AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021: Union Budget ಮೊಬೈಲ್ ಆ್ಯಪ್​ನಲ್ಲಿ ಏನಿದೆ?

ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿರುವ ಈ ಆ್ಯಪ್ ಅಂಡ್ರಾಯ್ಡ್ ಮತ್ತು ಐಒಎಸ್​ನಲ್ಲಿ ಲಭ್ಯವಿದೆ. ಫೆಬ್ರುವರಿ 1 ರಂದು ಬಜೆಟ್ ಮಂಡನೆಯಾದ ನಂತರ ಎಲ್ಲ ಮಾಹಿತಿಗಳು ಕೇಂದ್ರ ಬಜೆಟ್ ಆ್ಯಪ್​ನಲ್ಲಿ ಲಭ್ಯವಾಗಲಿದೆ.

Budget 2021:  Union Budget ಮೊಬೈಲ್ ಆ್ಯಪ್​ನಲ್ಲಿ ಏನಿದೆ?
ಕೇಂದ್ರ ಬಜೆಟ್ ಆ್ಯಪ್
ರಶ್ಮಿ ಕಲ್ಲಕಟ್ಟ
|

Updated on:Feb 01, 2021 | 10:31 AM

Share

ದೆಹಲಿ:  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದು ಇದೇ ಮೊದಲ ಬಾರಿ ಪೇಪರ್ ಲೆಸ್ ಬಜೆಟ್ ಮಂಡನೆ ಆಗಲಿದೆ. ಬಜೆಟ್ ಸಂಬಂಧಿತ ಎಲ್ಲ ಮಾಹಿತಿಗಳು ಜನರಿಗೆ ತಲುಪಿಸುವುದಕ್ಕಾಗಿ Union Budget Mobile App ಎಂಬ ಆ್ಯಪ್​ನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಆ್ಯಪ್​ನಲ್ಲಿ ಏನಿದೆ? ಈ ಮೊಬೈಲ್ ಆ್ಯಪ್​ನಲ್ಲಿ ಇಲ್ಲಿವರೆಗಿನ 14 ಕೇಂದ್ರ ಬಜೆಟ್​ಗಳ ಪ್ರತಿ ಲಭ್ಯವಿರಲಿದೆ. ವಾರ್ಷಿಕ ಹಣಕಾಸು ಲೆಕ್ಕಪತ್ರ, ಬೇಡಿಕೆ ಮಾಹಿತಿ (ಡಿಮಾಂಡ್ ಫಾರ್ ಗ್ರಾಂಟ್ಸ್ – ಡಿಜಿ), ಆರ್ಥಿಕ ಮಸೂದೆ ಮೊದಲಾದ ದಾಖಲೆಗಳು ಇರಲಿವೆ.

ಬಳಕೆದಾರರು ಸುಲಭವಾಗಿ ಬಳಸಬಹುದಾದ ಸೆಟ್ಟಿಂಗ್ಸ್ ಇದರಲ್ಲಿದ್ದು, ಯಾವುದೇ ದಾಖಲೆಗಳನ್ನು ಡೌನ್​​ ಲೋಡ್ ಮಾಡಬಹುದು, ಮುದ್ರಣ ಮಾಡಬಹುದು, ಹುಡುಕಬಹುದು, ಜೂಮ್ ಇನ್ ಮತ್ತು ಜೂಮ್ ಔಟ್, ಬೈ ಡೆರೆಕ್ಷನಲ್ ಸ್ಕ್ರಾಲಿಂಗ್, ಅನುಕ್ರಮಣಿಕೆ ಮತ್ತು ಇತರ ಲಿಂಕ್​ಗಳೂ ಲಭ್ಯವಿದೆ.

ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿರುವ ಈ ಆ್ಯಪ್ ಅಂಡ್ರಾಯ್ಡ್ ಮತ್ತು ಐಒಎಸ್​ನಲ್ಲಿ ಲಭ್ಯವಿದೆ .

ಕೇಂದ್ರ ಬಜೆಟ್ ವೆಬ್ ಪೋರ್ಟಲ್ www.indiabudget.gov.in ನಲ್ಲಿ ಆ್ಯಪ್ ಡೌನ್​ಲೋಡ್ ಮಾಡಿಕೊಳ್ಳಬಹುದು. ಈ ಆ್ಯಪ್​ನ್ನು ಆರ್ಥಿಕ ವ್ಯವಹಾರಗಳ ಇಲಾಖೆಯ (ಡಿಇಎ) ಮಾರ್ಗದರ್ಶನದಲ್ಲಿ ನ್ಯಾಷನಲ್ ಇನ್ ಫೋರ್ಮೆಟಿಕ್ಸ್ ಸೆಂಟರ್ (ಎನ್ಐಸಿ) ಈ ಆ್ಯಪ್ ಅಭಿವೃದ್ಧಿಪಡಿಸಿದೆ.

ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣ ಮುಗಿದ ನಂತರ ಎಲ್ಲ ದಾಖಲೆಗಳು ಈ ಆ್ಯಪ್ ನಲ್ಲಿ ಸಿಗಲಿದೆ.

ಗೂಗಲ್ ಪ್ಲೇ ಸ್ಟೋರ್​ನಲ್ಲಿ Union Budget  ಎಂದು ಸರ್ಚ್ ಮಾಡಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬಹುದು.

Budget app

ಬಜೆಟ್ ಆ್ಯಪ್

ಕೇಂದ್ರ ಬಜೆಟ್​ ಮಂಡನೆಗೆ ಇನ್ನೊಂದು ವಾರ ಬಾಕಿ; ಪೂರ್ವಭಾವಿಯಾಗಿ ನಡೆದ ಹಲ್ವಾ ಸಮಾರಂಭ, ಮೊಬೈಲ್ ಆ್ಯಪ್ ಉದ್ಘಾಟನೆ

Published On - 12:26 pm, Sun, 24 January 21

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು