ವಾಟ್ಸ್​ಆ್ಯಪ್​ ಹೂಡಿದ ಮೊಕದ್ದಮೆಗೆ ಕೇಂದ್ರ ಸರ್ಕಾರದ ಉತ್ತರ; ಬಳಕೆದಾರರಿಗೆ ತೊಂದರೆ ಕೊಡೋದಿಲ್ಲವೆಂದು ಹೇಳಿಕೆ ಬಿಡುಗಡೆ

ಕೇಂದ್ರಸರ್ಕಾರದ ಹೊಸ ಡಿಜಿಟಲ್​ ನಿಯಮಗಳು ಇಂದಿನಿಂದ ಜಾರಿಗೆ ಬರಲಿದೆ. ಆದರೆ ಈ ನಿಯಮಗಳು ನಮ್ಮ ಬಳಕೆದಾರರ ಗೌಪ್ಯತೆಯನ್ನು ಮುರಿಯುವಂತಿದೆ ಎಂದು ಆರೋಪಿಸಿ ವಾಟ್ಸ್​ಆ್ಯಪ್​ ದೆಹಲಿ ಹೈಕೋರ್ಟ್​ನಲ್ಲಿ ಕೇಸ್​ ದಾಖಲಿಸಿತ್ತು.

ವಾಟ್ಸ್​ಆ್ಯಪ್​ ಹೂಡಿದ ಮೊಕದ್ದಮೆಗೆ ಕೇಂದ್ರ ಸರ್ಕಾರದ ಉತ್ತರ; ಬಳಕೆದಾರರಿಗೆ ತೊಂದರೆ ಕೊಡೋದಿಲ್ಲವೆಂದು ಹೇಳಿಕೆ ಬಿಡುಗಡೆ
ವಾಟ್ಸ್​​ಆ್ಯಪ್​
Follow us
|

Updated on: May 26, 2021 | 8:54 PM

ಕೇಂದ್ರ ಸರ್ಕಾರದ ಹೊಸ ಐಟಿ ನಿಯಮ (ಮಾಹಿತಿ-ತಂತ್ರಜ್ಞಾನ ನಿಯಮ)ಗಳ ವಿರುದ್ಧ ವಾಟ್ಸ್​ಆ್ಯಪ್​ ಹೂಡಿರುವ ಮೊಕದ್ದಮೆಗೆ ತಂತ್ರಜ್ಞಾನ ಸಚಿವಾಲಯ ಉತ್ತರ ನೀಡಿದ್ದು, ವಾಟ್ಸ್​ಆ್ಯಪ್​ ಸಂಸ್ಥೆಯ ಎದುರು ಭಾರತ ಪ್ರಸ್ತಾಪ ಮಾಡಿರುವ ಯಾವುದೇ ಕ್ರಮಗಳು ಅದರ ಬಳಕೆದಾರರ ಮೇಲೆ ಪರಿಣಾಮ ಬೀರುವಂಥದ್ದಲ್ಲ ಹಾಗೂ ವಾಟ್ಸ್​ಆ್ಯಪ್​​ ಈಗಿರುವ ಸಹಜ ಕಾರ್ಯಚಟುವಟಿಕೆ ಮೇಲೆಯೂ ಪ್ರಭಾವ ಬೀರುವುದಿಲ್ಲ ಎಂದು ಹೇಳಿದೆ. ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಗೌಪ್ಯತೆ ದೃಷ್ಟಿಯಿಂದ ರೂಪಿಸಿರುವ ನಿಯಮಗಳನ್ನು ನಾವು ಗೌರವಿಸುತ್ತೇವೆ. ಅದನ್ನು ಉಲ್ಲಂಘಿಸುವ ಆಶಯ ನಮಗಿಲ್ಲ ಎಂದು ಹೇಳಿದೆ. ಹಾಗೇ, ಭಾರತದ ಸಮಗ್ರತೆ, ಯಾವುದೇ ರಾಜ್ಯಗಳ ಭದ್ರತೆ, ವಿದೇಶಗಳೊಂದಿಗಿನ ಸ್ನೇಹಕ್ಕೆ ಸಂಬಂಧಪಟ್ಟ ಅಪರಾಧಗಳು ನಡೆದಾಗ, ಅತ್ಯಾಚಾರ, ಲೈಂಗಿಕ ದೌರ್ಜನ್ಯದಂಥಹ ಪ್ರಕರಣಗಳು ನಡೆದಾಗ ವಾಟ್ಸ್​ಆ್ಯಪ್​ ಮೆಸೇಜ್​ಗಳಿಗೆ ಸಂಬಂಧಪಟ್ಟ ತನಿಖೆಯೂ ನಡೆಯುತ್ತದೆ. ಆ ಸಂದರ್ಭದಲ್ಲಿ ವಾಟ್ಸ್​ಆ್ಯಪ್​ ನಿರ್ದಿಷ್ಟ ಸಂದೇಶದ ಮೂಲವನ್ನು ಬಹಿರಂಗಪಡಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರಸರ್ಕಾರದ ಹೊಸ ಡಿಜಿಟಲ್​ ನಿಯಮಗಳು ಇಂದಿನಿಂದ ಜಾರಿಗೆ ಬರಲಿದೆ. ಆದರೆ ಈ ನಿಯಮಗಳು ನಮ್ಮ ಬಳಕೆದಾರರ ಗೌಪ್ಯತೆಯನ್ನು ಮುರಿಯುವಂತಿದೆ ಎಂದು ಆರೋಪಿಸಿ ವಾಟ್ಸ್​ಆ್ಯಪ್​ ದೆಹಲಿ ಹೈಕೋರ್ಟ್​ನಲ್ಲಿ ಕೇಸ್​ ದಾಖಲಿಸಿತ್ತು. ಅದಕ್ಕೆ ಉತ್ತರಿಸಿರುವ ಕೇಂದ್ರ ಸರ್ಕಾರ ಈ ಮೇಲಿನ ಸ್ಪಷ್ಟನೆಯನ್ನು ನೀಡಿದೆ. ವಾಟ್ಸ್​ಆ್ಯಪ್​ ಬಳಕೆದಾರರ ಗೌಪ್ಯತೆಗೆ ಪ್ರಾಮುಖ್ಯತೆ ನೀಡುವಷ್ಟೇ, ರಾಷ್ಟ್ರೀಯ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗೂ ಪ್ರಾಮುಖ್ಯತೆ ಕೊಡುವುದು ನಮ್ಮ ಜವಾಬ್ದಾರಿಯಾಗಿದೆ. ಆದರೆ ವಾಟ್ಸ್​​ಆ್ಯಪ್​ ಹೊಸ ನಿಯಮಗಳನ್ನು ಅನುಸರಿಸಲು ನಿರಾಕರಣೆ ಮಾಡುತ್ತಿರುವುದು ದುರದೃಷ್ಟ. ನಮ್ಮ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ನಿಮ್ಮ ವಾಟ್ಸ್​ಆ್ಯಪ್​ ಖಾತೆ ಡಿಲೀಟ್​ ಆಗಲಿದೆ; ಪೈರಸಿ ಸಿನಿಮಾ ಲಿಂಕ್​ ಕಳಿಸುವವರಿಗೆ ಛಾಟಿ ಬೀಸಿದ ಹೈಕೋರ್ಟ್

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್