ಕೋವಿಡ್​ಗೆ ಡೋಂಟ್​ ಕೇರ್! ಭರ್ಜರಿಯಾಗಿ ಸಾಗಿದೆ ಜಾನುವಾರು ಸಂತೆ

ಕೊರೊನಾ ಭೀತಿಯ ನಡುವೆಯೂ ಹಾವೇರಿ ನಗರದಲ್ಲಿ ಇಂದು ಗುರುವಾರದ ಸಂತೆ ಭರ್ಜರಿಯಾಗಿ ನಡೆದಿದೆ. ನಗರದ ಎಪಿಎಂಸಿ ಆವರಣದಲ್ಲಿರೋ ಜಾನುವಾರು ಮಾರುಕಟ್ಟೆಯಲ್ಲಿ ಈ ಜಾನುವಾರು ಸಂತೆ ನಡೀತಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರವಿಲ್ಲದೆ ಜನದಟ್ಟಣೆಯಿಂದ ಕೂಡಿರೋ ಜಾನುವಾರು ಸಂತೆಯಲ್ಲಿ ಎತ್ತು, ಎಮ್ಮೆ, ಆಕಳು ಮತ್ತು ಕುರಿಗಳ ವ್ಯಾಪಾರ ಜೋರಾಗಿ ನಡೆದಿದೆ. ನಗರದಲ್ಲಿ ದೊಡ್ಡ ಪ್ರಮಾಣದ ಸಂತೆ ನಡೆಯುತ್ತಿದ್ರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ‌ ಕೊರೊನಾ ಕೇಸುಗಳು ಹೆಚ್ಚುತ್ತಿದ್ರೂ ಜಿಲ್ಲಾಡಳಿತದಿಂದ ನಿರ್ಲಕ್ಷ್ಯ ಚಿಂತೆಗೀಡುಮಾಡಿದೆ.

ಕೋವಿಡ್​ಗೆ ಡೋಂಟ್​ ಕೇರ್! ಭರ್ಜರಿಯಾಗಿ ಸಾಗಿದೆ ಜಾನುವಾರು ಸಂತೆ
ಸಾಧು ಶ್ರೀನಾಥ್​

Updated on: Jul 02, 2020 | 10:42 AM

ಕೊರೊನಾ ಭೀತಿಯ ನಡುವೆಯೂ ಹಾವೇರಿ ನಗರದಲ್ಲಿ ಇಂದು ಗುರುವಾರದ ಸಂತೆ ಭರ್ಜರಿಯಾಗಿ ನಡೆದಿದೆ. ನಗರದ ಎಪಿಎಂಸಿ ಆವರಣದಲ್ಲಿರೋ ಜಾನುವಾರು ಮಾರುಕಟ್ಟೆಯಲ್ಲಿ ಈ ಜಾನುವಾರು ಸಂತೆ ನಡೀತಿದೆ.

ಮಾಸ್ಕ್ ಧರಿಸದೆ, ದೈಹಿಕ ಅಂತರವಿಲ್ಲದೆ ಜನದಟ್ಟಣೆಯಿಂದ ಕೂಡಿರೋ ಜಾನುವಾರು ಸಂತೆಯಲ್ಲಿ ಎತ್ತು, ಎಮ್ಮೆ, ಆಕಳು ಮತ್ತು ಕುರಿಗಳ ವ್ಯಾಪಾರ ಜೋರಾಗಿ ನಡೆದಿದೆ. ನಗರದಲ್ಲಿ ದೊಡ್ಡ ಪ್ರಮಾಣದ ಸಂತೆ ನಡೆಯುತ್ತಿದ್ರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ‌ ಕೊರೊನಾ ಕೇಸುಗಳು ಹೆಚ್ಚುತ್ತಿದ್ರೂ ಜಿಲ್ಲಾಡಳಿತದಿಂದ ನಿರ್ಲಕ್ಷ್ಯ ಚಿಂತೆಗೀಡುಮಾಡಿದೆ.

Published On - 10:38 am, Thu, 2 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us