AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆರ್ಚ್‌‌ ಬಿಷಪ್‌ರಿಂದ ಬಡ ಮಕ್ಕಳ ಹೆಸರಿನಲ್ಲಿ 300 ಕೋಟಿ ರೂ. ಅಕ್ರಮ

ಬೆಂಗಳೂರು: ಬಡ ಮಕ್ಕಳ ಏಳ್ಗೆಯ ಹೆಸರಿನಲ್ಲಿ ಬೆಂಗಳೂರಿನ ಆರ್ಚ್‌‌ ಬಿಷಪ್‌ ಡಾ. ಪೀಟರ್‌ ಮಚಾಡೋ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ಮಾಡಿದ್ದಾರೆಂದು ಕ್ಯಾಥೋಲಿಕ್‌ ಕ್ರೈಸ್ತರ ಸಂಘ ಆರೋಪಿಸಿದೆ. ಈ ಸಂಬಂಧ ಬೆಂಗಳೂರಿನಿಂದ ಅಖಿಲ ಕರ್ನಾಟಕ ಕ್ಯಾಥೊಲಿಕ್ ಕ್ರೈಸ್ತರ ಕನ್ನಡ ಸಂಘ ಹಾಗೂ ಮುಂಬೈನಿಂದ ವಿಡಿಯೋ ಮೂಲಕ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಎಫ್. ಸಾಲ್ಡಾನಾ ನಡೆಸಿದ ಸುದ್ದಿಗೋಷ್ಟಿಯಲ್ಲಿ ಈ ಆರೋಪ ಮಾಡಿದ್ದಾರೆ. ನಮ್ಮ ಧರ್ಮಗುರುಗಳ ವಿರುದ್ಧವೇ ನಮಗೆ ತುಂಬಾ ಬೇಸರವಾಗಿದೆ ಬೆಂಗಳೂರು ಆರ್ಚ್ ಬಿಷಪ್ ಡಾ. ಪೀಟರ್ […]

ಬೆಂಗಳೂರಿನ ಆರ್ಚ್‌‌ ಬಿಷಪ್‌ರಿಂದ ಬಡ ಮಕ್ಕಳ ಹೆಸರಿನಲ್ಲಿ 300 ಕೋಟಿ ರೂ. ಅಕ್ರಮ
Guru
| Updated By: ಸಾಧು ಶ್ರೀನಾಥ್​|

Updated on:Aug 27, 2020 | 2:10 PM

Share

ಬೆಂಗಳೂರು: ಬಡ ಮಕ್ಕಳ ಏಳ್ಗೆಯ ಹೆಸರಿನಲ್ಲಿ ಬೆಂಗಳೂರಿನ ಆರ್ಚ್‌‌ ಬಿಷಪ್‌ ಡಾ. ಪೀಟರ್‌ ಮಚಾಡೋ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ಮಾಡಿದ್ದಾರೆಂದು ಕ್ಯಾಥೋಲಿಕ್‌ ಕ್ರೈಸ್ತರ ಸಂಘ ಆರೋಪಿಸಿದೆ.

ಈ ಸಂಬಂಧ ಬೆಂಗಳೂರಿನಿಂದ ಅಖಿಲ ಕರ್ನಾಟಕ ಕ್ಯಾಥೊಲಿಕ್ ಕ್ರೈಸ್ತರ ಕನ್ನಡ ಸಂಘ ಹಾಗೂ ಮುಂಬೈನಿಂದ ವಿಡಿಯೋ ಮೂಲಕ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಎಫ್. ಸಾಲ್ಡಾನಾ ನಡೆಸಿದ ಸುದ್ದಿಗೋಷ್ಟಿಯಲ್ಲಿ ಈ ಆರೋಪ ಮಾಡಿದ್ದಾರೆ.

ನಮ್ಮ ಧರ್ಮಗುರುಗಳ ವಿರುದ್ಧವೇ ನಮಗೆ ತುಂಬಾ ಬೇಸರವಾಗಿದೆ ಬೆಂಗಳೂರು ಆರ್ಚ್ ಬಿಷಪ್ ಡಾ. ಪೀಟರ್ ಮಾಚಾಡೋ ಆಶಾ ಎಂಬ ಎನ್‌ಜಿಓ ಮಾಡಿಕೊಂಡು ಬಡಮಕ್ಕಳ ಕಲ್ಯಾಣಕ್ಕಾಗಿ ಅಂತಾ ವಿದೇಶಗಳಿಂದ ಹಣ ತರಿಸ್ತಾರೆ. ಆದ್ರೆ ಹೀಗೆ ತರಿಸಿದ ಹಣದಿಂದ ಯಾವುದೇ ಬಡಮಕ್ಕಳಿಗೆ ಯಾವುದೇ ಸೌಲಭ್ಯ ಕೊಡುತ್ತಿಲ್ಲ. ಇದರಿಂದ ಬಡ ಮಕ್ಕಳಿಗೆ ಬಹಳ‌ ಅನ್ಯಾವಾಗಿದೆ. ಹೀಗೆ ವಿದೇಶಗಳಿಂದ ಬಂದ ಸುಮಾರು 300 ಕೋಟಿ ಹಣದ ಅವ್ಯವಹಾರ ಮಾಡಿದ್ದಾರೆಂದು ಆರೋಪ ಮಾಡಿದ್ದಾರೆ.

ಬಡ ಮಕ್ಕಳ‌ ಹೆಸರಿನಲ್ಲಿ ನಡೆಯುತ್ತಿರುವ ಕೋಟ್ಯಾಂತರ ರೂಪಾಯಿ ಅವ್ಯವಹಾರದಲ್ಲಿ ಕಳೆದ 15 ವರ್ಷಗಳಿಂದ ಆಶಾ ಟ್ರಸ್ಟ್‌ನಲ್ಲಿ ಕೆಲಸ ನಿರ್ವಹಿಸ್ತಿರೊ ಎಡ್ವರ್ಡ್ ಪಿಂಟೊ ಕೂಡಾ ಭಾಗಿಯಾಗಿದ್ದಾರೆ. ನಮ್ಮ ಧರ್ಮದಲ್ಲಿ ಅನ್ಯಾಯವಾಗ್ತಿದೆ ಅಂದ್ರೆ ಅದನ್ನು ಪ್ರಶ್ನಿಸುವುದು ನಮ್ಮ ಹಕ್ಕು. ಆರ್ಚ್ ಬಿಷಪ್ ಅವ್ಯವಹಾರದ‌ ಬಗ್ಗೆ ಲೆಕ್ಕ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನಮ್ಮ ಧರ್ಮಗುರುಗಳ ವಿರುದ್ಧವೇ ನಮಗೆ ತುಂಬಾ ಬೇಸರವಾಗಿದೆ. ಬಡ ಮಕ್ಕಳಿಗೆ ಸಿಗಬೇಕಾದ ವಿದ್ಯಾರ್ಜನೆ ಸಿಗಬೇಕು. ಅವ್ಯವಹಾರದ‌ ಬಗ್ಗೆ ಸರ್ಕಾರ ಕೂಡಲೆ ತನಿಖೆ ನಡೆಸಬೇಕು ಎಂದು ಅಖಿಲ ಕರ್ನಾಟಕ ಕ್ಯಾಥೊಲಿಕ್ ಕ್ರೈಸ್ತ ಸಂಘದ ಅಧ್ಯಕ್ಷ ರಫೈಲ್ ರಾಜ್ ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲ ರಫೈಲ್‌ ರಾಜ್‌ ಮತ್ತು ಇತರರು ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಂಬಂಧಿಸಿದ ದಾಖಲೆಗಳನ್ನು ಕೂಡಾ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ.

Published On - 2:09 pm, Thu, 27 August 20

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..