AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಪೆಟ್ರೋಲ್, ಡೀಸೆಲ್​ಗೆ ಸೆಸ್ ವಿಧಿಸಿದರೂ ಗ್ರಾಹಕರ ಮೇಲೆ ಹೊರೆ ಬೀಳದು: ನಿರ್ಮಲಾ ಸೀತಾರಾಮನ್

ಕೃಷಿ ಮೂಲಭೂತ ಸೌಕರ್ಯ ಮತ್ತು ಅಭಿವೃದ್ಧಿ ಸಂಬಂಧಿಸಿದಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ವಿಧಿಸಿರುವುದು ನಿಜವಾದರೂ, ಅವುಗಳ ಮೇಲೆ ಈಗಾಗಲೇ ಇದ್ದ ಇತರ ಸುಂಕಗಳನ್ನು ಕಡಿಮೆ ಮಾಡಿರುವುದರಿಂದ ಗ್ರಾಹಕರ ಮೇಲೆ ಹೊರೆ ಬೀಳುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Budget 2021 | ಪೆಟ್ರೋಲ್, ಡೀಸೆಲ್​ಗೆ ಸೆಸ್ ವಿಧಿಸಿದರೂ ಗ್ರಾಹಕರ ಮೇಲೆ ಹೊರೆ ಬೀಳದು: ನಿರ್ಮಲಾ ಸೀತಾರಾಮನ್
ಬಜೆಟ್ ಮಂಡಿಸಲು ಸಂಸತ್ತಿಗೆ ಆಗಮಿಸುತ್ತಿರುವ ನಿರ್ಮಲಾ ಸೀತಾರಾಮನ್
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on:Feb 01, 2021 | 9:11 PM

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್​ನಲ್ಲಿ ಕೃಷಿ ಸಂಬಂಧಿತ ಮೂಲ ಸೌಕರ್ಯ ಮತ್ತು ಅಭಿವೃದ್ಧಿಗಾಗಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ₹ 2.5 ಮತ್ತು ಡೀಸೆಲ್ ಮೇಲೆ ₹ 4ರಷ್ಟು ಸೆಸ್ ವಿಧಿಸುವ ಪ್ರಸ್ತಾಪ ಮಾಡಿರುವಾದರೂ ಈ ತೈಲಗಳ ಮೇಲಿನ ಇತರ ತೆರಿಗೆಗಳನ್ನು ಕಡಿತಗೊಳಿಸಿರುವುದರಿಂದ ಗ್ರಾಹಕರ ಮೇಲೆ ಹೊರೆ ಬೀಳುವುದಿಲ್ಲ. ಸರಳವಾಗಿ ಹೇಳಬೇಕೆಂದರೆ, ಪೆಟ್ರೋಲ್ ಮತ್ತು ಡೀಸೆಲ್​ಗಳ ಬೆಲೆಯಲ್ಲಿ ಹೆಚ್ಚಳವಾಗುವುದಿಲ್ಲ.

ಕೃಷಿ ಸೆಸ್ ಇತರ ವಸ್ತುಗಳ ಮೇಲೂ ವಿಧಿಸಲಾಗಿದೆ. ಮದ್ಯದ ಮೇಲೆ ಶೇ 100,  ಚಿನ್ನ ಮತ್ತು ಬೆಳ್ಳಿ ಗಟ್ಟಿಗಳ ಮೇಲೆ ಶೇ 2.5, ಕಚ್ಚಾ ತಾಳೆ ಎಣ್ಣೆಯ ಮೇಲೆ ಶೇ 17.5, ಕಚ್ಚಾ ಸೋಯಾಬೀನ್ ಮತ್ತು ಸೂರ್ಯಕಾಂತಿ ಎಣ್ಣೆಯ ಮೇಲೆ ಶೇ 20ರಷ್ಟು, ಸೇಬುಗಳ ಮೇಲೆ ಶೇ 35 ಮತ್ತು ಬಟಾಣಿ ಮೇಲೆ ಶೇ 40ರಷ್ಟು ಸೆಸ್ ವಿಧಿಸಲಾಗಿದೆ. ಈ ಸೆಸ್​ಗಳು ನಾಳೆಯಿಂದಲೇ (ಫೆ.2) ಅನ್ವಯವಾಗಲಿವೆ.

‘ಕೃಷಿ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ಸಂಬಂಧಿಸಿದಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ವಿಧಿಸಿರುವಂತೆಯೇ, ಅವುಗಳ ಮೇಲಿನ ಮೂಲ ಅಬಕಾರಿ ಸುಂಕ (Basic excise duty – BED) ಮತ್ತು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (Special Additional Excise Duty – SAED) ತಗ್ಗಿಸಲಾಗಿದೆ. ಹೀಗಾಗಿ ಹೊಸ ಸೆಸ್​ನ ಹೊರೆ ಗ್ರಾಹಕರ ಮೇಲೆ ಹೊರೆ ಬೀಳುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

‘ಬ್ರ್ಯಾಂಡೆಡ್ ಅಲ್ಲದ ಪೆಟ್ರೋಲ್ ಮತ್ತು ಡೀಸೆಲ್​ಗಳ ಬೆಲೆಯ ಮೇಲೆ ಅನುಕ್ರಮವಾಗಿ ₹ 1.4 ಮತ್ತು ₹ 1.8ರಷ್ಟು ಅಬಕಾರಿ ಶುಲ್ಕ ಬೀಳುತ್ತಿತ್ತು. ಬ್ರ್ಯಾಂಡೆಡ್ ಅಲ್ಲದ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಎಸ್ಎಈಡಿ ಪ್ರತಿ ಲೀಟರ್​ಗೆ ಅನುಕ್ರಮವಾಗಿ ₹ 11 ಮತ್ತು ₹ 8ರಷ್ಟು ಬೀಳುತ್ತಿತ್ತು. ಇದೇ ತೆರನಾದ ಬದಲಾವಣೆಗಳನ್ನು ಬ್ರ್ಯಾಂಡೆಡ್ ಪೆಟ್ರೋಲ್ ಮತ್ತು ಡೀಸೆಲ್​ಗಳ ಮೇಲೂ ಮಾಡಲಾಗುತ್ತದೆ’ ಎಂದು ನಿರ್ಮಲಾ ಸೀತಾರಾಮನ್ ಹೇಳಿರುವುದನ್ನು ಎಎನ್ಐ ಸುದ್ದಿಸಂಸ್ಥೆ ಉಲ್ಲೇಖಿಸಿದೆ.

ಈ ಸಂಬಂಧ ಎಎನ್​ಐ ಸುದ್ದಿಸಂಸ್ಥೆಯ ಟ್ವೀಟ್ ಇಲ್ಲಿದೆ

Budget 2021 | ಮತ್ತಷ್ಟು ದುಬಾರಿಯಾದ ಪೆಟ್ರೋಲ್, ಡೀಸೆಲ್ ಬೆಲೆ: ಕೃಷಿ ಮೂಲಸೌಕರ್ಯ ಸೆಸ್ ಮೂಲಕ ದರ ಏರಿಕೆ

Budget 2021 | ಚಿನ್ನ-ಬೆಳ್ಳಿ ಮೇಲೆ ಕಸ್ಟಮ್ಸ್​ ಸುಂಕ ಇಳಿಸಿದ ನಿರ್ಮಲಾ ಸೀತಾರಾಮನ್: ಚಿನ್ನದ ಬೆಲೆ ದಿಢೀರ್ ಇಳಿಕೆ

Published On - 5:58 pm, Mon, 1 February 21

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?