CCTV ವಿಡಿಯೋ ಬಿಡುಗಡೆ ಬೆನ್ನಲ್ಲೇ ಇದ್ದಕ್ಕಿದ್ದಂತೆ ಕೇಬಲ್ ಪ್ರಸಾರ ಕಟ್

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಳೆದ ವಾರ ತೀವ್ರ ಪ್ರತಿಭಟನೆ, ದೊಂಬಿ, ಗಲಭೆಗಳು ನಡೆದಿದ್ದವು. ಪರಿಸ್ಥಿತಿ ಶಾಂತವಾಗುತ್ತಿದೆ ಎನ್ನುತ್ತಿರುವಾಗ ಇಂದು ದಿಢೀರನೆ ಮಂಗಳೂರು ನಗರದಾದ್ಯಂತ ಕೇಬಲ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಬೆಳಗ್ಗೆಯಷ್ಟೇ ಮಂಗಳೂರು ಗಲಭೆ ಅಸಲಿಯತ್ತು ಬಗ್ಗೆ ಪೊಲೀಸರು ಸಿಸಿಟಿವಿ ಸಾಕ್ಷ್ಯಗಳನ್ನು ಬಹಿರಂಗಗೊಳಿಸಿದ್ದರು. ಮಂಗಳೂರಿನಲ್ಲಿ ನಡೆದ ಗಲಭೆ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಈ ವಿಡಿಯೋ ದೃಶ್ಯಾವಳಿಗಳೂ ಎಲ್ಲಾ ಮಾಧ್ಯಮಗಳಲ್ಲಿ ಬೆಳಗ್ಗೆಯಿಂದ ವ್ಯಾಪಕವಾಗಿ  ಪ್ರಸಾರವಾಗುತ್ತಿತ್ತು. ಇದರ ಬೆನ್ನಲ್ಲೇ ಮಂಗಳೂರು ನಗರದಾದ್ಯಂತ ಕೇಬಲ್ […]

CCTV ವಿಡಿಯೋ ಬಿಡುಗಡೆ ಬೆನ್ನಲ್ಲೇ ಇದ್ದಕ್ಕಿದ್ದಂತೆ ಕೇಬಲ್ ಪ್ರಸಾರ ಕಟ್
ಸಾಧು ಶ್ರೀನಾಥ್​

Updated on: Dec 24, 2019 | 12:22 PM

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಳೆದ ವಾರ ತೀವ್ರ ಪ್ರತಿಭಟನೆ, ದೊಂಬಿ, ಗಲಭೆಗಳು ನಡೆದಿದ್ದವು. ಪರಿಸ್ಥಿತಿ ಶಾಂತವಾಗುತ್ತಿದೆ ಎನ್ನುತ್ತಿರುವಾಗ ಇಂದು ದಿಢೀರನೆ ಮಂಗಳೂರು ನಗರದಾದ್ಯಂತ ಕೇಬಲ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ.

ಬೆಳಗ್ಗೆಯಷ್ಟೇ ಮಂಗಳೂರು ಗಲಭೆ ಅಸಲಿಯತ್ತು ಬಗ್ಗೆ ಪೊಲೀಸರು ಸಿಸಿಟಿವಿ ಸಾಕ್ಷ್ಯಗಳನ್ನು ಬಹಿರಂಗಗೊಳಿಸಿದ್ದರು. ಮಂಗಳೂರಿನಲ್ಲಿ ನಡೆದ ಗಲಭೆ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಈ ವಿಡಿಯೋ ದೃಶ್ಯಾವಳಿಗಳೂ ಎಲ್ಲಾ ಮಾಧ್ಯಮಗಳಲ್ಲಿ ಬೆಳಗ್ಗೆಯಿಂದ ವ್ಯಾಪಕವಾಗಿ  ಪ್ರಸಾರವಾಗುತ್ತಿತ್ತು. ಇದರ ಬೆನ್ನಲ್ಲೇ ಮಂಗಳೂರು ನಗರದಾದ್ಯಂತ ಕೇಬಲ್ ಸಂಪರ್ಕ ಸ್ಥಗಿತಗೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಬಲ್ ಆಪರೇಟರ್​ಗಳು, UPS ಸಮಸ್ಯೆಯಿಂದ ಕೇಬಲ್ ಸಂಪರ್ಕ ಸ್ಥಗಿತಗೊಂಡಿದೆ ಎಂದು ತಿಳಿಸಿದ್ದಾರೆ.

Published On - 12:19 pm, Tue, 24 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us