AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಚಿನ್ನ-ಬೆಳ್ಳಿ ಮೇಲೆ ಕಸ್ಟಮ್ಸ್​ ಸುಂಕ ಇಳಿಸಿದ ನಿರ್ಮಲಾ ಸೀತಾರಾಮನ್: ಚಿನ್ನದ ಬೆಲೆ ದಿಢೀರ್ ಇಳಿಕೆ

ಬಜೆಟ್​ನಲ್ಲಿ ಚಿನ್ನ ಹಾಗೂ ಬೆಳ್ಳಿಯ ಮೇಲಿನ ಕಸ್ಟಮ್ಸ್​ ಸುಂಕವನ್ನು ಕಡಿಮೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್​ ಘೋಷಿಸುತ್ತಿದ್ದಂತೆ ಎಂಸಿಎಕ್ಸ್​ನಲ್ಲಿ ಚಿನ್ನದ ಬೆಲೆ ಶೇ.3 ಅಂದರೆ 10 ಗ್ರಾಂ. ಸುಮಾರು 1500 ರೂ.ಕುಸಿದಿದೆ.

Budget 2021 | ಚಿನ್ನ-ಬೆಳ್ಳಿ ಮೇಲೆ ಕಸ್ಟಮ್ಸ್​ ಸುಂಕ ಇಳಿಸಿದ ನಿರ್ಮಲಾ ಸೀತಾರಾಮನ್: ಚಿನ್ನದ ಬೆಲೆ ದಿಢೀರ್ ಇಳಿಕೆ
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on:Feb 01, 2021 | 6:04 PM

Share

ಚಿನ್ನ ಮತ್ತು ಬೆಳ್ಳಿಯ ಮೇಲಿನ ಸೀಮಾ ಸುಂಕವನ್ನು (Customs Duty) ಕಡಿಮೆ ಮಾಡುವುದಾಗಿ ಇಂದಿನ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ. ಸದ್ಯ ಚಿನ್ನ ಹಾಗೂ ಬೆಳ್ಳಿಯ ಮೇಲೆ ಶೇ 12.5ರಷ್ಟು ಆಮದು ಸುಂಕ ವಿಧಿಸಲಾಗುತ್ತಿದ್ದು, ಇದನ್ನು ಶೇ 7.5ಕ್ಕೆ ಇಳಿಕೆ ಮಾಡಲು ನಿರ್ಧರಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಚಿನ್ನ-ಬೆಳ್ಳಿಯ ಮೇಲಿನ ಆಮದು ಸುಂಕ 2019ರ ಜುಲೈವರೆಗೆ ಶೇ 10ರಷ್ಟಿತ್ತು. ಜುಲೈನಲ್ಲಿ ಅದನ್ನು ಶೇ 12.5ಕ್ಕೆ ಏರಿಸಲಾಗಿತ್ತು. ಆದಗಿನಿಂದಲೂ ಕಸ್ಟಮ್ಸ್​ ಸುಂಕ​ ಕಡಿಮೆ ಮಾಡುವಂತೆ ಚಿನ್ನದ ಉದ್ಯಮಿಗಳು ಒತ್ತಾಯಿಸುತ್ತಲೇ ಇದ್ದರು. ಆದರೆ ಸದ್ಯಕ್ಕಂತೂ ಸೀಮಾ ಶುಲ್ಕ ಕಡಿಮೆ ಮಾಡಲು ಸಾಧ್ಯವೇ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈಗ ಚಿನ್ನದ ಬೆಲೆ ಸತತವಾಗಿ ಏರುತ್ತಿರುವ ಬೆನ್ನಲ್ಲೇ ಕಸ್ಟಮ್ಸ್​ ಸುಂಕವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಬಜೆಟ್​ನಲ್ಲಿ ಚಿನ್ನ ಹಾಗೂ ಬೆಳ್ಳಿಯ ಮೇಲಿನ ಕಸ್ಟಮ್ಸ್​ ಸುಂಕವನ್ನು ಕಡಿಮೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್​ ಘೋಷಿಸುತ್ತಿದ್ದಂತೆ ಮಲ್ಟಿ ಕಮಾಡಿಟಿ ಎಕ್ಸ್​ಚೇಂಜ್​ನಲ್ಲಿ (ಎಂಸಿಎಕ್ಸ್​) ಚಿನ್ನದ ಬೆಲೆ ಶೇ 3 ಅಂದರೆ 10 ಗ್ರಾಂಗೆ ಸುಮಾರು ₹ 1500ಕ್ಕೆ ಕುಸಿಯಿತು. ಪ್ರಸ್ತುತ ₹ 47,918ಕ್ಕೆ ವಹಿವಾಟು ನಡೆಯುತ್ತಿದೆ.

Gold Silver Price ಬಜೆಟ್‌ನಲ್ಲಿ ಚಿನ್ನದ ಮೇಲಿನ ಆಮದು ಸುಂಕ ಕಡಿತ.. ನಗರದಲ್ಲಿ ಚಿನ್ನದ ದರ ಎಷ್ಟಿದೆ ಇಂದು?

Budget 2021 LIVE: ಆದಾಯ ತೆರಿಗೆ ನಿಯಮದಲ್ಲಿ ಬದಲಾವಣೆ ಇಲ್ಲ.. ಹಿರಿಯ ನಾಗರಿಕರಿಗೆ ಐಟಿ ರಿಟರ್ನ್​ ಸಲ್ಲಿಕೆ ವಿನಾಯ್ತಿ

Published On - 3:25 pm, Mon, 1 February 21

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ