Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸ್​ಆ್ಯಪ್​ ಹೂಡಿದ ಮೊಕದ್ದಮೆಗೆ ಕೇಂದ್ರ ಸರ್ಕಾರದ ಉತ್ತರ; ಬಳಕೆದಾರರಿಗೆ ತೊಂದರೆ ಕೊಡೋದಿಲ್ಲವೆಂದು ಹೇಳಿಕೆ ಬಿಡುಗಡೆ

ಕೇಂದ್ರಸರ್ಕಾರದ ಹೊಸ ಡಿಜಿಟಲ್​ ನಿಯಮಗಳು ಇಂದಿನಿಂದ ಜಾರಿಗೆ ಬರಲಿದೆ. ಆದರೆ ಈ ನಿಯಮಗಳು ನಮ್ಮ ಬಳಕೆದಾರರ ಗೌಪ್ಯತೆಯನ್ನು ಮುರಿಯುವಂತಿದೆ ಎಂದು ಆರೋಪಿಸಿ ವಾಟ್ಸ್​ಆ್ಯಪ್​ ದೆಹಲಿ ಹೈಕೋರ್ಟ್​ನಲ್ಲಿ ಕೇಸ್​ ದಾಖಲಿಸಿತ್ತು.

ವಾಟ್ಸ್​ಆ್ಯಪ್​ ಹೂಡಿದ ಮೊಕದ್ದಮೆಗೆ ಕೇಂದ್ರ ಸರ್ಕಾರದ ಉತ್ತರ; ಬಳಕೆದಾರರಿಗೆ ತೊಂದರೆ ಕೊಡೋದಿಲ್ಲವೆಂದು ಹೇಳಿಕೆ ಬಿಡುಗಡೆ
ವಾಟ್ಸ್​​ಆ್ಯಪ್​
Follow us
Lakshmi Hegde
|

Updated on: May 26, 2021 | 8:54 PM

ಕೇಂದ್ರ ಸರ್ಕಾರದ ಹೊಸ ಐಟಿ ನಿಯಮ (ಮಾಹಿತಿ-ತಂತ್ರಜ್ಞಾನ ನಿಯಮ)ಗಳ ವಿರುದ್ಧ ವಾಟ್ಸ್​ಆ್ಯಪ್​ ಹೂಡಿರುವ ಮೊಕದ್ದಮೆಗೆ ತಂತ್ರಜ್ಞಾನ ಸಚಿವಾಲಯ ಉತ್ತರ ನೀಡಿದ್ದು, ವಾಟ್ಸ್​ಆ್ಯಪ್​ ಸಂಸ್ಥೆಯ ಎದುರು ಭಾರತ ಪ್ರಸ್ತಾಪ ಮಾಡಿರುವ ಯಾವುದೇ ಕ್ರಮಗಳು ಅದರ ಬಳಕೆದಾರರ ಮೇಲೆ ಪರಿಣಾಮ ಬೀರುವಂಥದ್ದಲ್ಲ ಹಾಗೂ ವಾಟ್ಸ್​ಆ್ಯಪ್​​ ಈಗಿರುವ ಸಹಜ ಕಾರ್ಯಚಟುವಟಿಕೆ ಮೇಲೆಯೂ ಪ್ರಭಾವ ಬೀರುವುದಿಲ್ಲ ಎಂದು ಹೇಳಿದೆ. ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಗೌಪ್ಯತೆ ದೃಷ್ಟಿಯಿಂದ ರೂಪಿಸಿರುವ ನಿಯಮಗಳನ್ನು ನಾವು ಗೌರವಿಸುತ್ತೇವೆ. ಅದನ್ನು ಉಲ್ಲಂಘಿಸುವ ಆಶಯ ನಮಗಿಲ್ಲ ಎಂದು ಹೇಳಿದೆ. ಹಾಗೇ, ಭಾರತದ ಸಮಗ್ರತೆ, ಯಾವುದೇ ರಾಜ್ಯಗಳ ಭದ್ರತೆ, ವಿದೇಶಗಳೊಂದಿಗಿನ ಸ್ನೇಹಕ್ಕೆ ಸಂಬಂಧಪಟ್ಟ ಅಪರಾಧಗಳು ನಡೆದಾಗ, ಅತ್ಯಾಚಾರ, ಲೈಂಗಿಕ ದೌರ್ಜನ್ಯದಂಥಹ ಪ್ರಕರಣಗಳು ನಡೆದಾಗ ವಾಟ್ಸ್​ಆ್ಯಪ್​ ಮೆಸೇಜ್​ಗಳಿಗೆ ಸಂಬಂಧಪಟ್ಟ ತನಿಖೆಯೂ ನಡೆಯುತ್ತದೆ. ಆ ಸಂದರ್ಭದಲ್ಲಿ ವಾಟ್ಸ್​ಆ್ಯಪ್​ ನಿರ್ದಿಷ್ಟ ಸಂದೇಶದ ಮೂಲವನ್ನು ಬಹಿರಂಗಪಡಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರಸರ್ಕಾರದ ಹೊಸ ಡಿಜಿಟಲ್​ ನಿಯಮಗಳು ಇಂದಿನಿಂದ ಜಾರಿಗೆ ಬರಲಿದೆ. ಆದರೆ ಈ ನಿಯಮಗಳು ನಮ್ಮ ಬಳಕೆದಾರರ ಗೌಪ್ಯತೆಯನ್ನು ಮುರಿಯುವಂತಿದೆ ಎಂದು ಆರೋಪಿಸಿ ವಾಟ್ಸ್​ಆ್ಯಪ್​ ದೆಹಲಿ ಹೈಕೋರ್ಟ್​ನಲ್ಲಿ ಕೇಸ್​ ದಾಖಲಿಸಿತ್ತು. ಅದಕ್ಕೆ ಉತ್ತರಿಸಿರುವ ಕೇಂದ್ರ ಸರ್ಕಾರ ಈ ಮೇಲಿನ ಸ್ಪಷ್ಟನೆಯನ್ನು ನೀಡಿದೆ. ವಾಟ್ಸ್​ಆ್ಯಪ್​ ಬಳಕೆದಾರರ ಗೌಪ್ಯತೆಗೆ ಪ್ರಾಮುಖ್ಯತೆ ನೀಡುವಷ್ಟೇ, ರಾಷ್ಟ್ರೀಯ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗೂ ಪ್ರಾಮುಖ್ಯತೆ ಕೊಡುವುದು ನಮ್ಮ ಜವಾಬ್ದಾರಿಯಾಗಿದೆ. ಆದರೆ ವಾಟ್ಸ್​​ಆ್ಯಪ್​ ಹೊಸ ನಿಯಮಗಳನ್ನು ಅನುಸರಿಸಲು ನಿರಾಕರಣೆ ಮಾಡುತ್ತಿರುವುದು ದುರದೃಷ್ಟ. ನಮ್ಮ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ನಿಮ್ಮ ವಾಟ್ಸ್​ಆ್ಯಪ್​ ಖಾತೆ ಡಿಲೀಟ್​ ಆಗಲಿದೆ; ಪೈರಸಿ ಸಿನಿಮಾ ಲಿಂಕ್​ ಕಳಿಸುವವರಿಗೆ ಛಾಟಿ ಬೀಸಿದ ಹೈಕೋರ್ಟ್

ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ