AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿಯನ್ನ ಕೆಲಸದಿಂದ ತೆಗೆಯೊಲ್ಲ, ಬಸ್​ ಪಾಸ್ ದರ ಏರಿಸಲ್ಲ -ಸವದಿ

ಹುಬ್ಬಳ್ಳಿ: ಕೊರೊನಾದಿಂದ ರಾಜ್ಯ ಸಾರಿಗೆ ಇಲಾಖೆಗೆ ದೊಡ್ಡ ನಷ್ಟ ಆಗಿದೆ. ಆದ್ರೆ ಯಾವುದೇ ಕಾರಣಕ್ಕೂ ನಮ್ಮ ಯಾವ ಸಿಬ್ಬಂದಿಯನ್ನೂ ಕೆಲಸದಿಂದ ತೆಗೆಯಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅರ್ಧ ಸಂಬಳ ನೀಡಲು ಸರ್ಕಾರ ಒಪ್ಪಿದೆ: ನಾವು ನಮ್ಮ ಎಲ್ಲಾ ನೌಕರರಿಗೆ ಏಪ್ರಿಲ್ ತಿಂಗಳ ಸಂಬಳ ನೀಡಿದ್ದೇವೆ. ಮೇ ತಿಂಗಳ ಸಂಬಳದ ಬಗ್ಗೆಯೂ ಈಗಾಗಲೆ ಯೋಚನೆ ಮಾಡುತ್ತಿದ್ದೇವೆ. ಅರ್ಧ ಸಂಬಳ‌ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಎಲ್ಲಾ ನಿಗಮಗಳ ಸಭೆ ನಡೆಸಿ […]

ಸಿಬ್ಬಂದಿಯನ್ನ ಕೆಲಸದಿಂದ ತೆಗೆಯೊಲ್ಲ, ಬಸ್​ ಪಾಸ್ ದರ ಏರಿಸಲ್ಲ -ಸವದಿ
ಸಾಧು ಶ್ರೀನಾಥ್​
| Edited By: |

Updated on:May 26, 2020 | 5:20 PM

Share

ಹುಬ್ಬಳ್ಳಿ: ಕೊರೊನಾದಿಂದ ರಾಜ್ಯ ಸಾರಿಗೆ ಇಲಾಖೆಗೆ ದೊಡ್ಡ ನಷ್ಟ ಆಗಿದೆ. ಆದ್ರೆ ಯಾವುದೇ ಕಾರಣಕ್ಕೂ ನಮ್ಮ ಯಾವ ಸಿಬ್ಬಂದಿಯನ್ನೂ ಕೆಲಸದಿಂದ ತೆಗೆಯಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅರ್ಧ ಸಂಬಳ ನೀಡಲು ಸರ್ಕಾರ ಒಪ್ಪಿದೆ: ನಾವು ನಮ್ಮ ಎಲ್ಲಾ ನೌಕರರಿಗೆ ಏಪ್ರಿಲ್ ತಿಂಗಳ ಸಂಬಳ ನೀಡಿದ್ದೇವೆ. ಮೇ ತಿಂಗಳ ಸಂಬಳದ ಬಗ್ಗೆಯೂ ಈಗಾಗಲೆ ಯೋಚನೆ ಮಾಡುತ್ತಿದ್ದೇವೆ. ಅರ್ಧ ಸಂಬಳ‌ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಎಲ್ಲಾ ನಿಗಮಗಳ ಸಭೆ ನಡೆಸಿ ಮಾಹಿತಿ ಪಡೆಯುತ್ತೇನೆ. ಅಲ್ಲದೆ ಮತ್ತೊಮ್ಮೆ ಸರ್ಕಾರಕ್ಕೆ ಮನವಿ ಮಾಡಿ ಮೇ ತಿಂಗಳ ಸಂಬಳವೂ ನೀಡಲು ಪ್ರಯತ್ನ ಮಾಡುತ್ತೇನೆ.

ಬಸ್‌ ದರ ಏರಿಕೆ ಮಾಡಲ್ಲ: ಭ್ರಷ್ಟಾಚಾರ ನಿಲ್ಲಬೇಕು ಹಾಗಾದ್ರೆ ಮಾತ್ರ ಲಾಭ ಆಗುತ್ತೆ. ಸಂಸ್ಥೆಯಲ್ಲಿ ಭ್ರಷ್ಟಾಚಾರ ತಡೆಯುವ ಕೆಲಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಬಸ್‌ ಪ್ರಯಾಣಿಕರ ದರ ಏರಿಕೆ ಮಾಡುವುದಿಲ್ಲ. ವಿದ್ಯಾರ್ಥಿ ಪಾಸ್‌ ಸೇರಿ ಯಾವುದೇ ಪಾಸ್‌ ದರ ಹೆಚ್ಚಿಸುವುದಿಲ್ಲ. ದರ ಹೆಚ್ಚಿಸುವ ಪ್ರಸ್ತಾಪವೂ ನಮ್ಮ ಮುಂದೆ ಇಲ್ಲ.

ರಾತ್ರಿ ವೇಳೆಯೂ ಬಸ್‌ ಪ್ರಯಾಣ ಆರಂಭಿಸುತ್ತೇವೆ: ಈಗಾಗಲೆ ನಾವು ಬಸ್ ಪ್ರಯಾಣ ಆರಂಭ ಮಾಡಿದ್ದೇವೆ. ಆದ್ರು ಸಂಸ್ಥೆಗೆ ನಷ್ಟ ಆಗುತ್ತಿದೆ, ಯಾಕಂದ್ರೆ ಕೇವಲ 30 ಜನ ಮಾತ್ರ ನಾವು ತೆಗೆದುಕೊಳ್ಳುತ್ತಿದ್ದೇವೆ. ಹಾಗಾಗಿ ಇನ್ಮುಂದೆ ಪ್ರಯಾಣಿಕರನ್ನ ನೋಡಿಕೊಂಡು ರಾತ್ರಿ ವೇಳೆಯೂ ಬಸ್‌ ಪ್ರಯಾಣ ಆರಂಭಿಸುತ್ತೇವೆ. ಈ ಬಗ್ಗೆ ನಮ್ಮ ಅಧಿಕಾರಿಗಳಿಗೆ ಹೇಳಿದ್ದೇನೆ. ಬೆಂಗಳೂರಿನಲ್ಲಿ ಪಾಸ್‌ ಸಿಸ್ಟಮ್‌ ತೆಗೆದು ಬಿಟ್ಟಿದ್ದೇವೆ. ಕಿಲೋ ಮೀಟರ್ ನೋಡಿ ಟಿಕೆಟ್ ದರ ನಿಗದಿಗೆ ಸೂಚನೆ ನೀಡಿದ್ದೇವೆ.

Published On - 5:19 pm, Tue, 26 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ