AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಮೇಲೆ ದೇವರು ಬಂದಿದೆ ಎಂದ ಮಹಿಳೆಯಿಂದ ಹೈಡ್ರಾಮಾ, ಬಿತ್ತು ಲಾಕ್‌ಡೌನ್ ಕೇಸ್

ಯಾದಗಿರಿ: ಮಹಿಳೆಯೊಬ್ಬಳು ಮೈಮೇಲೆ ದೇವರು ಬಂದಿದೆ ಎಂದು ಜನರನ್ನ ಸೇರಿಸಿ ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ನಸಲವಾಯಿ ಗ್ರಾಮದಲ್ಲಿ ನಡೆದಿದೆ. ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನು ಲಾಕ್‌ಡೌನ್‌ ಮಾಡಲಾಗಿದೆ. ಹೀಗಾಗಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜನ ಸೇರುವಂತಹ ಯಾವುದೇ ಕಾರ್ಯಕ್ರಮವನ್ನು ಮಾಡಬಾರದು ಎಂಬ ಆದೇಶವಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಈರಮ್ಮದೇವಿ ಜಾತ್ರೆ ರದ್ದು ಮಾಡಲಾಗಿತ್ತು. ಹೀಗಾಗಿ ಡ್ರಾಮ ಶುರು ಮಾಡಿದ ನಾಗಮ್ಮ. ಗ್ರಾಮಸ್ಥರು ಜಾತ್ರೆ ಮಾಡದಿದ್ದರಿಂದ ಈರಮ್ಮದೇವಿ ಬಂದಿದ್ದಾಳೆ. […]

ಮೈಮೇಲೆ ದೇವರು ಬಂದಿದೆ ಎಂದ ಮಹಿಳೆಯಿಂದ ಹೈಡ್ರಾಮಾ, ಬಿತ್ತು ಲಾಕ್‌ಡೌನ್ ಕೇಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 22, 2020 | 10:40 AM

Share

ಯಾದಗಿರಿ: ಮಹಿಳೆಯೊಬ್ಬಳು ಮೈಮೇಲೆ ದೇವರು ಬಂದಿದೆ ಎಂದು ಜನರನ್ನ ಸೇರಿಸಿ ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ನಸಲವಾಯಿ ಗ್ರಾಮದಲ್ಲಿ ನಡೆದಿದೆ. ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನು ಲಾಕ್‌ಡೌನ್‌ ಮಾಡಲಾಗಿದೆ.

ಹೀಗಾಗಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜನ ಸೇರುವಂತಹ ಯಾವುದೇ ಕಾರ್ಯಕ್ರಮವನ್ನು ಮಾಡಬಾರದು ಎಂಬ ಆದೇಶವಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಈರಮ್ಮದೇವಿ ಜಾತ್ರೆ ರದ್ದು ಮಾಡಲಾಗಿತ್ತು. ಹೀಗಾಗಿ ಡ್ರಾಮ ಶುರು ಮಾಡಿದ ನಾಗಮ್ಮ. ಗ್ರಾಮಸ್ಥರು ಜಾತ್ರೆ ಮಾಡದಿದ್ದರಿಂದ ಈರಮ್ಮದೇವಿ ಬಂದಿದ್ದಾಳೆ.

ದೇವಿ ಮೈಮೇಲೆ ಬಂದಿದ್ದಾಳೆಂದು ಜನರನ್ನು ಸೇರಿಸಿದ್ದಾಳೆ. ನಿನ್ನೆ ರಾತ್ರಿ ದೇಗುಲದ ಪಕ್ಕದಲ್ಲಿ ಜನರನ್ನು ಸೇರಿಸಿ ಹೈಡ್ರಾಮಾ ಮಾಡಿದ್ದಾಳೆ. ಮಣ್ಣಲ್ಲಿ ಮೊದಲೇ ಪುಸ್ತಕ, ಮೂರ್ತಿ ಹೂತಿಟ್ಟು, ಪವಾಡವೆಂಬಂತೆ ಜನರ ಬಳಿಯಿಂದಲೇ ಮೂರ್ತಿ, ಪುಸ್ತಕ ಅಗೆದು ತೆಗೆಸಿ ಜನರಲ್ಲಿ ಆತಂಕ ಸೃಷ್ಟಿ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಗುರುಮಠಕಲ್ ಠಾಣೆಯಲ್ಲಿ ನಾಗಮ್ಮ ಸೇರಿ ಗ್ರಾಮದ 20 ಜನರ ವಿರುದ್ಧ ಲಾಕ್‌ಡೌನ್ ಉಲ್ಲಂಘನೆ ಕೇಸ್ ದಾಖಲಾಗಿದೆ.

Published On - 10:28 am, Wed, 22 April 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!