ಟಿಪ್ಪರ್ ಡಿಕ್ಕಿ: ದಂಪತಿ ಸೇರಿ ಮೂವರು ಸಾವು, ಪವಾಡವೆಂಬಂತೆ ಮಗು ಪಾರು!

ಬಳ್ಳಾರಿ: ಕೂಡ್ಲಿಗಿ ತಾಲೂಕಿನ ಬೋರಗಟ್ಟಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಲಾರಿ ಡಿಕ್ಕಿಯೊಡೆದು ಕಾರು ಚಾಲಕ ಸೇರಿ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಅಪಘಾತದಲ್ಲಿ ದಂಪತಿಯ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಮಡಿಕೇರಿಯಿಂದ ಇಳಕಲ್​ಗೆ ವಾಪಸ್​ ಹೋಗುವಾಗ ರಾಷ್ಟ್ರೀಯ ಹೆದ್ದಾರಿ 50ರ ಬೋರಗಟ್ಟಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ದುರಂತದಲ್ಲಿ ಮೃತಪಟ್ಟವರು ಇಳಕಲ್ ಮೂಲದವರು ಎನ್ನಲಾಗಿದೆ. ಘಟನೆಯಲ್ಲಿ ಬದುಕುಳಿದ ಮಗುವನ್ನು ಹಾಗೂ ಮೃತರನ್ನು ಕೂಡ್ಲಿಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಟಿಪ್ಪರ್ ಡಿಕ್ಕಿ: ದಂಪತಿ ಸೇರಿ ಮೂವರು ಸಾವು, ಪವಾಡವೆಂಬಂತೆ ಮಗು ಪಾರು!

Updated on: Feb 03, 2020 | 11:41 AM

ಬಳ್ಳಾರಿ: ಕೂಡ್ಲಿಗಿ ತಾಲೂಕಿನ ಬೋರಗಟ್ಟಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಲಾರಿ ಡಿಕ್ಕಿಯೊಡೆದು ಕಾರು ಚಾಲಕ ಸೇರಿ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಅಪಘಾತದಲ್ಲಿ ದಂಪತಿಯ ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಮಡಿಕೇರಿಯಿಂದ ಇಳಕಲ್​ಗೆ ವಾಪಸ್​ ಹೋಗುವಾಗ ರಾಷ್ಟ್ರೀಯ ಹೆದ್ದಾರಿ 50ರ ಬೋರಗಟ್ಟಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ದುರಂತದಲ್ಲಿ ಮೃತಪಟ್ಟವರು ಇಳಕಲ್ ಮೂಲದವರು ಎನ್ನಲಾಗಿದೆ. ಘಟನೆಯಲ್ಲಿ ಬದುಕುಳಿದ ಮಗುವನ್ನು ಹಾಗೂ ಮೃತರನ್ನು ಕೂಡ್ಲಿಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

Published On - 11:30 am, Mon, 3 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us