AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದು ಘೋರ ಅಪಘಾತಗಳ ಸರಮಾಲೆ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಅಪ್ಪ, ಮಗಳು ಬಲಿ

Annigeri, Dharwad: ತಂದೆ ಇಬ್ರಾಹಿಂ ಉವಾಜಿ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪುತ್ರಿ ಇಸ್ಮತ್ ಕಿಮ್ಸ್​ನಲ್ಲಿ ಕೊನೆಯುಸಿರೆಳೆದಿದ್ದಾಳೆ. ಪತ್ನಿ ನಸ್ರೀನ್ ಬಾನುಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಜ್ಯದಲ್ಲಿ ಇಂದು ಘೋರ ಅಪಘಾತಗಳ ಸರಮಾಲೆ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಅಪ್ಪ, ಮಗಳು ಬಲಿ
ರಾಜ್ಯದಲ್ಲಿ ಇಂದು ಅಪಘಾತಗಳ ಸರಮಾಲೆ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಅಪ್ಪ, ಮಗಳು ಬಲಿ
TV9 Web
| Edited By: |

Updated on:Mar 12, 2022 | 8:23 PM

Share

ಧಾರವಾಡ: ಇಂದು ರಾಜ್ಯದಲ್ಲಿ ಅಪಘಾತಗಳ ಸರಮಾಲೆಯೇ ನಡೆದಿದ್ದು ಹತ್ತಾರು ಮಂದಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಬಳಿ ನಡೆದಿರುವ ದುರ್ಘಟನೆಯಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಅಪ್ಪ ಮತ್ತು ಮಗಳು ಮೃತಪಟ್ಟಿದ್ದಾರೆ. ತಂದೆ ಇಬ್ರಾಹಿಂ ಉವಾಜಿ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪುತ್ರಿ ಇಸ್ಮತ್ ಕಿಮ್ಸ್​ನಲ್ಲಿ ಕೊನೆಯುಸಿರೆಳೆದಿದ್ದಾಳೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ರಾಹಿಂ ಉವಾಜಿ ಗದಗ ಜಿಲ್ಲೆಯ ಮಲ್ಲಸಮುದ್ರ ಗ್ರಾಮದ ನಿವಾಸಿ. ಪತ್ನಿ ನಸ್ರೀನ್ ಬಾನುಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಲಬುರಗಿ: ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಐವರ ದುರ್ಮರಣ ಕಲಬುರಗಿ: ಮರಕ್ಕೆ ಕಾರು(Car) ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿದೆ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಹೊರವಲಯದಲ್ಲಿ ನಡೆದಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗಾಣಗಾಪುರ ದತ್ತಾತ್ರೇಯ ದೇಗುಲದಿಂದ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಫಜಲಪುರದಿಂದ ಮಹಾರಾಷ್ಟ್ರ ಕಡೆಗೆ ಹೊರಟಿದ್ದ ಕಾರು ಮರಕ್ಕೆ( Tree) ಡಿಕ್ಕಿ ಹೊಡೆದಿದೆ. ಮೃತರು ಮಹಾರಾಷ್ಟ್ರ ಅಹ್ಮದನಗರದ ನಿವಾಸಿಗಳು. ಚಾಲಕ ನಿದ್ರೆ ಮಂಪರಿನಲ್ಲಿದ್ದರಿಂದ ಅಪಘಾತವಾಗಿರುವ( Accident) ಶಂಕೆ ವ್ಯಕ್ತವಾಗಿದೆ. ಅಫಜಲಪುರ ಪೊಲೀಸ್​ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಓವರ್ ಲೋಡ್ ಧಾವಂತದಿಂದ​ ಟ್ರ್ಯಾಕ್ಟರ್ ಪಲ್ಟಿ -ನಿಶ್ಚಿತಾರ್ಥಕ್ಕೆ ಹೊರಟಿದ್ದ 4 ಮಂದಿ ಸಾವು ಕೊಪ್ಪಳ: ಸುಮಾರು 25 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು, ಚಿಕಿತ್ಸೆ ಫಲಿಸದೆ ಕಾರಟಗಿ ಆಸ್ಪತ್ರೆಯಲ್ಲಿ ಇಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ನವಲಿಯಲ್ಲಿ ನಡೆದಿದೆ. ನಿಶ್ಚಿತಾರ್ಥಕ್ಕೆ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಯಮನೂರಪ್ಪ(55) ಮತ್ತು ಅಂಬಮ್ಮ(50) ಸ್ಥಳದಲ್ಲೇ ಅಸುನೀಗಿದವರು. ಶೇಶಪ್ಪ ಬಂಡಿ (40) ಮತ್ತು ಯಮನಪ್ಪ ಸಿಂಧನೂರು (35) ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.ಇವರೆಲ್ಲಾ ಕೊಪ್ಪಳ ಜಿಲ್ಲೆ ಕಾರಟಗಿಯ ಇಂದ್ರನಗರ ನಿವಾಸಿಗಳು. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಕಾರಟಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸೇರಿದಂತೆ ಕನಕಗಿರಿ ಪೊಲೀಸ್ ತಂಡ ಭೇಟಿ ನೀಡಿದೆ.

ನಿಶ್ಚಿತಾರ್ಥಕ್ಕೆ ಹೊರಟಿದ್ದವರು ಸೇರಿದ್ದು ಮಸಣಕ್ಕೆ: ನವಲಿ ಗ್ರಾಮದ ಬಳಿಯ ರೈಸ್ ಟೆಕ್ನಾಲಜಿ ‌ಪಾರ್ಕ್ ಬಳಿ ಈ ದುರ್ಘಟನೆ ನಡೆದಿದ್ದು, ಮೃತರು ಕಾರಟಗಿ ಪಟ್ಟಣದ 18ನೇ ವಾರ್ಡ್ ನ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರಟಗಿಯಿಂದ ಕನಕಗಿರಿಯ ಸಿರವಾರ ಕಡೆಗೆ ಟ್ರ್ಯಾಕ್ಟರ್ ಹೊರಟಿತ್ತು.

ಇದನ್ನೂ ಓದಿ: ಒಂದೇ ದಿನ ಎರಡು ಕಡೆ! ಪೊಲೀಸರು ಜಫ್ತಿ ಮಾಡಿದ್ದ ಹಳೆಯ ವಾಹನಗಳಿಗೆ ಬೆಂಕಿ -21 ವಾಹನಗಳು ಅಗ್ನಿಗಾಹುತಿ

ಇದನ್ನೂ ಓದಿ: ಮನೆಯವರ ವಿರೋಧದ ನಡುವೆ ಮದುವೆಯಾಗಿದಕ್ಕೆ ಮಗಳನ್ನೇ ವಿಧವೆ ಮಾಡಿದ ಅಪ್ಪ; ವಿಜಯಪುರ ಮಾಜಿ ಕಾರ್ಪೊರೇಟರ್ ಸೇರಿ ನಾಲ್ವರ ಬಂಧನ

Published On - 7:52 pm, Fri, 11 March 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?