AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ CD ಪ್ರಕರಣ: ಅಜ್ಜಿ ಆರೊಗ್ಯದಲ್ಲಿ ಏರುಪೇರು, ವಿಜಯಪುರಕ್ಕೆ ತೆರಳಿದ ಸಿಡಿ ಸಂತ್ರಸ್ಥೆಯ ಪೋಷಕರು

ಈಗಾಲಲೇ ನಾವು ಸಾಕಷ್ಟು ಕುಗ್ಗಿ ಹೋಗಿದ್ದೇವೆ. ನಮ್ಮ ಅತ್ತೆಯವರ ಅನಾರೋಗ್ಯ ವಿಚಾರವಾಗಿ ಮತ್ತಷ್ಟು ನೊಂದಿದ್ದೇವೆ. ನಾವು ಮತ್ತಷ್ಟು ಮಾನಸಿಕ ಹಿಂಸೆ ಅನುಭವಿಸಲು ಸಿದ್ದರಿಲ್ಲಾ, ಮನಸ್ಸು ಸರಿಯಲ್ಲಾ.

ರಮೇಶ್ ಜಾರಕಿಹೊಳಿ CD ಪ್ರಕರಣ: ಅಜ್ಜಿ ಆರೊಗ್ಯದಲ್ಲಿ ಏರುಪೇರು, ವಿಜಯಪುರಕ್ಕೆ ತೆರಳಿದ ಸಿಡಿ ಸಂತ್ರಸ್ಥೆಯ ಪೋಷಕರು
ಸಿಡಿ ಯುವತಿಯ ಕುಟುಂಬಸ್ಥರು
ಪೃಥ್ವಿಶಂಕರ
|

Updated on:Apr 01, 2021 | 12:40 PM

Share

ವಿಜಯಪುರ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ CD ಬಹಿರಂಗ ಕೇಸ್ ಪ್ರಕರಣಕ್ಕೆ ಸಂಬಂಧಿಸಿರುವ ಸಂತ್ರಸ್ಥೆಯ ಅಜ್ಜಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಿಂದಾಗಿ ಯುವತಿಯ ಪೋಷಕರು ಬೆಳಗಾವಿಯಿಂದ ವಿಜಯಪುರ ಜಿಲ್ಲೆಯ ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಈ ಬಗ್ಗೆ ಟಿವಿ9 ಬಳಿ ಮಾತಾನಾಡಿದ ಸಿಡಿಯಲ್ಲಿರುವ ಯುವತಿಯ ತಂದೆ, ಈಗಾಲಲೇ ನಾವು ಸಾಕಷ್ಟು ಕುಗ್ಗಿ ಹೋಗಿದ್ದೇವೆ. ನಮ್ಮ ಅತ್ತೆಯವರ ಅನಾರೋಗ್ಯ ವಿಚಾರವಾಗಿ ಮತ್ತಷ್ಟು ನೊಂದಿದ್ದೇವೆ. ನಾವು ಮತ್ತಷ್ಟು ಮಾನಸಿಕ ಹಿಂಸೆ ಅನುಭವಿಸಲು ಸಿದ್ದರಿಲ್ಲಾ, ಮನಸ್ಸು ಸರಿಯಲ್ಲಾ. ನಾವು ಇಲ್ಲಿ ನೆಮ್ಮದಿಯಿಂದ ಇರಲು ಅನಕೂಲ ಮಾಡಿಕೊಡಬೇಕೆಂದು‌ ಜನರಿಗೆ ಹಾಗೂ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ. ನಮ್ಮ ಅತ್ತೆ ಆರೋಗ್ಯ ಹಾಗೂ ಚಿಕಿತ್ಸೆ ಕುರಿತು ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಯುವತಿಯ ತಂದೆ ಹೇಳಿಕೆ ನೀಡಿದ್ದಾರೆ.

ಸಧ್ಯ ನಾವೆಲ್ಲಾ ಇಲ್ಲಿಯೇ ಉಳಿದುಕೊಂಡು ನಮ್ಮ ಅತ್ತೆಯವರನ್ನು ನೋಡಿಕೊಳ್ಳುತ್ತೇವೆ. ಇಲ್ಲಿ ನಾವು ಯಾವುದೇ ಒತ್ತಡದಿಂದ ಬಂದಿಲ್ಲ. ಘಟನೆಯ ಕುರಿತು ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಹೆಚ್ಚಿಗೆ ಹೇಳಲು ಇಷ್ಟ ಪಡಲ್ಲಾ ಸದ್ಯ ತನಿಖೆ ನಡೆಯುತ್ತಿದೆ. ಮುಂದೆ ದೇವರು ಏನೇನು ಬುದ್ದಿ ಕೊಡುತ್ತಾನೋ, ಏನೇನು ದಾರಿ ತೋರಿಸುತ್ತಾನೋ ನೋಡೋಣವೆಂದು ಯುವತಿ ತಂದೆ ಹೇಳಿದ್ದಾರೆ.

ಎಸ್ಐಟಿ‌ ತನಿಖೆ ಸರಿಯಾದ ದಿಕ್ಕಿನಲ್ಲಿ ಹೋಗುತ್ತಿದೆ ಡಿಕೆಶಿ ವಿರುದ್ಧ ಮಾಡಿರುವ ಆರೋಪದ ಕುರಿತು ಎಸ್ಐಟಿ ತನಿಖಾಧಿಕಾರಿಗಳಿಗೆ ರೆಕಾರ್ಡಿಂಗ್ ಹಾಗೂ ಇತರೆ ಮಾಹಿತಿ ನೀಡಿದ್ದೇವೆ. ಮುಂದೆ ಏನಾಗತ್ತೋ ಎಂದು‌ ನೋಡೋಣ. ನಮ್ಮ ಮಗಳಿಗೆ ಈಗಾಗಲೇ ಮನೆಗೆ ಬರುವಂತೆ ಮನವಿ ಮಾಡಿಕೊಂಡಿದ್ದೇವೆ. ನಮ್ಮ ಮಗಳ ಭೇಟಿಗೆ ಅವಕಾಶ‌ ನೀಡಬೇಕೆಂದು ಪತ್ರ ನೀಡಿದ್ದೇವೆ. ತನಿಖೆಗಾಗಿ ಅಧಿಕಾರಿಗಳು ಮಗಳ ಭೇಟಿಗೆ ಅವಕಾಶ ನೀಡಿ ಯಾವಾಗ ಕರೆಯುತ್ತಾರೋ ಆಗ ಹೋಗುತ್ತೇವೆ ಎಂದು ಯುವತಿ ತಂದೆ ಹೇಳಿದರು.

ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್ಐಟಿ ವಿಚಾರಣೆ ವೇಳೆ ಸಂತ್ರಸ್ಥೆ ಕಣ್ಣೀರು..! ಇಂದು ಸ್ಥಳ ಮಹಜರು ಸಾಧ್ಯತೆ

Published On - 9:46 am, Thu, 1 April 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?