Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮತ್ತು ದೆಹಲಿಯಲ್ಲಿ ಕೊವಿಡ್-19 ಸಾವುಗಳ ಸಂಖ್ಯೆ ಹೆಚ್ಚುತ್ತಿದೆ: ರಾಜೇಶ್ ಭೂಷಣ್

ಗುರುವಾರದಂದು ಮಿಡಿಯಾದೊಂದಿಗೆ ಭಾರತದಲ್ಲಿನ ಪ್ರಸಕ್ತ ಕೊವಿಡ್-19 ಸ್ಥಿತಿ ಕುರಿತು ಮಾಹಿತಿ ಹಂಚಿಕೊಂಡ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್, ಇಂದಿನವರೆಗೆ ಸುಮಾರು 30 ಲಕ್ಷ ಭಾರತೀಯರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಹೇಳಿದರು. ‘‘ಗುಣಮುಖರಾದವರ ಸಂಖ್ಯೆ ಸೋಂಕಿತರ ಸಂಖ್ಯೆಗಿಂತ ಮೂರೂವರೆ ಪಟ್ಟು ಜಾಸ್ತಿಯಿದೆ. ನಿನ್ನೆ (ಬುಧವಾರ) 68,584 ಜನ ಗುಣಮುಖರಾಗಿದ್ದು ದಿನವೊಂದರಲ್ಲಿ ಗುಣ ಹೊಂದಿದ ಅತ್ಯಧಿಕ ಸೋಂಕಿತರ ಸಂಖ್ಯೆ ಇದಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತಾದ್ಯಂತ 11 ಲಕ್ಷಕ್ಕೂ ಹೆಚ್ಚಿನ ಟೆಸ್ಟ್​ಗಳನ್ನು […]

ಕರ್ನಾಟಕ ಮತ್ತು ದೆಹಲಿಯಲ್ಲಿ ಕೊವಿಡ್-19 ಸಾವುಗಳ ಸಂಖ್ಯೆ ಹೆಚ್ಚುತ್ತಿದೆ: ರಾಜೇಶ್ ಭೂಷಣ್
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 03, 2020 | 5:30 PM

ಗುರುವಾರದಂದು ಮಿಡಿಯಾದೊಂದಿಗೆ ಭಾರತದಲ್ಲಿನ ಪ್ರಸಕ್ತ ಕೊವಿಡ್-19 ಸ್ಥಿತಿ ಕುರಿತು ಮಾಹಿತಿ ಹಂಚಿಕೊಂಡ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್, ಇಂದಿನವರೆಗೆ ಸುಮಾರು 30 ಲಕ್ಷ ಭಾರತೀಯರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಹೇಳಿದರು.

‘‘ಗುಣಮುಖರಾದವರ ಸಂಖ್ಯೆ ಸೋಂಕಿತರ ಸಂಖ್ಯೆಗಿಂತ ಮೂರೂವರೆ ಪಟ್ಟು ಜಾಸ್ತಿಯಿದೆ. ನಿನ್ನೆ (ಬುಧವಾರ) 68,584 ಜನ ಗುಣಮುಖರಾಗಿದ್ದು ದಿನವೊಂದರಲ್ಲಿ ಗುಣ ಹೊಂದಿದ ಅತ್ಯಧಿಕ ಸೋಂಕಿತರ ಸಂಖ್ಯೆ ಇದಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತಾದ್ಯಂತ 11 ಲಕ್ಷಕ್ಕೂ ಹೆಚ್ಚಿನ ಟೆಸ್ಟ್​ಗಳನ್ನು ಮಾಡಲಾಗಿದೆ.’’ ಎಂದು ಭೂಷಣ್ ಹೇಳಿದರು.

ಪ್ರತಿ 10 ಲಕ್ಷ ಜನಸಂಖ್ಯೆಗೆ ಸೋಂಕಿತರ ಸಂಖ್ಯೆ ಭಾರತದಲ್ಲೇ ವಿಶ್ವದಲ್ಲಿ ಅತಿ ಕಡಿಮೆ ಎಂದು ಹೇಳಿದ ಭೂಷಣ್, ಆಂಧ್ರ ಪ್ರದೇಶ, ದೆಹಲಿ, ತಮಿಳು ನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರ ಈ ಐದು ರಾಜ್ಯಗಳಲ್ಲೇ ಶೇಕಡಾ 70 ರಷ್ಟು ಸೋಂಕಿಗೆ ಸಂಬಂಧಿಸಿದ ಸಾವುಗಳು ಸಂಭವಿಸಿವೆ ಎಂದರು.

‘‘ಕರ್ನಾಟಕ ಮತ್ತು ದೆಹಲಿಯಲ್ಲಿ ಸಾವುಗಳ ಅನುಪಾತ ಜಾಸ್ತಿಯಿದೆ. ಪ್ರತಿದಿನ ಸಂಭವಿಸುತ್ತಿರುವ ಸಾವುಗಳ ಸಂಖ್ಯೆಯನ್ನು ನೋಡಿದ್ದೇಯಾದರೆ ಅದು ದೆಹಲಿಯಲ್ಲಿ 50% ರಷ್ಟು ಮತ್ತು ಕರ್ನಾಟಕದಲ್ಲಿ 9.6% ರಷ್ಟು ಹೆಚ್ಚಾಗಿದೆ,’’ ಎಂದು ಭೂಷಣ್ ಹೇಳಿದರು.

ಹಬ್ಬ, ಉತ್ಸವಗಳ ಆಚರಣೆಯಲ್ಲಿ ಮತ್ತು ಪರೀಕ್ಷೆಗಳಿಗೆ ಹಾಜರಾಗುವಾಗ ನಾವು ಹೆಚ್ಚು ಜಾಗರೂಕರಾಗಿರಬೇಕಾಗುತ್ತದೆ. ಈ ಸಂದರ್ಭಗಳಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಅತ್ಯವಶ್ಯಕವಾಗಿರುತ್ತದೆ, ಎಂಬ ಸಲಹೆ ಭೂಷಣ್ ನೀಡಿದರು.

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ