AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಕ್ಸ್ ಕಟ್ಟಿಲ್ಲ ಅಂತ ಸೀಜ್ ಮಾಡಿದ್ದ ಬಸ್ಸನ್ನೇ ಕದ್ದ ಖದೀಮರು..

ಜನವರಿ 18 ರಂದು ಬೆಂಗಳೂರಿನ ನಾಗವಾರ ಬಳಿ ರೋಡ್ ಟ್ಯಾಕ್ಸ್ ಕಟ್ಟದೇ ಅಕ್ರಮವಾಗಿ ಓಡಾಡುತ್ತಿದ್ದ ಕೆಎ 22 ಬಿ 266 ನಂಬರ್​ನ ಬಸ್ಸನ್ನು RTO ಅಧಿಕಾರಿಗಳು ಸೀಜ್ ಮಾಡಿದ್ದರು. ಖದೀಮರು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದಾರೆ. RTO ಕಚೇರಿ ಬಳಿಯಿಂದಲೇ ಬಸ್ ಕಳ್ಳತನ ಮಾಡಿದ್ದಾರೆ.

ಟ್ಯಾಕ್ಸ್ ಕಟ್ಟಿಲ್ಲ ಅಂತ ಸೀಜ್ ಮಾಡಿದ್ದ ಬಸ್ಸನ್ನೇ ಕದ್ದ ಖದೀಮರು..
ಆಯೇಷಾ ಬಾನು
ಆಯೇಷಾ ಬಾನು|

Updated on: Jan 29, 2021 | 9:06 AM

Share

ದೇವನಹಳ್ಳಿ: ಟ್ಯಾಕ್ಸ್ ಕಟ್ಟದಿದದಕ್ಕೆ ಸೀಜ್ ಮಾಡಿದ್ದ ಬಸ್ಸನ್ನೇ ಖದೀಮರು ಕದ್ದ ಘಟನೆ ನಗರದಲ್ಲಿ ನಡೆದಿದೆ. ಯಲಹಂಕದ RTO ಕಚೇರಿ ಬಳಿ ನಿಲ್ಲಿಸಿದ್ದ ಬಸ್ಸನ್ನು ಖದೀಮರು ರಾತ್ರೋರಾತ್ರಿ ಕದ್ದಿದ್ದಾರೆ.

ಜನವರಿ 18 ರಂದು ಬೆಂಗಳೂರಿನ ನಾಗವಾರ ಬಳಿ ರೋಡ್ ಟ್ಯಾಕ್ಸ್ ಕಟ್ಟದೇ ಅಕ್ರಮವಾಗಿ ಓಡಾಡುತ್ತಿದ್ದ ಕೆಎ 22 ಬಿ 266 ನಂಬರ್​ನ ಬಸ್ಸನ್ನು RTO ಅಧಿಕಾರಿಗಳು ಸೀಜ್ ಮಾಡಿದ್ದರು. ಬಳಿಕ ಅದನ್ನು ಯಲಹಂಕ RTO ಕಚೇರಿ ಬಳಿ ತಂದು ನಿಲ್ಲಿಸಲಾಗಿತ್ತು ಆದ್ರೆ ಇದೇ ತಿಂಗಳ 23 ರಂದು ಬೆಳಗ್ಗಿನ ಜಾವ ಬಸ್ ಕಾಣೆಯಾಗಿದೆ. ಖದೀಮರು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದಾರೆ. RTO ಕಚೇರಿ ಬಳಿಯಿಂದಲೇ ಬಸ್ ಕಳ್ಳತನ ಮಾಡಿದ್ದಾರೆ.

ಅಮರನಾಥ್ ಎಂಬ ಮಾಲೀಕರಿಗೆ ಸೇರಿದ ಬಸ್ ಇದಾಗಿದ್ದು, ಇರ್ಫಾನ್ ಎಂಬುವವರಿಗೆ ಗುತ್ತಿಗೆಗೆ ನೀಡಲಾಗಿತ್ತು. ರೋಡ್ ಟ್ಯಾಕ್ಸ್ ಕಟ್ಟದೇ ಮೂರು ಲಕ್ಷ ಬಾಕಿ ಉಳಿಸಿಕೊಂಡಿದ್ದ ಕಾರಣ ಬಸ್ಸನ್ನು ಸೀಜ್ ಮಾಡಲಾಗಿತ್ತು. ಆದ್ರೆ ರಾತ್ರೋರಾತ್ರಿ ಬಸ್ ಕಳ್ಳತನವಾಗಿದ್ದು RTO ಅಧಿಕಾರಿಗಳು ಕಂಗಾಲಾಗಿದ್ದಾರೆ. ಬಸ್ ನಾಪತ್ತೆ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಐಷಾರಾಮಿ ಮನೆಗಳಲ್ಲಿಯೇ ಕಳ್ಳತನ.. ಆ್ಯಪಲ್ ತಿಂದು ಪೊಲೀಸರಿಗೆ ಸಿಕ್ಕಿಬಿದ್ದ ಬನಶಂಕರಿ ಮೂಲದ ಕಳ್ಳರು!

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ