AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021| ಇಂದು 11 ಗಂಟೆಗೆ ಮಂಡನೆ; ಕಾದು ಕುಳಿತಿದೆ ದೇಶ

ಗ್ರಾಮಾಂತರ ಪ್ರದೇಶಗಳಲ್ಲಿ ಹೈಸ್ಪೀಡ್ ಇಂಟರ್​ನೆಟ್ ಅನಿವಾರ್ಯವಾಗಿದ್ದು, ಸಂವಹನ ಕ್ಷೇತ್ರದ ಸುಧಾರಣೆಗೆ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ತಿಳಿಯಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದೆ.

Budget 2021| ಇಂದು 11 ಗಂಟೆಗೆ ಮಂಡನೆ; ಕಾದು ಕುಳಿತಿದೆ ದೇಶ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
guruganesh bhat
|

Updated on: Feb 01, 2021 | 8:42 AM

Share

ಇಂದು ಬೆಳಿಗ್ಗೆ 11 ಗಂಟೆಯಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಡಿಜಿಟಲ್​ ರೂಪದ 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ದೇಶದ ಗಮನವೆಲ್ಲ ಬಜೆಟ್​ನತ್ತ ಹೊರಳಿದ್ದು, ಯಾವ ವಲಯಕ್ಕೆ ಏನು ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆಮಾಡಿದೆ.

ಬಜೆಟ್ ಆಗಲಿದೆಯಾ ಆರ್ಥಿಕ ಲಸಿಕೆ?

ಕೊರೊನಾ ಸೋಂಕಿನಿಂದ ಲಕ್ಷಾಂತರ ಜೀವಗಳು ಬಲಿಯಾಗಿವೆ. ಕೊರೊನಾ ಲಸಿಕೆ ಕುರಿತ ಘೋಷಣೆ ಆಗಲಿದೆಯಾ ಎಂಬ ಕುತೂಹಲವೂ ಇದ್ದೇ. ತೆರಿಗೆ ಹೊರೆ ಮತ್ತಷ್ಟು ಹೆಚ್ಚಿಸುತ್ತಾ, ಹೊರೆಯನ್ನ ಇಳಿಸುತ್ತಾ ಎಂಬ ನಿರೀಕ್ಷೆಗಳು ಕೇಂದ್ರ ಬಜೆಟ್​ ಮೇಲೆ ಜನಸಾಮಾನ್ಯರ ನಿರೀಕ್ಷೆ ಹೆಚ್ಚಿಸಿವೆ. ದೇಶದಲ್ಲಿ 3 ಕೋಟಿ ಪ್ರಾಮಾಣಿಕ ತೆರಿಗೆದಾರರಿದ್ದು, ಕೇಂದ್ರ ತೆರಿಗೆದಾರರಿಂದ ಗರಿಷ್ಟ ಆದಾಯ ಪಡೆಯುವ ಯೋಜನೆ ರೂಪಿಸುವ ಕುರಿತು ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ : Budget 2021 | ಸಾರ್ವಜನಿಕ ವಲಯದ ಬ್ಯಾಂಕ್​ಗಳಿಗೆ ಆಗಬೇಕಿದೆ ಮೇಜರ್ ಸರ್ಜರಿ

ಅನ್ನದಾತರ ಕುರಿತು ಹಣಕಾಸು ಸಚಿವರ ಲಕ್ಷ್ಯ ಹರಿಯುವ ಚಿತ್ತ ವ್ಯಕ್ತವಾಗಿದೆ. 2022ರೊಳಗೆ ರೈತರ ಆದಾಯ ದುಪ್ಪಟ್ಟುಗೊಳಿಸುವ ಘೋಷಣೆ ಮಾಡಲಾಗಿತ್ತು. ಬ್ಯಾಂಕ್​ಗಳಿಗೆ ಕೃಷಿ ಸಾಲವನ್ನು ₹19 ಲಕ್ಷ ಕೋಟಿಗೆ ಹೆಚ್ಚಳ ಸಾಧ್ಯತೆಯಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಬದಲಾವಣೆ ಮಾಡುವ ನಿರೀಕ್ಷೆ

ಈ ಬಾರಿ ಕೊರೊನಾದಿಂದ ಸಂಪೂರ್ಣವಾಗಿ ಶಾಲೆ ತೆರೆದಿಲ್ಲವಾದ್ದರಿಂದ ಲಕ್ಷಾಂತರ ಪೋಷಕರ ಬಳಿ ಸಂಪೂರ್ಣ ಮಕ್ಕಳ ಶಾಲಾ ಶುಲ್ಕ ಕಟ್ಟಲು ಸಾಧ್ಯವಾಗಿಲ್ಲ. ಹೀಗಾಗಿ, ತೆರಿಗೆ ಕಡಿತ, ಅನುದಾನದ ನಿರೀಕ್ಷೆಯಲ್ಲಿ ಶೈಕ್ಷಣಿಕ ಕ್ಷೇತ್ರವಿದೆ. ಶಾಲಾ-ಕಾಲೇಜು ಮುಚ್ಚಿದ್ದರಿಂದ ಬೋಧಕ ಸಿಬ್ಬಂದಿಗೆ ಕಷ್ಟವಾಗಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ವಿನಾಯಿತಿ ನೀಡುವ ನಿರೀಕ್ಷೆಯಿದೆ.

ಶೈಕ್ಷಣಿಕ ವಲಯದಲ್ಲಿ ತಾಂತ್ರಿಕವಾಗಿ ಹೆಚ್ಚು ಅಭಿವೃದ್ಧಿಗಾಗಿ ನಿರೀಕ್ಷೆ ಹೆಚ್ಚಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಹೈಸ್ಪೀಡ್ ಇಂಟರ್​ನೆಟ್ ಅನಿವಾರ್ಯವಾಗಿದ್ದು, ಸಂವಹನ ಕ್ಷೇತ್ರದ ಸುಧಾರಣೆಗೆ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ತಿಳಿಯಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದೆ.

Budget 2021 LIVE: ಇಂದು ಕೇಂದ್ರ ಬಜೆಟ್​.. ಸೊರಗಿರುವ ಆರ್ಥಿಕತೆಗೆ ನಿರ್ಮಲಾ ನೀಡಲಿದ್ದಾರಾ ಮದ್ದು?

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ