AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸ್​ಆ್ಯಪ್​ ಹೂಡಿದ ಮೊಕದ್ದಮೆಗೆ ಕೇಂದ್ರ ಸರ್ಕಾರದ ಉತ್ತರ; ಬಳಕೆದಾರರಿಗೆ ತೊಂದರೆ ಕೊಡೋದಿಲ್ಲವೆಂದು ಹೇಳಿಕೆ ಬಿಡುಗಡೆ

ಕೇಂದ್ರಸರ್ಕಾರದ ಹೊಸ ಡಿಜಿಟಲ್​ ನಿಯಮಗಳು ಇಂದಿನಿಂದ ಜಾರಿಗೆ ಬರಲಿದೆ. ಆದರೆ ಈ ನಿಯಮಗಳು ನಮ್ಮ ಬಳಕೆದಾರರ ಗೌಪ್ಯತೆಯನ್ನು ಮುರಿಯುವಂತಿದೆ ಎಂದು ಆರೋಪಿಸಿ ವಾಟ್ಸ್​ಆ್ಯಪ್​ ದೆಹಲಿ ಹೈಕೋರ್ಟ್​ನಲ್ಲಿ ಕೇಸ್​ ದಾಖಲಿಸಿತ್ತು.

ವಾಟ್ಸ್​ಆ್ಯಪ್​ ಹೂಡಿದ ಮೊಕದ್ದಮೆಗೆ ಕೇಂದ್ರ ಸರ್ಕಾರದ ಉತ್ತರ; ಬಳಕೆದಾರರಿಗೆ ತೊಂದರೆ ಕೊಡೋದಿಲ್ಲವೆಂದು ಹೇಳಿಕೆ ಬಿಡುಗಡೆ
ವಾಟ್ಸ್​​ಆ್ಯಪ್​
Lakshmi Hegde
|

Updated on: May 26, 2021 | 8:54 PM

Share

ಕೇಂದ್ರ ಸರ್ಕಾರದ ಹೊಸ ಐಟಿ ನಿಯಮ (ಮಾಹಿತಿ-ತಂತ್ರಜ್ಞಾನ ನಿಯಮ)ಗಳ ವಿರುದ್ಧ ವಾಟ್ಸ್​ಆ್ಯಪ್​ ಹೂಡಿರುವ ಮೊಕದ್ದಮೆಗೆ ತಂತ್ರಜ್ಞಾನ ಸಚಿವಾಲಯ ಉತ್ತರ ನೀಡಿದ್ದು, ವಾಟ್ಸ್​ಆ್ಯಪ್​ ಸಂಸ್ಥೆಯ ಎದುರು ಭಾರತ ಪ್ರಸ್ತಾಪ ಮಾಡಿರುವ ಯಾವುದೇ ಕ್ರಮಗಳು ಅದರ ಬಳಕೆದಾರರ ಮೇಲೆ ಪರಿಣಾಮ ಬೀರುವಂಥದ್ದಲ್ಲ ಹಾಗೂ ವಾಟ್ಸ್​ಆ್ಯಪ್​​ ಈಗಿರುವ ಸಹಜ ಕಾರ್ಯಚಟುವಟಿಕೆ ಮೇಲೆಯೂ ಪ್ರಭಾವ ಬೀರುವುದಿಲ್ಲ ಎಂದು ಹೇಳಿದೆ. ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಗೌಪ್ಯತೆ ದೃಷ್ಟಿಯಿಂದ ರೂಪಿಸಿರುವ ನಿಯಮಗಳನ್ನು ನಾವು ಗೌರವಿಸುತ್ತೇವೆ. ಅದನ್ನು ಉಲ್ಲಂಘಿಸುವ ಆಶಯ ನಮಗಿಲ್ಲ ಎಂದು ಹೇಳಿದೆ. ಹಾಗೇ, ಭಾರತದ ಸಮಗ್ರತೆ, ಯಾವುದೇ ರಾಜ್ಯಗಳ ಭದ್ರತೆ, ವಿದೇಶಗಳೊಂದಿಗಿನ ಸ್ನೇಹಕ್ಕೆ ಸಂಬಂಧಪಟ್ಟ ಅಪರಾಧಗಳು ನಡೆದಾಗ, ಅತ್ಯಾಚಾರ, ಲೈಂಗಿಕ ದೌರ್ಜನ್ಯದಂಥಹ ಪ್ರಕರಣಗಳು ನಡೆದಾಗ ವಾಟ್ಸ್​ಆ್ಯಪ್​ ಮೆಸೇಜ್​ಗಳಿಗೆ ಸಂಬಂಧಪಟ್ಟ ತನಿಖೆಯೂ ನಡೆಯುತ್ತದೆ. ಆ ಸಂದರ್ಭದಲ್ಲಿ ವಾಟ್ಸ್​ಆ್ಯಪ್​ ನಿರ್ದಿಷ್ಟ ಸಂದೇಶದ ಮೂಲವನ್ನು ಬಹಿರಂಗಪಡಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರಸರ್ಕಾರದ ಹೊಸ ಡಿಜಿಟಲ್​ ನಿಯಮಗಳು ಇಂದಿನಿಂದ ಜಾರಿಗೆ ಬರಲಿದೆ. ಆದರೆ ಈ ನಿಯಮಗಳು ನಮ್ಮ ಬಳಕೆದಾರರ ಗೌಪ್ಯತೆಯನ್ನು ಮುರಿಯುವಂತಿದೆ ಎಂದು ಆರೋಪಿಸಿ ವಾಟ್ಸ್​ಆ್ಯಪ್​ ದೆಹಲಿ ಹೈಕೋರ್ಟ್​ನಲ್ಲಿ ಕೇಸ್​ ದಾಖಲಿಸಿತ್ತು. ಅದಕ್ಕೆ ಉತ್ತರಿಸಿರುವ ಕೇಂದ್ರ ಸರ್ಕಾರ ಈ ಮೇಲಿನ ಸ್ಪಷ್ಟನೆಯನ್ನು ನೀಡಿದೆ. ವಾಟ್ಸ್​ಆ್ಯಪ್​ ಬಳಕೆದಾರರ ಗೌಪ್ಯತೆಗೆ ಪ್ರಾಮುಖ್ಯತೆ ನೀಡುವಷ್ಟೇ, ರಾಷ್ಟ್ರೀಯ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗೂ ಪ್ರಾಮುಖ್ಯತೆ ಕೊಡುವುದು ನಮ್ಮ ಜವಾಬ್ದಾರಿಯಾಗಿದೆ. ಆದರೆ ವಾಟ್ಸ್​​ಆ್ಯಪ್​ ಹೊಸ ನಿಯಮಗಳನ್ನು ಅನುಸರಿಸಲು ನಿರಾಕರಣೆ ಮಾಡುತ್ತಿರುವುದು ದುರದೃಷ್ಟ. ನಮ್ಮ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ನಿಮ್ಮ ವಾಟ್ಸ್​ಆ್ಯಪ್​ ಖಾತೆ ಡಿಲೀಟ್​ ಆಗಲಿದೆ; ಪೈರಸಿ ಸಿನಿಮಾ ಲಿಂಕ್​ ಕಳಿಸುವವರಿಗೆ ಛಾಟಿ ಬೀಸಿದ ಹೈಕೋರ್ಟ್

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!