AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021: ಆದಾಯ ತೆರಿಗೆ ಸ್ಲ್ಯಾಬ್​ಗಳಲ್ಲಿಲ್ಲ ಬದಲಾವಣೆ: 75 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ

ಹೆಚ್ಚು ತೆರಿಗೆ ಪಾವತಿ ಮಾಡುವವರಿಗೆ ಕೊವಿಡ್​ ಸೆಸ್​ ಹೇರಿಕೆ ಮಾಡಲಾಗುತ್ತದೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಬಜೆಟ್​ನಲ್ಲಿ ಕೇಂದ್ರ ಈ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ.

Budget 2021: ಆದಾಯ ತೆರಿಗೆ ಸ್ಲ್ಯಾಬ್​ಗಳಲ್ಲಿಲ್ಲ ಬದಲಾವಣೆ: 75 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Feb 01, 2021 | 2:40 PM

Share

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಣೆ ಮಾಡಿದ ಇಂದಿನ ಬಜೆಟ್​ನಲ್ಲಿ ಆದಾಯ ತೆರಿಗೆ ಸ್ಲ್ಯಾಬ್​ಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇದರ ಜೊತೆಗೆ ನೇರ ತೆರಿಗೆಯಲ್ಲೂ ಹೆಚ್ಚಿನ ವ್ಯತ್ಯಾಸ ಆಗಿಲ್ಲ.

ಕೊರೊನಾ ಲಸಿಕೆ ನೀಡಲು ಅಂದಾಜು 60-65 ಸಾವಿರ ಕೋಟಿ ಅಗತ್ಯವಿದ್ದು, ಈ ಮೊತ್ತದ ಹಣ ಸಂಗ್ರಹಿಸಲು ಗರಿಷ್ಠ ಶೇ 2ರಷ್ಟು ಕೊರೊನಾ ಸೆಸ್ ವಿಧಿಸುವ ಕುರಿತು ಹಣಕಾಸು ಇಲಾಖೆ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿತ್ತು. ಆದರೆ, ಬಜೆಟ್​ನಲ್ಲಿ ಕೇಂದ್ರ ಈ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ಇದು ತೆರಿಗೆ ಪಾವತಿದಾರರಿಗೆ ದೊಡ್ಡ ರಿಲೀಫ್​ ನೀಡಿದಂತಾಗಿದೆ.

75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ದೊಡ್ಡ ರಿಲೀಫ್​ ನೀಡಿದೆ. 75 ವರ್ಷ ಮೇಲ್ಪಟ್ಟಟ್ಟಿದ್ದು ಅವರಿಗೆ ಪಿಂಚಣಿ ಹಾಗೂ ಬಡ್ಡಿ ಮಾತ್ರ ಆದಾಯವಾಗಿದ್ದರೆ ತೆರಿಗೆಯಲ್ಲಿ ವಿನಾಯಿತಿ ನಿಡುತ್ತಿದ್ದೇವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.

ಕಳೆದ ವರ್ಷ ಸರ್ಕಾರ ಆದಾಯ ತೆರಿಗೆ ವಿನಾಯಿತಿ ನೀಡಿತ್ತು. 2.5- 5 ಲಕ್ಷ ರೂಪಾಯಿವರೆಗೆ ಗಳಿಕೆ ಮಾಡುವವರು ಶೇ. 5 ತೆರಿಗೆ ಪಾವತಿಸಬೇಕು. 5-7.5 ಲಕ್ಷದವರೆಗೆ ಶೇ.10, 7.5-10 ಲಕ್ಷ ಆದಾಯದವರಿಗೆ ಶೇ.15, 10-12.5 ಲಕ್ಷ ಆದಾಯ ಹೊಂದುವರಿಗೆ ಶೇ.20 ಹಾಗೂ 12.5-15 ಲಕ್ಷ ಆದಾಯ ಇರುವವರಿಗೆ ಶೇ. 25 ಹಾಗೂ 15 ಲಕ್ಷ ರೂಪಾಯಿಗಿಂತ ಮೇಲ್ಪಟ್ಟವರಿಗೆ ಶೇ.20 ತೆರಿಗೆ ವಿಧಿಸುವ ಬಗ್ಗೆ ಸರ್ಕಾರ ಘೋಷಣೆ ಮಾಡಿತ್ತು.

Budget 2021 | ಷೇರುಪೇಟೆ ಭಾರೀ ಏರಿಕೆ: ಬ್ಯಾಂಕ್​, ಆಟೊಮೊಬೈಲ್​ ವಲಯ ಜಿಗಿತ

Published On - 2:15 pm, Mon, 1 February 21

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!