AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾ”ಕಿಂಗ್” ಶ್ರೀಕಿ ಬಳಿ ಇದ್ದ ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ.. ಬಯಲಾಯ್ತು ಮತ್ತಷ್ಟು ಕೃತ್ಯ

ಶ್ರೀಕಿ ಬಳಿ ಇದ್ದ ಸುಮಾರು ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಬಿಟ್ ಕಾಯಿನ್ ವಶಕ್ಕೆ ಪಡೆಯಲಾಗಿದೆ.

ಹ್ಯಾಕಿಂಗ್ ಶ್ರೀಕಿ ಬಳಿ ಇದ್ದ ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ.. ಬಯಲಾಯ್ತು ಮತ್ತಷ್ಟು ಕೃತ್ಯ
ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ
ಆಯೇಷಾ ಬಾನು
|

Updated on: Jan 15, 2021 | 8:07 AM

Share

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಅರೆಸ್ಟ್​ ಆಗಿರುವ ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ ಸಿಸಿಬಿ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ಮತ್ತಷ್ಟು ವೆಬ್​ಸೈಟ್​ಗಳ ಹ್ಯಾಕ್​ಗೆ ಪ್ಲ್ಯಾನ್​ ಮಾಡಿದ್ದೇ ಎಂದು ಕೃತ್ಯದ ವಿವರಣೆ ನೀಡಿದ್ದಾನೆ.

ಸಿಸಿಬಿ ಪೊಲೀಸರು ಶ್ರೀಕಿಯನ್ನು ಡ್ರಗ್ಸ್​ಕೇಸ್​ನಲ್ಲಿ ಬಂಧಿಸಿದ್ದರು. ತನಿಖೆ ವೇಳೆ ಆತ ಹಲವು ವೆಬ್ ಸೈಟ್ ಹ್ಯಾಕಿಂಗ್ ಮಾಡುತ್ತಿದ್ದ ವಿಚಾರ ಬಯಲಾಗಿತ್ತು. ವಿದೇಶಿ ಆ್ಯಪ್ ಸೇರಿದಂತೆ ಸರ್ಕಾರಿ ಆ್ಯಪ್ ಸಹ ಶ್ರೀಕಿ ಹ್ಯಾಕ್ ಮಾಡ್ತಿದ್ದ. ಕೇಸ್ ಸಂಬಂಧ ಸಿಸಿಬಿ, ಶ್ರೀಕಿ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿತ್ತು. ಈಗ ತನಿಖೆ ವೇಳೆ ಮತ್ತಷ್ಟು ಮಾಹಿತಿ ಬಯಲಾಗಿದೆ. ಈತ ಅಂತಾರಾಷ್ಟ್ರೀಯ ವೆಬ್​​ಸೈಟ್​, ಪೋಕರ್​ ಗೇಮ್​ ಹಾಗೂ ಕ್ರಿಪ್ಟೋ ಕರೆನ್ಸಿಗಳಾದ ಬಿಟ್​ ಕಾಯಿನ್, ವೈಎಫ್​ಐ, ಇಥೆರಿಯಂ ಖಾತೆಗಳನ್ನು ಹ್ಯಾಕ್ ಮಾಡಿದ್ದ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಅಲ್ಲದೆ ಶ್ರೀಕಿ ಬಳಿ ಇದ್ದ ಸುಮಾರು ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಬಿಟ್ ಕಾಯಿನ್ ವಶಕ್ಕೆ ಪಡೆಯಲಾಗಿದೆ. ಇನ್ನು ಸುನೀಷ್ ಶೆಟ್ಟಿ, ಪ್ರಸಿದ್ ಶೆಟ್ಟಿ, ಸುಜಯ ಶ್ರೀಕಿ ಮುಖಾಂತರ ಹ್ಯಾಕ್ ಮಾಡಿಸುತಿದ್ರು. ಬಳಿಕ ಬಿಟ್ ಕಾಯಿನ್ ಟ್ರೇಡರ್ಸ್​ಗೆ ಮಾರಾಟ ಮಾಡುತ್ತಿದ್ರು. ಮಾರಟದಿಂದ ಬಂದ ಹಣ ಹಾಗೂ ಹವಾಲ ಹಣ ಪಡೆದು ವಿದೇಶದಿಂದ ಗಾಂಜಾ ತರಿಸಿಕೊಂಡು ಮೋಜು ಮಸ್ತಿ, ಐಶಾರಾಮಿ ಜೀವನ ನಡೆಸುತ್ತಿದ್ರು.

ಸಿಸಿಬಿ ವಿಚಾರಣೆ ವೇಳೆ ಬಯಲಾಯ್ತು ಹ್ಯಾ”ಕಿಂಗ್” ಶ್ರೀಕಿಯ ಮತ್ತೊಂದು ಕೋಡ್..

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ