AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮತ್ತು ದೆಹಲಿಯಲ್ಲಿ ಕೊವಿಡ್-19 ಸಾವುಗಳ ಸಂಖ್ಯೆ ಹೆಚ್ಚುತ್ತಿದೆ: ರಾಜೇಶ್ ಭೂಷಣ್

ಗುರುವಾರದಂದು ಮಿಡಿಯಾದೊಂದಿಗೆ ಭಾರತದಲ್ಲಿನ ಪ್ರಸಕ್ತ ಕೊವಿಡ್-19 ಸ್ಥಿತಿ ಕುರಿತು ಮಾಹಿತಿ ಹಂಚಿಕೊಂಡ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್, ಇಂದಿನವರೆಗೆ ಸುಮಾರು 30 ಲಕ್ಷ ಭಾರತೀಯರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಹೇಳಿದರು. ‘‘ಗುಣಮುಖರಾದವರ ಸಂಖ್ಯೆ ಸೋಂಕಿತರ ಸಂಖ್ಯೆಗಿಂತ ಮೂರೂವರೆ ಪಟ್ಟು ಜಾಸ್ತಿಯಿದೆ. ನಿನ್ನೆ (ಬುಧವಾರ) 68,584 ಜನ ಗುಣಮುಖರಾಗಿದ್ದು ದಿನವೊಂದರಲ್ಲಿ ಗುಣ ಹೊಂದಿದ ಅತ್ಯಧಿಕ ಸೋಂಕಿತರ ಸಂಖ್ಯೆ ಇದಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತಾದ್ಯಂತ 11 ಲಕ್ಷಕ್ಕೂ ಹೆಚ್ಚಿನ ಟೆಸ್ಟ್​ಗಳನ್ನು […]

ಕರ್ನಾಟಕ ಮತ್ತು ದೆಹಲಿಯಲ್ಲಿ ಕೊವಿಡ್-19 ಸಾವುಗಳ ಸಂಖ್ಯೆ ಹೆಚ್ಚುತ್ತಿದೆ: ರಾಜೇಶ್ ಭೂಷಣ್
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 03, 2020 | 5:30 PM

Share

ಗುರುವಾರದಂದು ಮಿಡಿಯಾದೊಂದಿಗೆ ಭಾರತದಲ್ಲಿನ ಪ್ರಸಕ್ತ ಕೊವಿಡ್-19 ಸ್ಥಿತಿ ಕುರಿತು ಮಾಹಿತಿ ಹಂಚಿಕೊಂಡ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್, ಇಂದಿನವರೆಗೆ ಸುಮಾರು 30 ಲಕ್ಷ ಭಾರತೀಯರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಹೇಳಿದರು.

‘‘ಗುಣಮುಖರಾದವರ ಸಂಖ್ಯೆ ಸೋಂಕಿತರ ಸಂಖ್ಯೆಗಿಂತ ಮೂರೂವರೆ ಪಟ್ಟು ಜಾಸ್ತಿಯಿದೆ. ನಿನ್ನೆ (ಬುಧವಾರ) 68,584 ಜನ ಗುಣಮುಖರಾಗಿದ್ದು ದಿನವೊಂದರಲ್ಲಿ ಗುಣ ಹೊಂದಿದ ಅತ್ಯಧಿಕ ಸೋಂಕಿತರ ಸಂಖ್ಯೆ ಇದಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತಾದ್ಯಂತ 11 ಲಕ್ಷಕ್ಕೂ ಹೆಚ್ಚಿನ ಟೆಸ್ಟ್​ಗಳನ್ನು ಮಾಡಲಾಗಿದೆ.’’ ಎಂದು ಭೂಷಣ್ ಹೇಳಿದರು.

ಪ್ರತಿ 10 ಲಕ್ಷ ಜನಸಂಖ್ಯೆಗೆ ಸೋಂಕಿತರ ಸಂಖ್ಯೆ ಭಾರತದಲ್ಲೇ ವಿಶ್ವದಲ್ಲಿ ಅತಿ ಕಡಿಮೆ ಎಂದು ಹೇಳಿದ ಭೂಷಣ್, ಆಂಧ್ರ ಪ್ರದೇಶ, ದೆಹಲಿ, ತಮಿಳು ನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರ ಈ ಐದು ರಾಜ್ಯಗಳಲ್ಲೇ ಶೇಕಡಾ 70 ರಷ್ಟು ಸೋಂಕಿಗೆ ಸಂಬಂಧಿಸಿದ ಸಾವುಗಳು ಸಂಭವಿಸಿವೆ ಎಂದರು.

‘‘ಕರ್ನಾಟಕ ಮತ್ತು ದೆಹಲಿಯಲ್ಲಿ ಸಾವುಗಳ ಅನುಪಾತ ಜಾಸ್ತಿಯಿದೆ. ಪ್ರತಿದಿನ ಸಂಭವಿಸುತ್ತಿರುವ ಸಾವುಗಳ ಸಂಖ್ಯೆಯನ್ನು ನೋಡಿದ್ದೇಯಾದರೆ ಅದು ದೆಹಲಿಯಲ್ಲಿ 50% ರಷ್ಟು ಮತ್ತು ಕರ್ನಾಟಕದಲ್ಲಿ 9.6% ರಷ್ಟು ಹೆಚ್ಚಾಗಿದೆ,’’ ಎಂದು ಭೂಷಣ್ ಹೇಳಿದರು.

ಹಬ್ಬ, ಉತ್ಸವಗಳ ಆಚರಣೆಯಲ್ಲಿ ಮತ್ತು ಪರೀಕ್ಷೆಗಳಿಗೆ ಹಾಜರಾಗುವಾಗ ನಾವು ಹೆಚ್ಚು ಜಾಗರೂಕರಾಗಿರಬೇಕಾಗುತ್ತದೆ. ಈ ಸಂದರ್ಭಗಳಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಅತ್ಯವಶ್ಯಕವಾಗಿರುತ್ತದೆ, ಎಂಬ ಸಲಹೆ ಭೂಷಣ್ ನೀಡಿದರು.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ