AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021| ಇಂದು 11 ಗಂಟೆಗೆ ಮಂಡನೆ; ಕಾದು ಕುಳಿತಿದೆ ದೇಶ

ಗ್ರಾಮಾಂತರ ಪ್ರದೇಶಗಳಲ್ಲಿ ಹೈಸ್ಪೀಡ್ ಇಂಟರ್​ನೆಟ್ ಅನಿವಾರ್ಯವಾಗಿದ್ದು, ಸಂವಹನ ಕ್ಷೇತ್ರದ ಸುಧಾರಣೆಗೆ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ತಿಳಿಯಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದೆ.

Budget 2021| ಇಂದು 11 ಗಂಟೆಗೆ ಮಂಡನೆ; ಕಾದು ಕುಳಿತಿದೆ ದೇಶ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
guruganesh bhat
|

Updated on: Feb 01, 2021 | 8:42 AM

Share

ಇಂದು ಬೆಳಿಗ್ಗೆ 11 ಗಂಟೆಯಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಡಿಜಿಟಲ್​ ರೂಪದ 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ದೇಶದ ಗಮನವೆಲ್ಲ ಬಜೆಟ್​ನತ್ತ ಹೊರಳಿದ್ದು, ಯಾವ ವಲಯಕ್ಕೆ ಏನು ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆಮಾಡಿದೆ.

ಬಜೆಟ್ ಆಗಲಿದೆಯಾ ಆರ್ಥಿಕ ಲಸಿಕೆ?

ಕೊರೊನಾ ಸೋಂಕಿನಿಂದ ಲಕ್ಷಾಂತರ ಜೀವಗಳು ಬಲಿಯಾಗಿವೆ. ಕೊರೊನಾ ಲಸಿಕೆ ಕುರಿತ ಘೋಷಣೆ ಆಗಲಿದೆಯಾ ಎಂಬ ಕುತೂಹಲವೂ ಇದ್ದೇ. ತೆರಿಗೆ ಹೊರೆ ಮತ್ತಷ್ಟು ಹೆಚ್ಚಿಸುತ್ತಾ, ಹೊರೆಯನ್ನ ಇಳಿಸುತ್ತಾ ಎಂಬ ನಿರೀಕ್ಷೆಗಳು ಕೇಂದ್ರ ಬಜೆಟ್​ ಮೇಲೆ ಜನಸಾಮಾನ್ಯರ ನಿರೀಕ್ಷೆ ಹೆಚ್ಚಿಸಿವೆ. ದೇಶದಲ್ಲಿ 3 ಕೋಟಿ ಪ್ರಾಮಾಣಿಕ ತೆರಿಗೆದಾರರಿದ್ದು, ಕೇಂದ್ರ ತೆರಿಗೆದಾರರಿಂದ ಗರಿಷ್ಟ ಆದಾಯ ಪಡೆಯುವ ಯೋಜನೆ ರೂಪಿಸುವ ಕುರಿತು ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ : Budget 2021 | ಸಾರ್ವಜನಿಕ ವಲಯದ ಬ್ಯಾಂಕ್​ಗಳಿಗೆ ಆಗಬೇಕಿದೆ ಮೇಜರ್ ಸರ್ಜರಿ

ಅನ್ನದಾತರ ಕುರಿತು ಹಣಕಾಸು ಸಚಿವರ ಲಕ್ಷ್ಯ ಹರಿಯುವ ಚಿತ್ತ ವ್ಯಕ್ತವಾಗಿದೆ. 2022ರೊಳಗೆ ರೈತರ ಆದಾಯ ದುಪ್ಪಟ್ಟುಗೊಳಿಸುವ ಘೋಷಣೆ ಮಾಡಲಾಗಿತ್ತು. ಬ್ಯಾಂಕ್​ಗಳಿಗೆ ಕೃಷಿ ಸಾಲವನ್ನು ₹19 ಲಕ್ಷ ಕೋಟಿಗೆ ಹೆಚ್ಚಳ ಸಾಧ್ಯತೆಯಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಬದಲಾವಣೆ ಮಾಡುವ ನಿರೀಕ್ಷೆ

ಈ ಬಾರಿ ಕೊರೊನಾದಿಂದ ಸಂಪೂರ್ಣವಾಗಿ ಶಾಲೆ ತೆರೆದಿಲ್ಲವಾದ್ದರಿಂದ ಲಕ್ಷಾಂತರ ಪೋಷಕರ ಬಳಿ ಸಂಪೂರ್ಣ ಮಕ್ಕಳ ಶಾಲಾ ಶುಲ್ಕ ಕಟ್ಟಲು ಸಾಧ್ಯವಾಗಿಲ್ಲ. ಹೀಗಾಗಿ, ತೆರಿಗೆ ಕಡಿತ, ಅನುದಾನದ ನಿರೀಕ್ಷೆಯಲ್ಲಿ ಶೈಕ್ಷಣಿಕ ಕ್ಷೇತ್ರವಿದೆ. ಶಾಲಾ-ಕಾಲೇಜು ಮುಚ್ಚಿದ್ದರಿಂದ ಬೋಧಕ ಸಿಬ್ಬಂದಿಗೆ ಕಷ್ಟವಾಗಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ವಿನಾಯಿತಿ ನೀಡುವ ನಿರೀಕ್ಷೆಯಿದೆ.

ಶೈಕ್ಷಣಿಕ ವಲಯದಲ್ಲಿ ತಾಂತ್ರಿಕವಾಗಿ ಹೆಚ್ಚು ಅಭಿವೃದ್ಧಿಗಾಗಿ ನಿರೀಕ್ಷೆ ಹೆಚ್ಚಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಹೈಸ್ಪೀಡ್ ಇಂಟರ್​ನೆಟ್ ಅನಿವಾರ್ಯವಾಗಿದ್ದು, ಸಂವಹನ ಕ್ಷೇತ್ರದ ಸುಧಾರಣೆಗೆ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ತಿಳಿಯಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದೆ.

Budget 2021 LIVE: ಇಂದು ಕೇಂದ್ರ ಬಜೆಟ್​.. ಸೊರಗಿರುವ ಆರ್ಥಿಕತೆಗೆ ನಿರ್ಮಲಾ ನೀಡಲಿದ್ದಾರಾ ಮದ್ದು?

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್