AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ ಯೂನಿಯನ್ ಕ್ಲಬ್ ಉಪಾಧ್ಯಕ್ಷನಿಂದ ಮಹಿಳಾ ಪ್ರಾಂಶುಪಾಲರಿಗೆ ಲೈಂಗಿಕ ಕಿರುಕುಳ, ಕೇಸ್ ದಾಖಲು

ಮಹಿಳಾ ಪ್ರಾಂಶುಪಾಲರಿಗೆ ಕ್ಲಬ್ ಉಪಾಧ್ಯಕ್ಷನಿಂದ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪದಡಿ ಯೂನಿಯನ್ ಕ್ಲಬ್‌ನ ಉಪಾಧ್ಯಕ್ಷ ಮೋಹನ್‌ರಾವ್ ವಿರುದ್ಧ ಬೆಂಗಳೂರಿನ ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವನಗುಡಿ ಯೂನಿಯನ್ ಕ್ಲಬ್ ಉಪಾಧ್ಯಕ್ಷನಿಂದ ಮಹಿಳಾ ಪ್ರಾಂಶುಪಾಲರಿಗೆ ಲೈಂಗಿಕ ಕಿರುಕುಳ, ಕೇಸ್ ದಾಖಲು
ಬಸವನಗುಡಿ ಯೂನಿಯನ್ ಕ್ಲಬ್​ನ ಉಪಾಧ್ಯಕ್ಷ ಮೋಹನ್ ರಾವ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 19, 2021 | 12:09 PM

Share

ಬೆಂಗಳೂರು: ಮಹಿಳಾ ಪ್ರಾಂಶುಪಾಲರಿಗೆ ಕ್ಲಬ್ ಉಪಾಧ್ಯಕ್ಷನಿಂದ ಲೈಂಗಿಕ ಕಿರುಕುಳ (Sexual Harassment) ನೀಡಲಾಗಿದೆ ಎಂಬ ಆರೋಪದಡಿ ಯೂನಿಯನ್ ಕ್ಲಬ್‌ನ ಉಪಾಧ್ಯಕ್ಷ ಮೋಹನ್‌ರಾವ್ ವಿರುದ್ಧ ಬೆಂಗಳೂರಿನ ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೋಹನ್‌ರಾವ್ ನನ್ನ ಜೊತೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ಪ್ರಾಂಶುಪಾಲರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರತಿಷ್ಠಿತ ಬಸವನಗುಡಿ ಯೂನಿಯನ್ ಕ್ಲಬ್​ನ ಉಪಾಧ್ಯಕ್ಷ ಮೋಹನ್ ರಾವ್ ಮಹಿಳಾ ಪ್ರಿನ್ಸಿಪಾಲ್​ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರಂತೆ. ಇದೇ ತಿಂಗಳ 6ರಂದು ಮಹಿಳೆ ತನ್ನ ಪತಿ ಜೊತೆ ಕ್ಲಬ್​ಗೆ ಬಂದಿದ್ದರು. ಈ ವೇಳೆ ಮಹಿಳೆ ವಾಶ್ ರೂಂ ಕಡೆ ಹೊರಟಾಗ ಮೋಹನ್ ರಾವ್ ಅಡ್ಡ ಬಂದಿದ್ದಾರೆ. ‘ಹೌ ಐ ಆ್ಯಮ್ ಲುಕಿಂಗ್’ ಎಂದು ಮಹಿಳೆಗೆ ಕೇಳಿದ್ದಾರೆ. ಆಗ ಚೆನ್ನಾಗಿದ್ದೀರಿ ಎಂದು ಮಹಿಳೆ ಉತ್ತರಿಸಿದ್ದಾರೆ. ಆಗ ಯಾಕೆ ಚೆನ್ನಾಗಿದ್ದೀನಿ ಗೊತ್ತಾ? ನನ್ನ ಹೆಂಡ್ತಿ ಜೊತೆ 27 ವರ್ಷಗಳಿಂದ ಮಲಗಿಲ್ಲ ಅದ್ಕೆ ಚೆನ್ನಾಗಿದ್ದೀನಿ ಎಂದು ಮೋಹನ್ ರಾವ್ ಹೇಳಿದ್ರು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮೋಹನ್ ರಾವ್ ಉತ್ತರಕ್ಕೆ ಬೆಚ್ಚಿಬಿದ್ದ ಮಹಿಳೆ ಯಾಕೆ ಈತ ಹೀಗೆ ಹೇಳ್ತಿದ್ದಾರೆ ಎಂದು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ ಮತ್ತೊಮ್ಮೆ ಶೌಚಾಲಯಕ್ಕೆ ಹೋದಾಗ ಮತ್ತೆ ಮೋಹನ್ ಮಹಿಳೆಯ ಮುಂದೆ ಪ್ರತ್ಯಕ್ಷರಾಗಿ ನನಗೆ ಎಣ್ಣೆ ಕೊಡಿಸಲ್ವ ಅಂತಾ ಕೇಳಿದ್ದಾರೆ. ಆಗ ಬೇರೇನಾದ್ರು ಮಾತಾಡಿದ್ರೆ ರಂಪ ಆಗುತ್ತೆ ಎಂದು ಯಾವುದು ಬೇಕು ತೆಗೆದುಕೊಳ್ಳಿ ಅಂದಿದ್ದಾರೆ. ಈ ವೇಳೆ ಮಹಿಳೆ ಜೊತೆ ಅಸಭ್ಯವಾಗಿ ಮಾತನಾಡಿರುವುದಾಗಿ ಮೋಹನ್ ರಾವ್ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ. ಸದ್ಯ ಲೈಂಗಿಕ ದೌರ್ಜನ್ಯ ಕೇಸ್​ನಡಿ ಬಸವನಗುಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ನಾಯಿಗೆ ಲೈಂಗಿಕ ಕಿರುಕುಳ ನೀಡಿ ಹೇಯ ಕೃತ್ಯ; ವಿಕೃತ ಮನಸಿನ ಆರೋಪಿ ಬಂಧನ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!