AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆರ್ಚ್‌‌ ಬಿಷಪ್‌ರಿಂದ ಬಡ ಮಕ್ಕಳ ಹೆಸರಿನಲ್ಲಿ 300 ಕೋಟಿ ರೂ. ಅಕ್ರಮ

ಬೆಂಗಳೂರು: ಬಡ ಮಕ್ಕಳ ಏಳ್ಗೆಯ ಹೆಸರಿನಲ್ಲಿ ಬೆಂಗಳೂರಿನ ಆರ್ಚ್‌‌ ಬಿಷಪ್‌ ಡಾ. ಪೀಟರ್‌ ಮಚಾಡೋ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ಮಾಡಿದ್ದಾರೆಂದು ಕ್ಯಾಥೋಲಿಕ್‌ ಕ್ರೈಸ್ತರ ಸಂಘ ಆರೋಪಿಸಿದೆ. ಈ ಸಂಬಂಧ ಬೆಂಗಳೂರಿನಿಂದ ಅಖಿಲ ಕರ್ನಾಟಕ ಕ್ಯಾಥೊಲಿಕ್ ಕ್ರೈಸ್ತರ ಕನ್ನಡ ಸಂಘ ಹಾಗೂ ಮುಂಬೈನಿಂದ ವಿಡಿಯೋ ಮೂಲಕ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಎಫ್. ಸಾಲ್ಡಾನಾ ನಡೆಸಿದ ಸುದ್ದಿಗೋಷ್ಟಿಯಲ್ಲಿ ಈ ಆರೋಪ ಮಾಡಿದ್ದಾರೆ. ನಮ್ಮ ಧರ್ಮಗುರುಗಳ ವಿರುದ್ಧವೇ ನಮಗೆ ತುಂಬಾ ಬೇಸರವಾಗಿದೆ ಬೆಂಗಳೂರು ಆರ್ಚ್ ಬಿಷಪ್ ಡಾ. ಪೀಟರ್ […]

ಬೆಂಗಳೂರಿನ ಆರ್ಚ್‌‌ ಬಿಷಪ್‌ರಿಂದ ಬಡ ಮಕ್ಕಳ ಹೆಸರಿನಲ್ಲಿ 300 ಕೋಟಿ ರೂ. ಅಕ್ರಮ
Guru
| Edited By: |

Updated on:Aug 27, 2020 | 2:10 PM

Share

ಬೆಂಗಳೂರು: ಬಡ ಮಕ್ಕಳ ಏಳ್ಗೆಯ ಹೆಸರಿನಲ್ಲಿ ಬೆಂಗಳೂರಿನ ಆರ್ಚ್‌‌ ಬಿಷಪ್‌ ಡಾ. ಪೀಟರ್‌ ಮಚಾಡೋ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ಮಾಡಿದ್ದಾರೆಂದು ಕ್ಯಾಥೋಲಿಕ್‌ ಕ್ರೈಸ್ತರ ಸಂಘ ಆರೋಪಿಸಿದೆ.

ಈ ಸಂಬಂಧ ಬೆಂಗಳೂರಿನಿಂದ ಅಖಿಲ ಕರ್ನಾಟಕ ಕ್ಯಾಥೊಲಿಕ್ ಕ್ರೈಸ್ತರ ಕನ್ನಡ ಸಂಘ ಹಾಗೂ ಮುಂಬೈನಿಂದ ವಿಡಿಯೋ ಮೂಲಕ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಎಫ್. ಸಾಲ್ಡಾನಾ ನಡೆಸಿದ ಸುದ್ದಿಗೋಷ್ಟಿಯಲ್ಲಿ ಈ ಆರೋಪ ಮಾಡಿದ್ದಾರೆ.

ನಮ್ಮ ಧರ್ಮಗುರುಗಳ ವಿರುದ್ಧವೇ ನಮಗೆ ತುಂಬಾ ಬೇಸರವಾಗಿದೆ ಬೆಂಗಳೂರು ಆರ್ಚ್ ಬಿಷಪ್ ಡಾ. ಪೀಟರ್ ಮಾಚಾಡೋ ಆಶಾ ಎಂಬ ಎನ್‌ಜಿಓ ಮಾಡಿಕೊಂಡು ಬಡಮಕ್ಕಳ ಕಲ್ಯಾಣಕ್ಕಾಗಿ ಅಂತಾ ವಿದೇಶಗಳಿಂದ ಹಣ ತರಿಸ್ತಾರೆ. ಆದ್ರೆ ಹೀಗೆ ತರಿಸಿದ ಹಣದಿಂದ ಯಾವುದೇ ಬಡಮಕ್ಕಳಿಗೆ ಯಾವುದೇ ಸೌಲಭ್ಯ ಕೊಡುತ್ತಿಲ್ಲ. ಇದರಿಂದ ಬಡ ಮಕ್ಕಳಿಗೆ ಬಹಳ‌ ಅನ್ಯಾವಾಗಿದೆ. ಹೀಗೆ ವಿದೇಶಗಳಿಂದ ಬಂದ ಸುಮಾರು 300 ಕೋಟಿ ಹಣದ ಅವ್ಯವಹಾರ ಮಾಡಿದ್ದಾರೆಂದು ಆರೋಪ ಮಾಡಿದ್ದಾರೆ.

ಬಡ ಮಕ್ಕಳ‌ ಹೆಸರಿನಲ್ಲಿ ನಡೆಯುತ್ತಿರುವ ಕೋಟ್ಯಾಂತರ ರೂಪಾಯಿ ಅವ್ಯವಹಾರದಲ್ಲಿ ಕಳೆದ 15 ವರ್ಷಗಳಿಂದ ಆಶಾ ಟ್ರಸ್ಟ್‌ನಲ್ಲಿ ಕೆಲಸ ನಿರ್ವಹಿಸ್ತಿರೊ ಎಡ್ವರ್ಡ್ ಪಿಂಟೊ ಕೂಡಾ ಭಾಗಿಯಾಗಿದ್ದಾರೆ. ನಮ್ಮ ಧರ್ಮದಲ್ಲಿ ಅನ್ಯಾಯವಾಗ್ತಿದೆ ಅಂದ್ರೆ ಅದನ್ನು ಪ್ರಶ್ನಿಸುವುದು ನಮ್ಮ ಹಕ್ಕು. ಆರ್ಚ್ ಬಿಷಪ್ ಅವ್ಯವಹಾರದ‌ ಬಗ್ಗೆ ಲೆಕ್ಕ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನಮ್ಮ ಧರ್ಮಗುರುಗಳ ವಿರುದ್ಧವೇ ನಮಗೆ ತುಂಬಾ ಬೇಸರವಾಗಿದೆ. ಬಡ ಮಕ್ಕಳಿಗೆ ಸಿಗಬೇಕಾದ ವಿದ್ಯಾರ್ಜನೆ ಸಿಗಬೇಕು. ಅವ್ಯವಹಾರದ‌ ಬಗ್ಗೆ ಸರ್ಕಾರ ಕೂಡಲೆ ತನಿಖೆ ನಡೆಸಬೇಕು ಎಂದು ಅಖಿಲ ಕರ್ನಾಟಕ ಕ್ಯಾಥೊಲಿಕ್ ಕ್ರೈಸ್ತ ಸಂಘದ ಅಧ್ಯಕ್ಷ ರಫೈಲ್ ರಾಜ್ ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲ ರಫೈಲ್‌ ರಾಜ್‌ ಮತ್ತು ಇತರರು ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಂಬಂಧಿಸಿದ ದಾಖಲೆಗಳನ್ನು ಕೂಡಾ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ.

Published On - 2:09 pm, Thu, 27 August 20

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್