AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆರ್ಚ್‌‌ ಬಿಷಪ್‌ರಿಂದ ಬಡ ಮಕ್ಕಳ ಹೆಸರಿನಲ್ಲಿ 300 ಕೋಟಿ ರೂ. ಅಕ್ರಮ

ಬೆಂಗಳೂರು: ಬಡ ಮಕ್ಕಳ ಏಳ್ಗೆಯ ಹೆಸರಿನಲ್ಲಿ ಬೆಂಗಳೂರಿನ ಆರ್ಚ್‌‌ ಬಿಷಪ್‌ ಡಾ. ಪೀಟರ್‌ ಮಚಾಡೋ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ಮಾಡಿದ್ದಾರೆಂದು ಕ್ಯಾಥೋಲಿಕ್‌ ಕ್ರೈಸ್ತರ ಸಂಘ ಆರೋಪಿಸಿದೆ. ಈ ಸಂಬಂಧ ಬೆಂಗಳೂರಿನಿಂದ ಅಖಿಲ ಕರ್ನಾಟಕ ಕ್ಯಾಥೊಲಿಕ್ ಕ್ರೈಸ್ತರ ಕನ್ನಡ ಸಂಘ ಹಾಗೂ ಮುಂಬೈನಿಂದ ವಿಡಿಯೋ ಮೂಲಕ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಎಫ್. ಸಾಲ್ಡಾನಾ ನಡೆಸಿದ ಸುದ್ದಿಗೋಷ್ಟಿಯಲ್ಲಿ ಈ ಆರೋಪ ಮಾಡಿದ್ದಾರೆ. ನಮ್ಮ ಧರ್ಮಗುರುಗಳ ವಿರುದ್ಧವೇ ನಮಗೆ ತುಂಬಾ ಬೇಸರವಾಗಿದೆ ಬೆಂಗಳೂರು ಆರ್ಚ್ ಬಿಷಪ್ ಡಾ. ಪೀಟರ್ […]

ಬೆಂಗಳೂರಿನ ಆರ್ಚ್‌‌ ಬಿಷಪ್‌ರಿಂದ ಬಡ ಮಕ್ಕಳ ಹೆಸರಿನಲ್ಲಿ 300 ಕೋಟಿ ರೂ. ಅಕ್ರಮ
Guru
| Edited By: |

Updated on:Aug 27, 2020 | 2:10 PM

Share

ಬೆಂಗಳೂರು: ಬಡ ಮಕ್ಕಳ ಏಳ್ಗೆಯ ಹೆಸರಿನಲ್ಲಿ ಬೆಂಗಳೂರಿನ ಆರ್ಚ್‌‌ ಬಿಷಪ್‌ ಡಾ. ಪೀಟರ್‌ ಮಚಾಡೋ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ಮಾಡಿದ್ದಾರೆಂದು ಕ್ಯಾಥೋಲಿಕ್‌ ಕ್ರೈಸ್ತರ ಸಂಘ ಆರೋಪಿಸಿದೆ.

ಈ ಸಂಬಂಧ ಬೆಂಗಳೂರಿನಿಂದ ಅಖಿಲ ಕರ್ನಾಟಕ ಕ್ಯಾಥೊಲಿಕ್ ಕ್ರೈಸ್ತರ ಕನ್ನಡ ಸಂಘ ಹಾಗೂ ಮುಂಬೈನಿಂದ ವಿಡಿಯೋ ಮೂಲಕ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಎಫ್. ಸಾಲ್ಡಾನಾ ನಡೆಸಿದ ಸುದ್ದಿಗೋಷ್ಟಿಯಲ್ಲಿ ಈ ಆರೋಪ ಮಾಡಿದ್ದಾರೆ.

ನಮ್ಮ ಧರ್ಮಗುರುಗಳ ವಿರುದ್ಧವೇ ನಮಗೆ ತುಂಬಾ ಬೇಸರವಾಗಿದೆ ಬೆಂಗಳೂರು ಆರ್ಚ್ ಬಿಷಪ್ ಡಾ. ಪೀಟರ್ ಮಾಚಾಡೋ ಆಶಾ ಎಂಬ ಎನ್‌ಜಿಓ ಮಾಡಿಕೊಂಡು ಬಡಮಕ್ಕಳ ಕಲ್ಯಾಣಕ್ಕಾಗಿ ಅಂತಾ ವಿದೇಶಗಳಿಂದ ಹಣ ತರಿಸ್ತಾರೆ. ಆದ್ರೆ ಹೀಗೆ ತರಿಸಿದ ಹಣದಿಂದ ಯಾವುದೇ ಬಡಮಕ್ಕಳಿಗೆ ಯಾವುದೇ ಸೌಲಭ್ಯ ಕೊಡುತ್ತಿಲ್ಲ. ಇದರಿಂದ ಬಡ ಮಕ್ಕಳಿಗೆ ಬಹಳ‌ ಅನ್ಯಾವಾಗಿದೆ. ಹೀಗೆ ವಿದೇಶಗಳಿಂದ ಬಂದ ಸುಮಾರು 300 ಕೋಟಿ ಹಣದ ಅವ್ಯವಹಾರ ಮಾಡಿದ್ದಾರೆಂದು ಆರೋಪ ಮಾಡಿದ್ದಾರೆ.

ಬಡ ಮಕ್ಕಳ‌ ಹೆಸರಿನಲ್ಲಿ ನಡೆಯುತ್ತಿರುವ ಕೋಟ್ಯಾಂತರ ರೂಪಾಯಿ ಅವ್ಯವಹಾರದಲ್ಲಿ ಕಳೆದ 15 ವರ್ಷಗಳಿಂದ ಆಶಾ ಟ್ರಸ್ಟ್‌ನಲ್ಲಿ ಕೆಲಸ ನಿರ್ವಹಿಸ್ತಿರೊ ಎಡ್ವರ್ಡ್ ಪಿಂಟೊ ಕೂಡಾ ಭಾಗಿಯಾಗಿದ್ದಾರೆ. ನಮ್ಮ ಧರ್ಮದಲ್ಲಿ ಅನ್ಯಾಯವಾಗ್ತಿದೆ ಅಂದ್ರೆ ಅದನ್ನು ಪ್ರಶ್ನಿಸುವುದು ನಮ್ಮ ಹಕ್ಕು. ಆರ್ಚ್ ಬಿಷಪ್ ಅವ್ಯವಹಾರದ‌ ಬಗ್ಗೆ ಲೆಕ್ಕ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನಮ್ಮ ಧರ್ಮಗುರುಗಳ ವಿರುದ್ಧವೇ ನಮಗೆ ತುಂಬಾ ಬೇಸರವಾಗಿದೆ. ಬಡ ಮಕ್ಕಳಿಗೆ ಸಿಗಬೇಕಾದ ವಿದ್ಯಾರ್ಜನೆ ಸಿಗಬೇಕು. ಅವ್ಯವಹಾರದ‌ ಬಗ್ಗೆ ಸರ್ಕಾರ ಕೂಡಲೆ ತನಿಖೆ ನಡೆಸಬೇಕು ಎಂದು ಅಖಿಲ ಕರ್ನಾಟಕ ಕ್ಯಾಥೊಲಿಕ್ ಕ್ರೈಸ್ತ ಸಂಘದ ಅಧ್ಯಕ್ಷ ರಫೈಲ್ ರಾಜ್ ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲ ರಫೈಲ್‌ ರಾಜ್‌ ಮತ್ತು ಇತರರು ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಂಬಂಧಿಸಿದ ದಾಖಲೆಗಳನ್ನು ಕೂಡಾ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ.

Published On - 2:09 pm, Thu, 27 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ