ಲಾಕ್‌ಡೌನ್ ಮಧ್ಯೆಯೂ ಅದ್ಧೂರಿ ಜಾತ್ರೆ, ಅರ್ಚಕನ ವಿರುದ್ಧ ಕೇಸ್

ರಾಮನಗರ: ಕೊರೊನಾ ಲಾಕ್‌ಡೌನ್ ಮಧ್ಯೆಯೂ ಕೊಳಗೊಂಡನಹಳ್ಳಿಯಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಮಾರಮ್ಮ ‌ದೇವಸ್ಥಾನದ ಅರ್ಚಕನ ವಿರುದ್ಧ ಕೇಸ್ ದಾಖಲಾಗಿದೆ. ರಾಮನಗರ ‌ಜಿಲ್ಲೆ ಕನಕಪುರ ‌ತಾಲೂಕಿನ ಕೊಳಗೊಂಡನಹಳ್ಳಿ ಗ್ರಾಮದಲ್ಲಿರುವ ಮಾರಮ್ಮ ‌ದೇವಸ್ಥಾನದ ಜಾತ್ರೆಯನ್ನು ಮೇ 12 ರಂದು ಅದ್ಧೂರಿಯಾಗಿ ನೆರವೇರಿಸಲಾಗಿತ್ತು. ಹೀಗಾಗಿ ಲಾಕ್​ಡೌನ್ ಇದ್ದರೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಜಾತ್ರೆ ಮಾಡಲಾಗಿದೆ ಎಂದು ಮಾರಮ್ಮ ದೇವಸ್ಥಾನದ ಅರ್ಚಕ ಚಿಕ್ಕಮಾರೇಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಜಾತ್ರೆಯಲ್ಲಿ ಗ್ರಾಮದ ಜನರು ಅಂತರ ಮರೆತು, ಮಾಸ್ಕ್ ಧರಿಸದೇ ಭಾಗಿಯಾಗಿದ್ದರು. ಕೋಡಿಹಳ್ಳಿ ಪೊಲೀಸ್ […]

ಲಾಕ್‌ಡೌನ್ ಮಧ್ಯೆಯೂ ಅದ್ಧೂರಿ ಜಾತ್ರೆ, ಅರ್ಚಕನ ವಿರುದ್ಧ ಕೇಸ್
ಸಾಧು ಶ್ರೀನಾಥ್​

Updated on: May 14, 2020 | 10:46 AM

ರಾಮನಗರ: ಕೊರೊನಾ ಲಾಕ್‌ಡೌನ್ ಮಧ್ಯೆಯೂ ಕೊಳಗೊಂಡನಹಳ್ಳಿಯಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಮಾರಮ್ಮ ‌ದೇವಸ್ಥಾನದ ಅರ್ಚಕನ ವಿರುದ್ಧ ಕೇಸ್ ದಾಖಲಾಗಿದೆ.

ರಾಮನಗರ ‌ಜಿಲ್ಲೆ ಕನಕಪುರ ‌ತಾಲೂಕಿನ ಕೊಳಗೊಂಡನಹಳ್ಳಿ ಗ್ರಾಮದಲ್ಲಿರುವ ಮಾರಮ್ಮ ‌ದೇವಸ್ಥಾನದ ಜಾತ್ರೆಯನ್ನು ಮೇ 12 ರಂದು ಅದ್ಧೂರಿಯಾಗಿ ನೆರವೇರಿಸಲಾಗಿತ್ತು. ಹೀಗಾಗಿ ಲಾಕ್​ಡೌನ್ ಇದ್ದರೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಜಾತ್ರೆ ಮಾಡಲಾಗಿದೆ ಎಂದು ಮಾರಮ್ಮ ದೇವಸ್ಥಾನದ ಅರ್ಚಕ ಚಿಕ್ಕಮಾರೇಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಜಾತ್ರೆಯಲ್ಲಿ ಗ್ರಾಮದ ಜನರು ಅಂತರ ಮರೆತು, ಮಾಸ್ಕ್ ಧರಿಸದೇ ಭಾಗಿಯಾಗಿದ್ದರು. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us