರಾಹಕರ ಮೇಲೆ ಹೊರೆ ಬೀಳುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Budget 2021 | ಪೆಟ್ರೋಲ್, ಡೀಸೆಲ್​ಗೆ ಸೆಸ್ ವಿಧಿಸಿದರೂ ಗ್ರಾಹಕರ ಮೇಲೆ ಹೊರೆ ಬೀಳದು: ನಿರ್ಮಲಾ ಸೀತಾರಾಮನ್
ಬಜೆಟ್ ಮಂಡಿಸಲು ಸಂಸತ್ತಿಗೆ ಆಗಮಿಸುತ್ತಿರುವ ನಿರ್ಮಲಾ ಸೀತಾರಾಮನ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 01, 2021 | 9:11 PM

Share

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್​ನಲ್ಲಿ ಕೃಷಿ ಸಂಬಂಧಿತ ಮೂಲ ಸೌಕರ್ಯ ಮತ್ತು ಅಭಿವೃದ್ಧಿಗಾಗಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ₹ 2.5 ಮತ್ತು ಡೀಸೆಲ್ ಮೇಲೆ ₹ 4ರಷ್ಟು ಸೆಸ್ ವಿಧಿಸುವ ಪ್ರಸ್ತಾಪ ಮಾಡಿರುವಾದರೂ ಈ ತೈಲಗಳ ಮೇಲಿನ ಇತರ ತೆರಿಗೆಗಳನ್ನು ಕಡಿತಗೊಳಿಸಿರುವುದರಿಂದ ಗ್ರಾಹಕರ ಮೇಲೆ ಹೊರೆ ಬೀಳುವುದಿಲ್ಲ. ಸರಳವಾಗಿ ಹೇಳಬೇಕೆಂದರೆ, ಪೆಟ್ರೋಲ್ ಮತ್ತು ಡೀಸೆಲ್​ಗಳ ಬೆಲೆಯಲ್ಲಿ ಹೆಚ್ಚಳವಾಗುವುದಿಲ್ಲ.

ಕೃಷಿ ಸೆಸ್ ಇತರ ವಸ್ತುಗಳ ಮೇಲೂ ವಿಧಿಸಲಾಗಿದೆ. ಮದ್ಯದ ಮೇಲೆ ಶೇ 100,  ಚಿನ್ನ ಮತ್ತು ಬೆಳ್ಳಿ ಗಟ್ಟಿಗಳ ಮೇಲೆ ಶೇ 2.5, ಕಚ್ಚಾ ತಾಳೆ ಎಣ್ಣೆಯ ಮೇಲೆ ಶೇ 17.5, ಕಚ್ಚಾ ಸೋಯಾಬೀನ್ ಮತ್ತು ಸೂರ್ಯಕಾಂತಿ ಎಣ್ಣೆಯ ಮೇಲೆ ಶೇ 20ರಷ್ಟು, ಸೇಬುಗಳ ಮೇಲೆ ಶೇ 35 ಮತ್ತು ಬಟಾಣಿ ಮೇಲೆ ಶೇ 40ರಷ್ಟು ಸೆಸ್ ವಿಧಿಸಲಾಗಿದೆ. ಈ ಸೆಸ್​ಗಳು ನಾಳೆಯಿಂದಲೇ (ಫೆ.2) ಅನ್ವಯವಾಗಲಿವೆ.

‘ಕೃಷಿ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ಸಂಬಂಧಿಸಿದಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ವಿಧಿಸಿರುವಂತೆಯೇ, ಅವುಗಳ ಮೇಲಿನ ಮೂಲ ಅಬಕಾರಿ ಸುಂಕ (Basic excise duty – BED) ಮತ್ತು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (Special Additional Excise Duty – SAED) ತಗ್ಗಿಸಲಾಗಿದೆ. ಹೀಗಾಗಿ ಹೊಸ ಸೆಸ್​ನ ಹೊರೆ ಗ್ರಾಹಕರ ಮೇಲೆ ಹೊರೆ ಬೀಳುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

‘ಬ್ರ್ಯಾಂಡೆಡ್ ಅಲ್ಲದ ಪೆಟ್ರೋಲ್ ಮತ್ತು ಡೀಸೆಲ್​ಗಳ ಬೆಲೆಯ ಮೇಲೆ ಅನುಕ್ರಮವಾಗಿ ₹ 1.4 ಮತ್ತು ₹ 1.8ರಷ್ಟು ಅಬಕಾರಿ ಶುಲ್ಕ ಬೀಳುತ್ತಿತ್ತು. ಬ್ರ್ಯಾಂಡೆಡ್ ಅಲ್ಲದ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಎಸ್ಎಈಡಿ ಪ್ರತಿ ಲೀಟರ್​ಗೆ ಅನುಕ್ರಮವಾಗಿ ₹ 11 ಮತ್ತು ₹ 8ರಷ್ಟು ಬೀಳುತ್ತಿತ್ತು. ಇದೇ ತೆರನಾದ ಬದಲಾವಣೆಗಳನ್ನು ಬ್ರ್ಯಾಂಡೆಡ್ ಪೆಟ್ರೋಲ್ ಮತ್ತು ಡೀಸೆಲ್​ಗಳ ಮೇಲೂ ಮಾಡಲಾಗುತ್ತದೆ’ ಎಂದು ನಿರ್ಮಲಾ ಸೀತಾರಾಮನ್ ಹೇಳಿರುವುದನ್ನು ಎಎನ್ಐ ಸುದ್ದಿಸಂಸ್ಥೆ ಉಲ್ಲೇಖಿಸಿದೆ.

ಈ ಸಂಬಂಧ ಎಎನ್​ಐ ಸುದ್ದಿಸಂಸ್ಥೆಯ ಟ್ವೀಟ್ ಇಲ್ಲಿದೆ

Budget 2021 | ಮತ್ತಷ್ಟು ದುಬಾರಿಯಾದ ಪೆಟ್ರೋಲ್, ಡೀಸೆಲ್ ಬೆಲೆ: ಕೃಷಿ ಮೂಲಸೌಕರ್ಯ ಸೆಸ್ ಮೂಲಕ ದರ ಏರಿಕೆ

Budget 2021 | ಚಿನ್ನ-ಬೆಳ್ಳಿ ಮೇಲೆ ಕಸ್ಟಮ್ಸ್​ ಸುಂಕ ಇಳಿಸಿದ ನಿರ್ಮಲಾ ಸೀತಾರಾಮನ್: ಚಿನ್ನದ ಬೆಲೆ ದಿಢೀರ್ ಇಳಿಕೆ

Published On - 5:58 pm, Mon, 1 February 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!