AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTO ಕಚೇರಿಗೂ ಸ್ಯಾಂಡಲ್‌ವುಡ್‌ ಡ್ರಗ್ಸ್‌ ನಂಟು? ಬಿರುಗಾಳಿ ಎಬ್ಬಿಸಿದ ಗುಮಾಸ್ತನ ವಿಚಾರಣೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್‌ ನಂಟು ವಿಚಾರ ಇಡೀ ಕನ್ನಡ ಚಲನಚಿತ್ರರಂಗವನ್ನೇ ಅಲ್ಲಾಡಿಸಿದ ಬೆನ್ನಲ್ಲೇ ಈಗ ಈ ನಂಟು ಆರ್‌ಟಿಓ ಡಿಪಾರ್ಟ್‌ಮೆಂಟ್‌ಗೂ ಹಬ್ಬಿದೆಯಾ ಎನ್ನೋ ಅನುಮಾನಗಳು ಶುರುವಾಗಿವೆ. ಇವತ್ತು ಜಯನಗರ ಆರ್‌ಟಿಓದಲ್ಲಿ ಕಾರ್ಯನಿರ್ವಹಿಸುವ ರವಿಶಂಕರ್‌ ಅನ್ನೋ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಎತ್ತಾಕಿಕೊಂಡು ಬಂದ ನಂತರ, ಆರ್‌ಟಿಓ ಕಚೇರಿಯಲ್ಲಿ ಅಲ್ಲೋಲಕಲ್ಲೋಲವಾಗಿದೆ. ಜಯನಗರ ಆರ್‌ಟಿಓದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿರೋ ರವಿಶಂಕರ್‌ ಕಚೇರಿಯಲ್ಲಿದ್ದಾಗಲೇ ಆತನನ್ನು ವಶಕ್ಕೆ ಪಡೆದಿರುವ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ರವಿಶಂಕರ್‌ನನ್ನು ಸಿಸಿಬಿ ಕರೆತಂದ ಬೆನ್ನಲ್ಲೇ ಜಯನಗರ ಆರ್‌ಟಿಓ […]

RTO ಕಚೇರಿಗೂ ಸ್ಯಾಂಡಲ್‌ವುಡ್‌ ಡ್ರಗ್ಸ್‌ ನಂಟು? ಬಿರುಗಾಳಿ ಎಬ್ಬಿಸಿದ ಗುಮಾಸ್ತನ ವಿಚಾರಣೆ
Guru
|

Updated on: Sep 02, 2020 | 11:26 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್‌ ನಂಟು ವಿಚಾರ ಇಡೀ ಕನ್ನಡ ಚಲನಚಿತ್ರರಂಗವನ್ನೇ ಅಲ್ಲಾಡಿಸಿದ ಬೆನ್ನಲ್ಲೇ ಈಗ ಈ ನಂಟು ಆರ್‌ಟಿಓ ಡಿಪಾರ್ಟ್‌ಮೆಂಟ್‌ಗೂ ಹಬ್ಬಿದೆಯಾ ಎನ್ನೋ ಅನುಮಾನಗಳು ಶುರುವಾಗಿವೆ.

ಇವತ್ತು ಜಯನಗರ ಆರ್‌ಟಿಓದಲ್ಲಿ ಕಾರ್ಯನಿರ್ವಹಿಸುವ ರವಿಶಂಕರ್‌ ಅನ್ನೋ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಎತ್ತಾಕಿಕೊಂಡು ಬಂದ ನಂತರ, ಆರ್‌ಟಿಓ ಕಚೇರಿಯಲ್ಲಿ ಅಲ್ಲೋಲಕಲ್ಲೋಲವಾಗಿದೆ. ಜಯನಗರ ಆರ್‌ಟಿಓದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿರೋ ರವಿಶಂಕರ್‌ ಕಚೇರಿಯಲ್ಲಿದ್ದಾಗಲೇ ಆತನನ್ನು ವಶಕ್ಕೆ ಪಡೆದಿರುವ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ರವಿಶಂಕರ್‌ನನ್ನು ಸಿಸಿಬಿ ಕರೆತಂದ ಬೆನ್ನಲ್ಲೇ ಜಯನಗರ ಆರ್‌ಟಿಓ ಹಿರಿಯ ಅಧಿಕಾರಿ ಗಾಯತ್ರಿದೇವಿ ಸಿಸಿಬಿ ಕಚೇರಿಗೆ ಭೇಟಿ ನೀಡಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ. ಹೀಗಾಗಿ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆಯಲ್ಲದೇ ಅನುಮಾನಗಳಿಗೂ ಎಡೆ ಮಾಡಿಕೊಟ್ಟಿದೆ. ಕೇವಲ ಒಬ್ಬ ದ್ವೀತಿಯ ದರ್ಜೆ ಗುಮಾಸ್ತನನ್ನು ವಶಕ್ಕೆ ಪಡೆದ ಮಾತ್ರಕ್ಕೆ ಹಿರಿಯ ಆರ್‌ಟಿಓ ಅಧಿಕಾರಿ ಸ್ವತಃ ಸಿಸಿಬಿ ಜಂಟಿ ಆಯುಕ್ತರನ್ನು ಭೇಟಿ ಮಾಡಿರೋದು ಹುಬ್ಬೇರುವಂತೆ ಮಾಡಿದೆ. ಭೇಟಿ ವೇಳೆ ಪ್ರಕರಣ ಸಂಬಂಧ ವಿಚಾರಣೆಗೆ ಕರೆ ತಂದಿದ್ದೇವೆ. ವಿಚಾರಣೆ ಬಳಿಕ ಮಾಹಿತಿ ನೀಡುವುದಾಗಿ ಗಾಯತ್ರಿ ದೇವಿ ಅವರಿಗೆ ಸಂದೀಪ್‌ ಪಾಟೀಲ್‌ ಹೇಳಿ ಕಳಿಸಿದ್ದಾರೆಂದು ಸಿಸಿಬಿ ಮೂಲಗಳು ತಿಳಿಸಿವೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?