AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನದಲ್ಲಿ 141 ಸೋಂಕಿತರು ಗುಣಮುಖ: ವೈದ್ಯರ ಚಿಕಿತ್ಸೆ ಜೊತೆಗೆ ಬೆರಗಾಗುವ ಕಾರಣವೂ ಇದೆ!

ದಾವಣಗೆರೆ: ಈಗ ಜಗತ್ತಿನಲ್ಲಿ ಕೊರೊನಾ ಸೋಂಕಿಗೆ ಔಷಧಿ ಕಂಡು ಹಿಡಿದಿಲ್ಲ. ಇದಕ್ಕಾಗಿ ವೈದ್ಯ ಲೋಕ ಹಗಲು ರಾತ್ರಿ ಪರಿಶ್ರಮ ಪಡುತ್ತಿದೆ. ನಿತ್ಯ ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ. ಲಕ್ಷಾಂತರ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇಡೀ ಜಗತ್ತೇ ತತ್ತರವಾಗುತ್ತಿದೆ. ಇದೇ ವಾತಾವರಣದಲ್ಲಿ ಸೋಂಕು ತಗುಲಿಸಿಕೊಂಡ ಲಕ್ಷಾಂತರ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆ ಹೋಗುತ್ತಿದ್ದಾರೆ. ನಿಜಕ್ಕೂ ಇದಕ್ಕೆ ಉತ್ತರ ಹುಡುಕುವುದೇ ಕಷ್ಟ. ಆದ್ರೆ ದಾವಣಗೆರೆ ಜಿಲ್ಲೆಯಲ್ಲಿ ಇಂತಹ ಪ್ರಶ್ನೆಗೆ ತಕ್ಕ ಮಟ್ಟಿನ ಹಾಗೂ ಸತ್ಯಕ್ಕೆ ಸಮೀಪ ಇರುವ ಉತ್ತರ ಸಿಕ್ಕಿದೆ. ದಾವಣಗೆರೆಯಲ್ಲಿ […]

10 ದಿನದಲ್ಲಿ 141 ಸೋಂಕಿತರು ಗುಣಮುಖ: ವೈದ್ಯರ ಚಿಕಿತ್ಸೆ ಜೊತೆಗೆ ಬೆರಗಾಗುವ ಕಾರಣವೂ ಇದೆ!
ಆಯೇಷಾ ಬಾನು
ಆಯೇಷಾ ಬಾನು|

Updated on:Jun 05, 2020 | 3:11 PM

Share

ದಾವಣಗೆರೆ: ಈಗ ಜಗತ್ತಿನಲ್ಲಿ ಕೊರೊನಾ ಸೋಂಕಿಗೆ ಔಷಧಿ ಕಂಡು ಹಿಡಿದಿಲ್ಲ. ಇದಕ್ಕಾಗಿ ವೈದ್ಯ ಲೋಕ ಹಗಲು ರಾತ್ರಿ ಪರಿಶ್ರಮ ಪಡುತ್ತಿದೆ. ನಿತ್ಯ ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ. ಲಕ್ಷಾಂತರ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇಡೀ ಜಗತ್ತೇ ತತ್ತರವಾಗುತ್ತಿದೆ.

ಇದೇ ವಾತಾವರಣದಲ್ಲಿ ಸೋಂಕು ತಗುಲಿಸಿಕೊಂಡ ಲಕ್ಷಾಂತರ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆ ಹೋಗುತ್ತಿದ್ದಾರೆ. ನಿಜಕ್ಕೂ ಇದಕ್ಕೆ ಉತ್ತರ ಹುಡುಕುವುದೇ ಕಷ್ಟ. ಆದ್ರೆ ದಾವಣಗೆರೆ ಜಿಲ್ಲೆಯಲ್ಲಿ ಇಂತಹ ಪ್ರಶ್ನೆಗೆ ತಕ್ಕ ಮಟ್ಟಿನ ಹಾಗೂ ಸತ್ಯಕ್ಕೆ ಸಮೀಪ ಇರುವ ಉತ್ತರ ಸಿಕ್ಕಿದೆ.

ದಾವಣಗೆರೆಯಲ್ಲಿ ಕೇವಲ ಹತ್ತು ದಿನಗಳಲ್ಲಿ ಬರೋಬರಿ 141 ಜನ ಜನರು ಗುಣಮುಖರಾಗಿ ಮನೆಗೆ ಹೋಗಿದ್ದಾರೆ. ಇವರಲ್ಲಿ 80 ವರ್ಷದ ವೃದ್ಧ ಹಾಗೂ ಎಂಟು ತಿಂಗಳ ಮಗು ಸಹ ಸೇರಿದ್ದಾರೆ. ಚಿಕಿತ್ಸೆಯ ಜೊತೆಗೆ ಸೋಂಕಿತರಿಗೆ ಅಗತ್ಯವಿರುವ ವಿಟಮಿನ್​ಗಳ ಪೂರೈಕೆಗೆ ಆದ್ಯತೆ ನೀಡಲಾಗಿತ್ತು.

ಮೈಸೂರಿನ ಸಿಎಫ್​ಟಿಆರ್​ಐ ನಿಂದ ಮಿಟಮಿನ್ ಸಿ ಹಾಗೂ ಜಿಂಕ್ ಇರುವ ಮ್ಯಾಂಗೋ ಬಾರ್, ಗ್ರೀನ್ ಚಿಕ್ಕಿ ಹಾಗೂ ಸಮುದ್ರದ ಪಾಚಿಯಿಂದ ಸಿದ್ದ ಪಡಿಸಿದ ಕೆಲ ಪದಾರ್ಥಗಳನ್ನ ತರಿಸಿ ಕೊಟ್ಟಿದೆ. ಹೀಗಾಗಿ ನಿರೀಕ್ಷೆಗೂ ಮೀರಿ ಇಲ್ಲಿನ ಸೋಂಕಿತರು ಚೇತರಿಸಿಕೊಂಡರು ಅಂದ್ರೆ ತಪ್ಪಾಗಲಿಕ್ಕಿಲ್ಲ.

ನಿರಂತರವಾಗಿ ವೈದ್ಯರಿಂದ ಚಿಕಿತ್ಸೆ ಹಾಗೂ ಔಷಧಿ ನೀಡಲಾಗುತ್ತದೆ. ಇವುಗಳ ಜೊತೆಗೆ ಇಂತಹ ದೇಹಕ್ಕೆ ಅಗತ್ಯ ಇರುವ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳನ್ನ ಪೂರೈಕೆ ಮಾಡಿದ್ದು ಒಂದು ಉತ್ತಮ ಬೆಳವಣಿಗೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Published On - 7:50 am, Fri, 5 June 20

Follow Us
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ