AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಕ್ಸ್ ಕಟ್ಟಿಲ್ಲ ಅಂತ ಸೀಜ್ ಮಾಡಿದ್ದ ಬಸ್ಸನ್ನೇ ಕದ್ದ ಖದೀಮರು..

ಜನವರಿ 18 ರಂದು ಬೆಂಗಳೂರಿನ ನಾಗವಾರ ಬಳಿ ರೋಡ್ ಟ್ಯಾಕ್ಸ್ ಕಟ್ಟದೇ ಅಕ್ರಮವಾಗಿ ಓಡಾಡುತ್ತಿದ್ದ ಕೆಎ 22 ಬಿ 266 ನಂಬರ್​ನ ಬಸ್ಸನ್ನು RTO ಅಧಿಕಾರಿಗಳು ಸೀಜ್ ಮಾಡಿದ್ದರು. ಖದೀಮರು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದಾರೆ. RTO ಕಚೇರಿ ಬಳಿಯಿಂದಲೇ ಬಸ್ ಕಳ್ಳತನ ಮಾಡಿದ್ದಾರೆ.

ಟ್ಯಾಕ್ಸ್ ಕಟ್ಟಿಲ್ಲ ಅಂತ ಸೀಜ್ ಮಾಡಿದ್ದ ಬಸ್ಸನ್ನೇ ಕದ್ದ ಖದೀಮರು..
ಆಯೇಷಾ ಬಾನು
|

Updated on: Jan 29, 2021 | 9:06 AM

Share

ದೇವನಹಳ್ಳಿ: ಟ್ಯಾಕ್ಸ್ ಕಟ್ಟದಿದದಕ್ಕೆ ಸೀಜ್ ಮಾಡಿದ್ದ ಬಸ್ಸನ್ನೇ ಖದೀಮರು ಕದ್ದ ಘಟನೆ ನಗರದಲ್ಲಿ ನಡೆದಿದೆ. ಯಲಹಂಕದ RTO ಕಚೇರಿ ಬಳಿ ನಿಲ್ಲಿಸಿದ್ದ ಬಸ್ಸನ್ನು ಖದೀಮರು ರಾತ್ರೋರಾತ್ರಿ ಕದ್ದಿದ್ದಾರೆ.

ಜನವರಿ 18 ರಂದು ಬೆಂಗಳೂರಿನ ನಾಗವಾರ ಬಳಿ ರೋಡ್ ಟ್ಯಾಕ್ಸ್ ಕಟ್ಟದೇ ಅಕ್ರಮವಾಗಿ ಓಡಾಡುತ್ತಿದ್ದ ಕೆಎ 22 ಬಿ 266 ನಂಬರ್​ನ ಬಸ್ಸನ್ನು RTO ಅಧಿಕಾರಿಗಳು ಸೀಜ್ ಮಾಡಿದ್ದರು. ಬಳಿಕ ಅದನ್ನು ಯಲಹಂಕ RTO ಕಚೇರಿ ಬಳಿ ತಂದು ನಿಲ್ಲಿಸಲಾಗಿತ್ತು ಆದ್ರೆ ಇದೇ ತಿಂಗಳ 23 ರಂದು ಬೆಳಗ್ಗಿನ ಜಾವ ಬಸ್ ಕಾಣೆಯಾಗಿದೆ. ಖದೀಮರು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದಾರೆ. RTO ಕಚೇರಿ ಬಳಿಯಿಂದಲೇ ಬಸ್ ಕಳ್ಳತನ ಮಾಡಿದ್ದಾರೆ.

ಅಮರನಾಥ್ ಎಂಬ ಮಾಲೀಕರಿಗೆ ಸೇರಿದ ಬಸ್ ಇದಾಗಿದ್ದು, ಇರ್ಫಾನ್ ಎಂಬುವವರಿಗೆ ಗುತ್ತಿಗೆಗೆ ನೀಡಲಾಗಿತ್ತು. ರೋಡ್ ಟ್ಯಾಕ್ಸ್ ಕಟ್ಟದೇ ಮೂರು ಲಕ್ಷ ಬಾಕಿ ಉಳಿಸಿಕೊಂಡಿದ್ದ ಕಾರಣ ಬಸ್ಸನ್ನು ಸೀಜ್ ಮಾಡಲಾಗಿತ್ತು. ಆದ್ರೆ ರಾತ್ರೋರಾತ್ರಿ ಬಸ್ ಕಳ್ಳತನವಾಗಿದ್ದು RTO ಅಧಿಕಾರಿಗಳು ಕಂಗಾಲಾಗಿದ್ದಾರೆ. ಬಸ್ ನಾಪತ್ತೆ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಐಷಾರಾಮಿ ಮನೆಗಳಲ್ಲಿಯೇ ಕಳ್ಳತನ.. ಆ್ಯಪಲ್ ತಿಂದು ಪೊಲೀಸರಿಗೆ ಸಿಕ್ಕಿಬಿದ್ದ ಬನಶಂಕರಿ ಮೂಲದ ಕಳ್ಳರು!

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’