AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTO ಕಚೇರಿಗೂ ಸ್ಯಾಂಡಲ್‌ವುಡ್‌ ಡ್ರಗ್ಸ್‌ ನಂಟು? ಬಿರುಗಾಳಿ ಎಬ್ಬಿಸಿದ ಗುಮಾಸ್ತನ ವಿಚಾರಣೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್‌ ನಂಟು ವಿಚಾರ ಇಡೀ ಕನ್ನಡ ಚಲನಚಿತ್ರರಂಗವನ್ನೇ ಅಲ್ಲಾಡಿಸಿದ ಬೆನ್ನಲ್ಲೇ ಈಗ ಈ ನಂಟು ಆರ್‌ಟಿಓ ಡಿಪಾರ್ಟ್‌ಮೆಂಟ್‌ಗೂ ಹಬ್ಬಿದೆಯಾ ಎನ್ನೋ ಅನುಮಾನಗಳು ಶುರುವಾಗಿವೆ. ಇವತ್ತು ಜಯನಗರ ಆರ್‌ಟಿಓದಲ್ಲಿ ಕಾರ್ಯನಿರ್ವಹಿಸುವ ರವಿಶಂಕರ್‌ ಅನ್ನೋ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಎತ್ತಾಕಿಕೊಂಡು ಬಂದ ನಂತರ, ಆರ್‌ಟಿಓ ಕಚೇರಿಯಲ್ಲಿ ಅಲ್ಲೋಲಕಲ್ಲೋಲವಾಗಿದೆ. ಜಯನಗರ ಆರ್‌ಟಿಓದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿರೋ ರವಿಶಂಕರ್‌ ಕಚೇರಿಯಲ್ಲಿದ್ದಾಗಲೇ ಆತನನ್ನು ವಶಕ್ಕೆ ಪಡೆದಿರುವ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ರವಿಶಂಕರ್‌ನನ್ನು ಸಿಸಿಬಿ ಕರೆತಂದ ಬೆನ್ನಲ್ಲೇ ಜಯನಗರ ಆರ್‌ಟಿಓ […]

RTO ಕಚೇರಿಗೂ ಸ್ಯಾಂಡಲ್‌ವುಡ್‌ ಡ್ರಗ್ಸ್‌ ನಂಟು? ಬಿರುಗಾಳಿ ಎಬ್ಬಿಸಿದ ಗುಮಾಸ್ತನ ವಿಚಾರಣೆ
Guru
|

Updated on: Sep 02, 2020 | 11:26 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್‌ ನಂಟು ವಿಚಾರ ಇಡೀ ಕನ್ನಡ ಚಲನಚಿತ್ರರಂಗವನ್ನೇ ಅಲ್ಲಾಡಿಸಿದ ಬೆನ್ನಲ್ಲೇ ಈಗ ಈ ನಂಟು ಆರ್‌ಟಿಓ ಡಿಪಾರ್ಟ್‌ಮೆಂಟ್‌ಗೂ ಹಬ್ಬಿದೆಯಾ ಎನ್ನೋ ಅನುಮಾನಗಳು ಶುರುವಾಗಿವೆ.

ಇವತ್ತು ಜಯನಗರ ಆರ್‌ಟಿಓದಲ್ಲಿ ಕಾರ್ಯನಿರ್ವಹಿಸುವ ರವಿಶಂಕರ್‌ ಅನ್ನೋ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಎತ್ತಾಕಿಕೊಂಡು ಬಂದ ನಂತರ, ಆರ್‌ಟಿಓ ಕಚೇರಿಯಲ್ಲಿ ಅಲ್ಲೋಲಕಲ್ಲೋಲವಾಗಿದೆ. ಜಯನಗರ ಆರ್‌ಟಿಓದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿರೋ ರವಿಶಂಕರ್‌ ಕಚೇರಿಯಲ್ಲಿದ್ದಾಗಲೇ ಆತನನ್ನು ವಶಕ್ಕೆ ಪಡೆದಿರುವ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ರವಿಶಂಕರ್‌ನನ್ನು ಸಿಸಿಬಿ ಕರೆತಂದ ಬೆನ್ನಲ್ಲೇ ಜಯನಗರ ಆರ್‌ಟಿಓ ಹಿರಿಯ ಅಧಿಕಾರಿ ಗಾಯತ್ರಿದೇವಿ ಸಿಸಿಬಿ ಕಚೇರಿಗೆ ಭೇಟಿ ನೀಡಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ. ಹೀಗಾಗಿ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆಯಲ್ಲದೇ ಅನುಮಾನಗಳಿಗೂ ಎಡೆ ಮಾಡಿಕೊಟ್ಟಿದೆ. ಕೇವಲ ಒಬ್ಬ ದ್ವೀತಿಯ ದರ್ಜೆ ಗುಮಾಸ್ತನನ್ನು ವಶಕ್ಕೆ ಪಡೆದ ಮಾತ್ರಕ್ಕೆ ಹಿರಿಯ ಆರ್‌ಟಿಓ ಅಧಿಕಾರಿ ಸ್ವತಃ ಸಿಸಿಬಿ ಜಂಟಿ ಆಯುಕ್ತರನ್ನು ಭೇಟಿ ಮಾಡಿರೋದು ಹುಬ್ಬೇರುವಂತೆ ಮಾಡಿದೆ. ಭೇಟಿ ವೇಳೆ ಪ್ರಕರಣ ಸಂಬಂಧ ವಿಚಾರಣೆಗೆ ಕರೆ ತಂದಿದ್ದೇವೆ. ವಿಚಾರಣೆ ಬಳಿಕ ಮಾಹಿತಿ ನೀಡುವುದಾಗಿ ಗಾಯತ್ರಿ ದೇವಿ ಅವರಿಗೆ ಸಂದೀಪ್‌ ಪಾಟೀಲ್‌ ಹೇಳಿ ಕಳಿಸಿದ್ದಾರೆಂದು ಸಿಸಿಬಿ ಮೂಲಗಳು ತಿಳಿಸಿವೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು